ಹೊಳಲ್ಕೆರೆ ತಾಲೂಕಿನ ಕಣಿವೆ ಮುರಾರ್ಜಿ ಶಾಲೆಯಲ್ಲಿ ವಿಷಪೂರಿತ ಆಹಾರ ಸೇವನೆ ಯಿಂದ ಅಸ್ವಸ್ಥರಾದ ಮಕ್ಕಳನ್ನು ಹೊಳಲ್ಕೆರೆ ಯ ಕಾಂಗ್ರೆಸ್ ಮುಖಂಡರಾದ ರಘು ಅವರು ಆಸ್ಪತ್ರೆಗೆ ಭೇಟಿ ಮಾಡಿ ಮಕ್ಕಳ ಆರೋಗ್ಯ ವಿಚಾರಿಸಿ ಅವರಿಗೆ ಹಣ್ಣು ಬ್ರೆಡ್ ವಿತರಿಸಿದರು.
ಹಾಸ್ಟೆಲ್ ವಾರ್ಡನ್ ಮತ್ತು ಅಡುಗೆ ಸಿಬ್ಬಂದಿ ಜೊತೆಗೆ ಮಾತನಾಡಿ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡುವಂತೆ ತಿಳಿಸಿದರು.ಆಸ್ಪತ್ರೆಯ ಆರೋಗ್ಯಾಧಿಕಾರಿಗಳು ಜೊತೆ ಮಾತನಾಡಿ ಮಕ್ಕಳಿಗೆ ಉತ್ತಮ ಚಿಕಿತ್ಸೆ ನೀಡಿ ಬೇಗ ಚೇತರಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು