ಶಾಸಕ ಎಂ. ಚಂದ್ರಪ್ಪ ಅಪ್ತ ಸಹಾಯಕ ಪ್ರಾಣಾಪಾಯದಿಂದ ಪಾರು

ಜಿಲ್ಲಾ ಸುದ್ದಿ

ಚಿತ್ರದುರ್ಗದ ಕಲ್ಲೇನಹಳ್ಳಿ ಬಳಿ ಬೈಕ್ ಹಳ್ಳಕ್ಕೆ ಬಿದ್ದ ಪರಿಣಾಮ ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಅವರ ಅಪ್ತ ಕಾರ್ಯದರ್ಶಿ ಹಾಗೂ ಚಂದ್ರಪ್ಪ ಅವರ ವೆಂಕಟೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಬೈರ ಸಿದ್ದಪ್ಪ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

 

 

 

ಬೈರ ಸಿದ್ದಪ್ಪ ಅವರು ಬೈಕಿನಲ್ಲಿ ಗ್ರಾಮಕ್ಕೆ ತೆರಳುವಾಗ ಕತ್ತಲಿನಲ್ಲಿ ರಸ್ತೆಯ ಮಧ್ಯದಲ್ಲಿದ್ದ ಹಳ್ಳ ಕಾಣದೆ ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದಿದ್ದಾರೆ. ಬಸ್ ಕೂಡ ಅದೇ ಸಮಯದಲ್ಲಿ ರಸ್ತೆಯ ಮೇಲೆ ಹಾದು ಹೋಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ, ಗಾಯಾಳು ಬೈರ ಸಿದ್ದಪ್ಪ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪ್ತ ಕಾರ್ಯದರ್ಶಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಬೈರ ಸಿದ್ದಪ್ಪ ಅವರ ಆರೋಗ್ಯ ವಿಚಾರಿಸಲು ಸ್ವತಃ ಶಾಸಕ ಎಂ. ಚಂದ್ರಪ್ಪ ಹಾಗೂ ಕಾಲೇಜಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಘು ಚಂದನ್ ಕಾರ್ಯದರ್ಶಿ, ಯಾದ ಚಂದ್ರಪ್ಪ ಅವರ ಪತ್ನಿ ಹಾಗೂ ಕಾಲೇಜಿನ ಸಿಬ್ಬಂದಿಗಳು ಆಸ್ಪತ್ರೆಗೆ ಬಂದಿದ್ದರು.

Leave a Reply

Your email address will not be published. Required fields are marked *