ಚಿತ್ರದುರ್ಗ ನಗರದ ವಿವಿಧ ತರಗತಿಗಳ ಬಾಲಕ ಬಾಲಕಿಯರ ಹಾಸ್ಟೆಲ್ ಮುಂದೆ ಗಿಡ ನೆಡುವ ಮೂಲಕ ಜಿಲ್ಲಾ ಅಧಿಕಾರಿ ಮತ್ತು ಸಿಇಓ ಹಾಗೂ ವಲಯಾರಣ್ಯಾಧಿಕಾರಿ ಹಾಗೂ ನಿಲಯದ ವಿದ್ಯಾರ್ಥಿ ಹಾಗೂ ಸಿಬ್ಬಂದಿ ಸಹಯೋಗದೊಂದಿಗೆ ಮೂರನೆ ದಿನದ ದೇವರಾಜ್ ಅರಸ್ ಜಯಂತಿಯನ್ನು ಉದ್ಘಾಟಿಸಿದರು. ತಾರಾಸು ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಅರಣ್ಯದ ಮಹತ್ವದ ಬಗ್ಗೆ ಉಪನ್ಯಾಸ ನೀಡಿದ್ದರು ನಂತರ ಜೆಸಿ ವೆಂಕಟೇಶಯ್ಯ ಜಿಲ್ಲಾ ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಚಿತ್ರದುರ್ಗ ಹಾಗೂ ವೆಂಕಟರಾಜು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ಭಾಗವಹಿಸಿದ್ದರು,ಇದೇ ವೇಳೆ 22 ನಿಮಿಷದ ಶ್ರೀ ದೇವರಾಜ್ ಅರಸುರವರ ಕಿರು ಚಿತ್ರ ಪ್ರದರ್ಶನ ಮಾಡಿದರು. ನಂತರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ನಂತರ ವಸ್ತು ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳ ವೀಕ್ಷಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಮುಕ್ತಾಯ ಹಾಡಲಾಯಿತು.