Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜಕೀಯ»ಕಾಂಗ್ರೆಸ್ ಪಾದಯಾತ್ರೆ ಯಾವ ರೀತಿ ಮಾಡಬೇಕು?
ರಾಜಕೀಯ

ಕಾಂಗ್ರೆಸ್ ಪಾದಯಾತ್ರೆ ಯಾವ ರೀತಿ ಮಾಡಬೇಕು?

D KumaraswamyBy D KumaraswamyJuly 17, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಿತ್ರದುರ್ಗ: ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ಜಿಲ್ಲೆಯಲ್ಲಿ 75 ಕಿ.ಮೀ.ಪಾದಯಾತ್ರೆ ನಡೆಸಿ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರು ಹಾಗೂ ಉಸ್ತುವಾರಿಗಳಾದ ಕೆ.ಎನ್.ರಾಜಣ್ಣ ಮುಖಂಡರು ಹಾಗೂ ಕಾರ್ಯಕರ್ತರುಗಳಲ್ಲಿ ಮನವಿ ಮಾಡಿದರು.
ಜಿಲ್ಲೆಯಲ್ಲಿ 75 ಕಿ.ಮೀ.ಪಾದಯಾತ್ರೆ, ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ ಪಾದಯಾತ್ರೆ ಹಾಗೂ ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75 ನೇ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಎ.ಐ.ಸಿ.ಸಿ. ಆದೇಶದಂತೆ ಆ.15 ರಂದು ಬೆಂಗಳೂರಿನಲ್ಲಿ ರಾಷ್ಟ್ರಧ್ವಜ ಹಿಡಿದು ಒಂದು ಲಕ್ಷ ಕಾರ್ಯಕರ್ತರು ಸೇರಿ ಪಾದಯಾತ್ರೆ ಮಾಡಲಿದ್ದೇವೆ. ಎಲ್ಲಿಯೂ ಲೋಪವಾಗದಂತೆ ಎಚ್ಚರಿಕೆಯಿಂದ ಮಾಡಬೇಕು. ಇದೊಂದು ಚುನಾವಣಾ ಪೂರ್ವ ತಯಾರಿ ರೀತಿಯಲ್ಲಿ ನಡೆಯಬೇಕು. ಆಗ ಮಾತ್ರ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಸಾಧ್ಯ. ಅಸೂಯೆ ಪಟ್ಟುಕೊಂಡು ಪಕ್ಷ ಹಾಳು ಮಾಡಬೇಡಿ. ಕಾಂಗ್ರೆಸ್ ಪಕ್ಷದ ಗತವೈಭವ ಮರುಕಳಿಸುವ ರೀತಿಯಲ್ಲಿ ಜಿಲ್ಲೆಯಲ್ಲಿ 75 ಕಿ.ಮೀ.ಪಾದಯಾತ್ರೆಯಾಗಬೇಕು. ಅದಕ್ಕಾಗಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಿ ಎಂದು ಸೂಚಿಸಿದರು.
ಎಲ್ಲಾ ಜಾತಿಯವರಿಗೆ ಸಾಮಾಜಿಕ ನ್ಯಾಯ ಕೊಡುವ ಪಕ್ಷ ನಮ್ಮದು. ಅದಕ್ಕಾಗಿ ನಗರದ 35 ವಾರ್ಡ್‍ಗಳಿಗೆ ಭೇಟಿ ನೀಡಿ ನಗರಸಭೆ ಚುನಾವಣೆಯಲ್ಲಿ ಗೆದ್ದವರು ಹಾಗೂ ಸೋತವರನ್ನು ಭೇಟಿ ಮಾಡಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು. ಸ್ವಾತಂತ್ರ್ಯೋತ್ಸವ ಪಾದಯಾತ್ರೆಯಲ್ಲಿ ಬಿಜೆಪಿ.ದುರಾಡಳಿತವನ್ನು ಜನರಿಗೆ ಮನವರಿಕೆ ಮಾಡಿ ಕಾಂಗ್ರೆಸ್ ಪಕ್ಷದ ಕೊಡುಗೆ ಮತ್ತು ಸಾಧನೆಗಳನ್ನು ಪ್ರತಿ ಕ್ಷೇತ್ರ, ಗ್ರಾಮ ಪಂಚಾಯಿತಿ, ಹೋಬಳಿ, ತಾಲ್ಲೂಕು ಮಟ್ಟ, ಜಿಲ್ಲಾ ಮಟ್ಟದಲ್ಲಿ ತಿಳಿಸಿ. ರಾಜ್ಯ ಸರ್ಕಾರದ ಜಿ.ಎಸ್.ಟಿ.ಪಾಲನ್ನು ಕಬಳಿಸಿ ದೇಶವನ್ನು ದಿವಾಳಿ ಮಾಡುತ್ತ ಹಿಂದುತ್ವದ ಹೆಸರೇಳಿಕೊಂಡು ಓಟು ಪಡೆಯುತ್ತಿರುವ ಪ್ರಧಾನಿ ಮೋದಿಯದು ಗೋಡ್ಸೆ ಹಿಂದುತ್ವ. ನಮ್ಮದು ಗಾಂಧಿ ಹಿಂದುತ್ವ ಎನ್ನುವುದನ್ನು ತಿಳಿಸಬೇಕಿದೆ ಎಂದು ಹೇಳಿದರು.

 

 

ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯಾಗಿ ಒಂದು ಗಂಟೆಯೊಳಗೆ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದರು. ಬಿಜೆಪಿ.ಯವರು ಸುಳ್ಳು ಹೇಳಿ ಹೇಳಿ ಸತ್ಯ ಮಾಡುತ್ತಿದ್ದಾರೆ. ಕಾಂಗ್ರೆಸ್‍ನವರು ಇರುವ ಸತ್ಯವನ್ನು ಧೈರ್ಯವಾಗಿ ಹೇಳಿಕೊಳ್ಳುವ ಮನಸ್ಥಿತಿ ಬೆಳೆಸಿಕೊಳ್ಳಬೇಕು. ದಲಿತ ವಿರೋಧಿ, ಮೀಸಲಾತಿ ವಿರೋಧಿಯಾಗಿರುವ ಕೋಮುವಾದಿ ಬಿಜೆಪಿ.ಸರ್ಕಾರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳದೆ ಹೊರಗುತ್ತಿಗೆ ಮೇಲೆ ನೇಮಕಾತಿ ಮಾಡಿಕೊಳ್ಳುತ್ತ ಮೀಸಲಾತಿಗೆ ಕತ್ತರಿ ಹಾಕುತ್ತಿದೆ. ಬಡವರು, ರೈತರ ಪರವಾಗಿರುವ ಕಾಂಗ್ರೆಸ್ ಪಕ್ಷ ಶಿಕ್ಷಣಕ್ಕೆ ಒತ್ತು ಕೊಟ್ಟಿದೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಕಾಂಗ್ರೆಸ್‍ಗೆ ಅನೇಕ ಪೂರ್ವಜರ ತ್ಯಾಗ ಬಲಿದಾನವಿದೆ ಎನ್ನುವುದನ್ನು ಹೊಸ ಪೀಳಿಗೆಗೆ ತಿಳಿಸುವ ಜವಾಬ್ದಾರಿ ಮುಖಂಡರುಗಳು ಹಾಗೂ ಕಾರ್ಯಕರ್ತರುಗಳ ಮೇಲಿರುವುದರಿಂದ ಸ್ವಾತಂತ್ರ್ಯೋತ್ಸವ ಪಾದಯಾತ್ರೆಯನ್ನು ಯಶಸ್ವಿಗೊಳಿಸುವಂತೆ ವಿನಂತಿಸಿದರು

Share. Facebook Twitter Pinterest LinkedIn Tumblr WhatsApp Email
Previous Articleಪಡಿತರ ಅಕ್ಕಿ ಹೇಗೆ ಮೆಕ್ಕೆ ಜೋಳ ಆಯ್ತು‌ ?
Next Article ಸ್ವಾಮೀಜಿ ಹಾಗೂ ಇಬ್ಬರು ಶಾಸಕರಿಗೆ ಕೊಲೆ ಬೆದರಿಕೆ ಪ್ರಕರಣ, ಆರೋಪಿ ಬಂಧನ..!
D Kumaraswamy
  • Tumblr

Related Posts

ಜಾತಿಪ್ರಮಾಣ ಪತ್ರ ವಿತರಣೆಗೆ ಇದ್ದ ಅಡ್ಡಿ ಆತಂಕ ದೂರ; ತಂತ್ರಾಂಶ ಕಾರ್ಯಾರಂಭ : ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ

November 12, 2025

ಪ್ರಧಾನಿ ಮೋದಿಯವರದ್ದು ಕಳಂಕರಹಿತ ರಾಜಕಾರಣ: ಛಲವಾದಿ ನಾರಾಯಣಸ್ವಾಮಿ

June 12, 2025

ಬಿಜೆಪಿಯಲ್ಲಿ ಚಿತ್ರದುರ್ಗ ಲೋಕಸಭೆಗೆ ಅಚ್ಚರಿ ಅಭ್ಯರ್ಥಿ ಯಾರು?

March 21, 2024

ಎಲ್ಲೆಲ್ಲೂ ಸ್ಥಳೀಯ ಅಭ್ಯರ್ಥಿ ಕೂಗು : ಡಾ.ಬಿ .ತಿಪ್ಪೇಸ್ವಾಮಿ ಫುಲ್ ರೌಂಡ್ಸ್

February 24, 2024
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.