ಬ್ರೇಕಿಂಗ್ ನ್ಯೂಸ್
ಬೆಂಗಳೂರು:ಜೂನ್ ನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಇದೇ 30 ರಂದು ಪ್ರಕಟಿಸಲಾಗುತ್ತದೆ ಎಂದಜ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಹೇಳಿದರು.
ವಿವಿಧ ವೃತ್ತಿ ಪರ ಕೋರ್ಸ್ ಗಳಿಗೆ ಜೂನ್ ನಲ್ಲಿ ಬಾರೀ ಬಿಗಿ ಭದ್ರತೆಯಲ್ಲಿ ನಡೆಸಲಾಗಿತ್ತು. ಪರೀಕ್ಷೆಗೆ ಸಿಬಿಎಸ್ಸಿ ಮತ್ತು ಐಸಿಎಸ್ಸಿಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿಗಳಿಗೂ ಅವಕಾಶ ಮಾಡಿಕೊಡಲಾಗಿತ್ತು, ಈಗ ಅವರ ಫಲಿತಾಂಶ ಬಂದಿದ್ದು, ಅವರು ಪಡೆದುಕೊಂಡಂತಹ ಅಂಕಗಳನ್ನು ನಾಳೆ ಸಂಜೆಯೊಳಗೆ ಆನ್ ಲೈನ್ನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಬೇಕು ಎಂದು ತಿಳಿಸಿದ್ದಾರೆ.
ಸುದ್ದಿ ಜಾಹೀರಾತಿಗಾಗಿ ಸಂಪರ್ಕಿಸಿ: 8660924503