Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಸಿನೆಮಾ»ಗಂಧದ ಗುಡಿ ಚಿತ್ರದ ಹೊಸ ಪೋಸ್ಟರ್ ರಿಲೀಸ್
ಸಿನೆಮಾ

ಗಂಧದ ಗುಡಿ ಚಿತ್ರದ ಹೊಸ ಪೋಸ್ಟರ್ ರಿಲೀಸ್

D KumaraswamyBy D KumaraswamyAugust 31, 2022Updated:August 31, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಗಣೇಶ ಹಬ್ಬದಂದು ಗಂಧದ ಗುಡಿ ಚಿತ್ರದ ಹೊಸ ಪೋಸ್ಟರ್ ರಿಲೀಸ್; ಸಿನಿಮಾ ಬಿಡುಗಡೆ ದಿನಾಂಕವೂ ಫಿಕ್ಸ್ ಆಗಿದೆ!!!

ಗಣೇಶ ಹಬ್ಬದ ದಿನ ಆನೆಯ ಮುಂದೆ ಪವರ್‌ಸ್ಟಾರ್ ನಿಂತಿರೋ ಫೋಟೊವನ್ನು ಪಿಆರ್‌ಕೆ ಸಂಸ್ಥೆ ರಿಲೀಸ್ ಮಾಡಿದೆ. ಗಂಧದ ಗುಡಿಯ ಈ ಪೋಸ್ಟರ್ ಅಪ್ಪು ಅಭಿಮಾನಿಗಳ ಖುಷಿಯನ್ನು ಮತ್ತಷ್ಟು ಹೆಚ್ಚಿಸಿದೆ.ಗಣೇಶ ಚತುರ್ಥಿಯಂದು ಪುನೀತ್​ ರಾಜ್​ ಕುಮಾರ್ ಅಭಿಮಾನಿಗಳಿಗೆ ಶುಭ ಸಮಾಚಾರ ನೀಡಲಾಗಿದೆ. ಪವರ್ ಸ್ಟಾರ್​ ಪುನೀತ್​ ರಾಜ್​ಕುಮಾರ್ ಅವರ ಕೊನೆಯ ಚಿತ್ರ ಗಂಧದ ಗುಡಿ, ಈ ಚಿತ್ರ ನೋಡಲು ಇಡೀ ಕರುನಾಡೇ ಕಾದು ಕುಳಿತಿದೆ. ಪುನೀತ್ ನೆನಪಲ್ಲಿ ಹಬ್ಬ ಆಚರಿಸುತ್ತಿರೋ ಅಭಿಮಾನಿಗಳಿಗಾಗಿ ಹಬ್ಬದ ಉಡುಗೊರೆಯಾಗಿ ಕೊಟ್ಟಿರೋ ಚಿತ್ರ ತಂಡ ಗಂಧದ ಗುಡಿ ಹೊಸ ಪೋಸ್ಟರ್ ಬಿಡುಗಡೆ ಜೊತೆಗೆ ಚಿತ್ರದ ರಿಲೀಸ್​ ದಿನಾಂಕವನ್ನು ಸಹ ಘೋಷಣೆ ಮಾಡಿದೆ. ಅಕ್ಟೋಬರ್​ 28ರಂದು ಗಂಧದ ಗುಡಿ ಚಿತ್ರ ತೆರೆಮೇಲೆ ಬರಲಿದೆ ಎಂದು ಘೋಷಣೆ ಮಾಡಲಾಗಿದೆ.
ಅಪ್ಪು ನೆನಪಲ್ಲಿ ಗಣೇಶ ಚತುರ್ಥಿ
ನಾಡಿನಲ್ಲಿ ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದ್ದು, ಎಲ್ಲೆಲ್ಲೂ ಗಣೇಶನ ಮೂರ್ತಿಗಳನ್ನು ಇಟ್ಟು ಪೂಜೆ ಮಾಡೋದು ಸಾಮಾನ್ಯ, ಈ ವರ್ಷ ಪುನೀತ್​ ರಾಜ್​ ಕುಮಾರ್ ಅವರನ್ನು ಕಳೆದುಕೊಂಡ ದುಃಖದಲ್ಲಿರೋ ಅಭಿಮಾನಿಗಳು ವಿಭಿನ್ನ ರೀತಿಯಲ್ಲಿ ಪವರ್​​ ಸ್ಟಾರ್​ರನ್ನು ನೆನಪು ಮಾಡಿಕೊಳ್ತಿದ್ದಾರೆ. ಅಪ್ಪು ಪ್ರತಿಮೆ ಇರೋ ಗಣೇಶನ ಮೂರ್ತಿಗಳನ್ನು ತಂದು ಪೂಜೆ ಮಾಡಿ ಗೌರವ ಸಲ್ಲಿಸುತ್ತಾರೆ.
ಗಂಧದ ಗುಡಿ ಹೊಸ ಪೋಸ್ಟರ್ ರಿಲೀಸ್
ಮತ್ತೊಂದೆಡೆ ಟ್ವಿಟರ್​ನಲ್ಲಿ ಗಣೇಶ ಚತುರ್ಥಿ ಹಿನ್ನೆಲೆ ಪುನೀತ್ ಚತುರ್ಥಿ ಟ್ರೆಂಡ್​ ಶುರುವಾಗಿದೆ. ಇದೇ ವೇಳೆ ಪಿಆರ್‌ಕೆ ಪ್ರೊಡೆಕ್ಷನ್​ ಗಂಧದ ಗುಡಿ ಹೊಸ ಪೋಸ್ಟರ್ ರಿಲೀಸ್ ಮಾಡೋ ಮೂಲಕ ಅಭಿಮಾನಿಗಳ ಸಂಭ್ರಮವನ್ನು ದುಪ್ಪಟ್ಟು ಮಾಡಿದೆ.
ಅಪ್ಪು ಕನಸು ನನಸು ಮಾಡ್ತಿರೋ ಅಶ್ವಿನಿ

 

 

ಪವರ್‌ಸ್ಟಾರ್ ಕನಸಿನ ಪ್ರಾಜೆಕ್ಟ್ ಗಂಧದ ಗುಡಿ, ಅವರದ್ದೇ ಪಿಆರ್‌ಕೆ ಸಂಸ್ಥೆ ಈ ಸಿನಿಮಾವನ್ನು ನಿರ್ಮಾಣ ಮಾಡುವುದಕ್ಕೆ ಮುಂದಾಗಿತ್ತು. ಆದರೆ, ಈ ಸಿನಿಮಾವನ್ನು ನೋಡುವ ಮೊದಲೇ ಅಪ್ಪು ಅಗಲಿದ್ದಾರೆ. ಇದರ ಸಂಪೂರ್ಣ ಹೊಣೆಯನ್ನು ಅಶ್ವಿನಿ ಪುನೀತ್​ ರಾಜ್​ಕುಮಾರ್ ಹೊತ್ತಿದ್ದು. ಅಪ್ಪು ಕನಸನ್ನು ನನಸು ಮಾಡಲು ಮುಂದಾಗಿದ್ದಾರೆ. ಆನೆಯ ಮುಂದೆ ಪವರ್‌ಸ್ಟಾರ್ ನಿಂತಿರೋ ಫೋಟೊವನ್ನು ಪಿಆರ್‌ಕೆ ಸಂಸ್ಥೆ ರಿಲೀಸ್ ಮಾಡಿದೆ. ಗಂಧದ ಗುಡಿಯ ಈ ಪೋಸ್ಟರ್ ಅಪ್ಪು ಅಭಿಮಾನಿಗಳ ಖುಷಿಯನ್ನು ಮತ್ತಷ್ಟು ಹೆಚ್ಚಿಸಿದೆ.
ಅಕ್ಟೋಬರ್​ 28ಕ್ಕೆ ಚಿತ್ರ ರಿಲೀಸ್​
ಗಂಧದ ಗುಡಿ ಸಿನಿಮಾ ಅಕ್ಟೋಬರ್ 28ಕ್ಕೆ ರಿಲೀಸ್ ಆಗಲಿದೆ. ಈಗಾಗಲೇ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಈ ಸಿನಿಮಾದ ರಿಲೀಸ್ ಡೇಟ್ ಕೂಡ ಘೋಷಣೆ ಮಾಡಿದ್ದಾರೆ. ಇದೇ ಅಕ್ಟೋಬರ್ 29ಕ್ಕೆ ಪುನೀತ್ ರಾಜ್‌ಕುಮಾರ್ ಅವರು ಅಭಿಮಾನಿಗಳನ್ನು ಅಗಲಿ ಒಂದು ವರ್ಷ ಆಗಲಿದೆ. ಅದಕ್ಕೂ ಒಂದು ದಿನ ಮೊದಲೇ ಪವರ್‌ಸ್ಟಾರ್ ಅಭಿಮಾನಿಗಳಿಗೆ, ಸಿನಿಪ್ರಿಯರಿಗೆ ಗಂಧದ ಗುಡಿ ಮೂಲಕ ಪುನೀತ್​ ರಾಜ್​ಕುಮಾರ್​ ತೆರೆಮೇಲೆ ಕಾಣಿಸಿಕೊಳ್ಳಲಿದ್ದಾರೆ.
ಪುನೀತ್ ರಾಜ್​ಕುಮಾರ್ ಅತಿಥಿ ಪಾತ್ರ ಮಾಡಿದ ‘ಲಕ್ಕಿ ಮ್ಯಾನ್​’ ಸಿನಿಮಾ ಆಗಸ್ಟ್ ತಿಂಗಳಲ್ಲಿ ತೆರೆಗೆ ಬರಲಿದೆ. ಹೀಗಾಗಿ ಅವರ ಕೊನೆಯ ಚಿತ್ರ ಎಂದರೆ ‘ಗಂಧದ ಗುಡಿ’. ಪುನೀತ್​ ರಾಜ್​ಕುಮಾರ್ ನಿಧನ ಹೊಂದಿದ ದಿನಾಂಕಕ್ಕಿಂತ ಒಂದು ದಿನ ಮೊದಲು ರಿಲೀಸ್​ ಆಗುತ್ತಿದೆ.

 

Share. Facebook Twitter Pinterest LinkedIn Tumblr WhatsApp Email
Previous Articleಬಸವರಾಜನ್ ವಿರುದ್ಧ ಪ್ರಕರಣ :ಸ್ಥಳ ಪರಿಶೀಲನೆ ಮಾಡಿದ ಅಧಿಕಾರಿಗಳು
Next Article ಮುರುಘಾಶ್ರಿಗಳಿಗೆ ಮತ್ತೊಂದು ಸಂಕಷ್ಟ ಎದುರು ಎಸ್ಪಿಗೆ ನೋಟೀಸ್ ಜಾರಿ
D Kumaraswamy
  • Tumblr

Related Posts

ಕಟ್ಟಾಲನ್ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾಗಿ ಕಾಲಿವುಡ್ ಗೆ ಹಾರಿದ ಅಜನೀಶ್ ಲೋಕನಾಥ್

May 23, 2025

ಕೋಟೆ ನಾಡಿಗೆ ಎಂಟ್ರಿ ಕೊಟ್ಟ ಉಗ್ರಂ ಖ್ಯಾತಿಯ ಶ್ರೀ ಮುರುಳಿ

March 12, 2024

ಹಿರಿಯ ನಟಿ ಲೀಲಾವತಿ ಗೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

December 8, 2023

ಹಿರಿಯ ನಟಿ ಲೀಲಾವತಿ ಅವರ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ: ಸಿಎಂ ಸಿದ್ದರಾಮಯ್ಯ

December 3, 2023
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.