Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಆರೋಗ್ಯ»ನಾನು ಕೂಡ ನೇತ್ರದಾನಕ್ಕೆ ಮುಂದಾಗಿದ್ದೇನೆ
ಆರೋಗ್ಯ

ನಾನು ಕೂಡ ನೇತ್ರದಾನಕ್ಕೆ ಮುಂದಾಗಿದ್ದೇನೆ

D KumaraswamyBy D KumaraswamyAugust 25, 2022Updated:August 25, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಅಂಧರ ಬಾಳಿಗೆ ನೇತ್ರದಾನದಿಂದ ಬೆಳಕು: ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ

 

 

ಪ್ರತಿಯೊಬ್ಬರು ನೇತ್ರದಾನ ಮಾಡುವುದರಿಂದ ಅಂಧರ ಬಾಳಿಗೆ ಬೆಳಕು ನೀಡಿದಂತಾಗುತ್ತದೆ.ಈ ನಿಟ್ಟಿನಲ್ಲಿ ನಾನು ಕೂಡ ನೇತ್ರದಾನಕ್ಕೆ ಮುಂದಾಗಿದ್ದೇನೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ರಾಷ್ಟ್ರೀಯ ಕಾರ್ಯಕ್ರಮಗಳ ಅನುಷ್ಠಾನ ಕುರಿತಂತೆ ಜಿಲ್ಲಾ ಆಸ್ಪತ್ರೆ ಸಹಕಾರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೇತ್ರದಾನ ಪಾಕ್ಷಿಕದ ಬಗ್ಗೆ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ರೂಪ ಸಭೆಗೆ ವರದಿ ಸಲ್ಲಿಸುತ್ತಿರುವಾಗ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನೀಕೆರಿ ಮಾತನಾಡಿ, ನಾನು ನನ್ನ ನೇತ್ರ ದಾನ ಮಾಡುತ್ತಿದ್ದೇನೆ. ತಾವುಗಳು ನೇತ್ರ ದಾನಮಾಡಿ ಮನವೀಯತೆ ಮರೆಯಿರಿ ಎಂದು ಹೇಳಿದರು.
ಜಿಲ್ಲಾ ಆಸ್ಪತ್ರೆಯಲ್ಲಿ ದಾಸ್ತಾನು ಇಲ್ಲ ಎಂಬ ಕಾರಣ ಹೇಳದೆ ಆಸ್ಪತ್ರೆಗೆ ಬರುವ ರೋಗಿಗಳ ತಪಾಸಣೆ ಚಿಕಿತ್ಸೆ ಉಚಿತವಾಗಿ ನೀಡುವುದು. ರೋಗಿಗಳನ್ನು ನಿಮ್ಮ ನರ್ಸಿಂಗ್ ಹೋಂಗಳಿಗೆ ಬರುವಂತೆ ತಿಳಿಸದೆ, ಜಿಲ್ಲಾ ಆಸ್ಪತ್ರೆಯಲ್ಲಿಯೇ ಸೇವೆ ನೀಡಬೇಕು. ತಾಯಿ ಮಕ್ಕಳ ವಾರ್ಡಗಳಲ್ಲಿ ಬೆಡ್ ಕೊರತೆಯ ಬಗ್ಗೆ ಬಹಳಷ್ಟು ದೂರುಗಳು ಬರುತ್ತಿವೆ. ಲೋಕೋಪಯೋಗಿ ಇಲಾಖೆ ಅಭಿಯಂತರರನ್ನು ಕರೆಸಿ ಅಗತ್ಯವಿರುವ ವ್ಯವಸ್ಥೆ ಮಾಡಿಕೊಂಡು ವರದಿಸಲ್ಲಿಸಿ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕರಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾಗಳು ತಮ್ಮ ತಮ್ಮ ಕಾರ್ಯಕ್ರಮಗಳ ಬಗ್ಗೆ ವರದಿ ಸಲ್ಲಿಸಿದರು. ಪೌಷ್ಟಿಕ ಪುನಃಶ್ಚೇತನ ಕೇಂದ್ರಗಳಲ್ಲಿ ಸೇವೆಗಳನ್ನು ಬಲಪಡಿಸಿ ಎಂದು ಸೂಚನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಂಗನಾಥ್ ಮಾತನಾಡಿ, ಎಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಎಲ್ಲಾ ರಾಷ್ಟ್ರೀಯ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನಕ್ಕೆ ವಿಶೇಷವಾಗಿ ಹಿರಿಯ ನಾಗರಿಕರ ಆರೋಗ್ಯ ಕಾಪಾಡುವಲ್ಲಿ ಪ್ರತ್ಯೇಕ ವಾರ್ಡ್, ದಾಖಲಾತಿ ನಿರ್ವಾಹಣೆ, ಸಾಂಕ್ರಾಮಿಕವಲ್ಲದ ರೋಗಗಳಾದ ಡಯಾಬಿಟಿಸ್ ರಕ್ತದೊತ್ತಡ ಇತರೆ ರೋಗಗಳ ನಿಯಂತ್ರಣಕ್ಕೆ ಪ್ರತ್ಯೇಕ ವಾರ್ಡ್ ಸೌಲಭ್ಯ ಕಲ್ಪಿಸಿ. ಈ ನಿಟ್ಟಿನಲ್ಲಿ ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳು ನಿಮ್ಮ ಹಂತಗಳಲ್ಲಿ ಕಾರ್ಯಪ್ರವೃತ್ತರಾಗಿ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸವರಾಜ್, ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳಾದ ಡಾ.ಕುಮಾರಸ್ವಾಮಿ, ಡಾ.ರೇಣುಪ್ರಸಾದ್, ಡಾ.ಸುಧಾ, ಡಾ.ರೂಪ ತಾಲ್ಲೂಕು ಆರೋಗ್ಯಾಧಿಕಾರಿಳಾದ ಡಾ.ಕೃಷ್ಣಮೂರ್ತಿ, ಡಾ.ಪ್ರಜ್ವಲ್, ಡಾ.ಸತೀಶ್, ಡಾ.ಚಂದ್ರಶೇಖರ್, ಡಾ.ದೇವರಾಜ್ ಹಾಗೂ ಜಿಲ್ಲಾ ಆಸ್ಪತ್ರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಸಂಪನ್ಮೂಲ ಬಳಕೆ, ತಾಂತ್ರಿಕತೆ ಉನ್ನತೀಕರಣದಿಂದ ಯಶಸ್ವಿ ಉದ್ಯಮದಾರರಾಗಲು ಸಾಧ್ಯ
Next Article ಮಹಿಳಾ ಸ್ವ-ಸಹಾಯ ಸಂಘದಿಂದ ನಿರ್ವಹಣೆ ಕಸ ಸಂಗ್ರಹಣೆಯಲ್ಲಿ ಮಾದರಿಯಾದ ನಗರಂಗೆರೆ ಗ್ರಾಮ ಪಂಚಾಯಿತಿ
D Kumaraswamy
  • Tumblr

Related Posts

ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಿಖಿಲ್ ಕುಮಾರಸ್ವಾಮಿ

August 3, 2025

ತೆರೆಗೆ ಅಪ್ಪಳಿಸಲು ಸಜ್ಜಾದ ಕ್ಯೂಬ್ ಎಂಟರ್ ಟೈನ್ಮೆಂಟ್ ನ ಮಹತ್ವಾಕಾಂಕ್ಷಿ ಚಿತ್ರ ಕಟ್ಟಾಳನ್ 

June 7, 2025

1.11 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಆರು ತಿಂಗಳಲ್ಲಿ ರಾಜ್ಯದಲ್ಲಿ ಬಾಕಿ ಇರುವ 50 ಸಾವಿರ ಕುಟುಂಬಗಳಿಗೂ ಹಕ್ಕುಪತ್ರ – ಸಿ.ಎಂ.ಸಿದ್ದರಾಮಯ್ಯ

May 20, 2025

ರಸಗೊಬ್ಬರ ಕೊರತೆ ಉಂಟಾಗದಂತೆ ಕ್ರಮ ವಹಿಸಿ- ಡಿ.ಸಿ. ವೆಂಕಟೇಶ್ ಸೂಚನೆ

March 25, 2025
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.