ಮುರುಘಾ ಮಠದ ವಿದ್ಯಾರ್ಥಿ ವಸತಿ ನಿಲಯದ ವಿದ್ಯಾರ್ಥಿನಿಯರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಠಾಣೆ ಪೊಲೀಸರು ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಹಾಗೂ ಮಾಜಿ ಶಾಸಕ ಎಸ್ ಕೆ ಬಸವರಾಜನ್ ಸೇರಿದಂತೆ ನಾಲ್ಕು ಜನರನ್ನು ಬಂಧಿಸಿದ್ದಾರೆ.
ಗ್ರಾಮಾಂತರ ಠಾಣೆಯಲ್ಲಿ ಕಳೆದ ಒಂದು ವಾರದ ಹಿಂದೆ 484/ 2022 ರ ಅಡಿಯಲ್ಲಿ ಸೆ. 384,120b, 266 ಮತ್ತು 420 ಅನ್ವಯ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ನಾಲ್ಕು ಜನರನ್ನು ಬಂಧಿಸಿದ್ದಾರೆ. ಬೆಳಗಿನಿಂದಲೂ ವಿಚಾರಣೆ ನಡೆಯುತ್ತಿದ್ದು, ಇದರ ಜೊತೆಗೆ ಜಿಲ್ಲಾ ಪಂಚಾಯಿತಿ ಮಹಿಳಾ ಸಿಬ್ಬಂದಿಯೊಬ್ಬರನ್ನು ಕೂಡ ಪೊಲೀಸರು ಕರೆದುಕೊಂಡು ಬಂದಿದ್ದು, ಮಹಿಳೆಯು ತಮ್ಮ ಮನೆಯನ್ನು ಅಪ್ರಾಪ್ತ ಬಾಲಕಿಯರಿಗೆ ಲೀಸ್ ಗೆ ಕೊಟ್ಟಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್ ವಿಚಾರಣೆ ಮುಂದುವರೆಸಿದ್ದಾರೆ.