ದಾವಣಗೆರೆ: ನಾಳೆ ನಡೆಯಲಿರುವ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದ್ದು, ಬೃಹತ್ ವೇದಿಕೆಯನ್ನು ನಿರ್ಮಿಸಲಾಗುತ್ತಿದ್ದು, ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಹೆಚ್.ಆಂಜನೇಯ ಭೇಟಿ ನೀಡಿ ಪರಿಶೀಲಿಸಿದರು.
ಇದೇ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನ ರಾಹುಲ್ ಗಾಂಧಿ ಕೂಡ ಆಗಮಿಸಲಿದ್ದಾರೆ. ಹುಬ್ಬಳ್ಳಿಗೆ ಬಂದಿಳಿದಿರುವ. ರಾಹುಲ್ ಗಾಂದಿ ನಾಳೆ ಬೆಳಗ್ಗೆ 11 .20 ಕ್ಕೆ ಚಿತ್ರದುರ್ಗ ದ ಮುರುಘಾ ಮಠಕ್ಕೆ ಆಗಮಿಸಿ ಮುರುಘಾ ಶರಣರನ್ನು ಭೇಟಿ ಮಾಡಲಿದ್ದಾರೆ. ನಂತರ 11.50 ಮುರುಘಾ ಮಠದಿಂದ ನೇರವಾಗಿ ಸಿರಿಗೆರೆ ಮಠಕ್ಕೂ ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ