ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಾತ್ರ ಮುಖ್ಯವಾಗಿದೆ

ಆರೋಗ್ಯ

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರಅತ್ಯಂತ ಮುಖ್ಯವಾಗಿದೆ :ಮಾಜಿ ಸಚಿವ ಸುಧಾಕರ್
ಹಿರಿಯೂರು : ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರ ಅತ್ಯಂತ ಮುಖ್ಯವಾಗಿದ್ದು, ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತಗಳು ದೇಶಕ್ಕೆ ಮಾದರಿಯಾಗಿದೆ, ಈ ನಿಟ್ಟಿನಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂಬುದಾಗಿ ಮಾಜಿ ಸಚಿವರಾದ ಡಿ.ಸುಧಾಕರ್ ಹೇಳಿದರು.
ತಾಲ್ಲೂಕಿನ ಸೂರಗೊಂಡನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ 75ನೇ ಸ್ವಾತಂತ್ರ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಅಮೃತ ಮಹೋತ್ಸವ ನಡಿಗೆ ಕಾರ್ಯಕ್ರಮದ 3ನೇ ದಿನದ ಪಾದಯಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

 

 

 


ಈ ಪಾದಯಾತ್ರೆಯಲ್ಲಿ ತಾಲ್ಲೂಕಿನ ವಿವಿಧ ಹಳ್ಳಿಗಳಿಂದ ಬಂದ ಎಲ್ಲ ಜಾತಿ ಸಮುದಾಯಗಳ ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಸಚಿವರಾದ ಸುಧಾಕರ್ ರವರ ಜೊತೆ ಹೆಜ್ಜೆ ಹಾಕಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Leave a Reply

Your email address will not be published. Required fields are marked *