ಒಂದು ವಾರದಿಂದ ಸುರಿದ ಅಕಾಲಿಕ ಮಳೆಗೆ ಚಳ್ಳಕೆರೆ ತಾಲೂಕಿನಲ್ಲಿ ಕೆರೆಗಳು ತುಂಬಿ ಹರಿಯುತ್ತಿವೆ. ಇದರಂತೆ ಕಲಮರಹಳ್ಳಿ ಕೆರೆಯು ತುಂಬಿ ಹರಿದಿದ್ದು, ನಿರಾಶ್ರಿತರ ಮನೆಗಳಿಗೆ ನೀರು ನುಗ್ಗಿದ್ದು ಜನ ಜಾನುವಾರುಗಳಿಗೆ ತೊಂದರೆಯಾಗಿದ್ದು, ಈ ಕಾರಣ ಅವರನ್ನು ಕಲಮರಹಳ್ಳಿ ಗ್ರಾಮದ ಪ್ರೌಢಶಾಲೆಯಲ್ಲಿ ಆರಂಭವಾದ ಗಂಜಿ ಕೇಂದ್ರಕ್ಕೆ ನಿರಾಶ್ರಿತರನ್ನು ಸ್ಥಳಾಂತರಿಸಿದ್ದು ಗಂಜಿ ಕೇಂದ್ರಕ್ಕೆ ಭೇಟಿ ನೀಡಿ ಅವರ ಯೋಗಕ್ಷೇಮವನ್ನು ವಿಚಾರಿಸಿದರು.
ಈ ಸಂದರ್ಭದಲ್ಲಿ ಬೆಳಗೆರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಧು ಕುಮಾರ್, ಹಾಗೂ ಉಪಾಧ್ಯಕ್ಷರು, ಸದಸ್ಯರುಗಳು ಮತ್ತು ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಶಿವಕುಮಾರ್, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷರಾದ ಶಿವಣ್ಣ, ಮುಖಂಡರುಗಳಾದ ಕೆ.ಟಿ. ನಿಜಲಿಂಗಪ್ಪ, ಟಿ .ಡಿ. ಲಿಂಗನಗೌಡ, ಶ್ರೀಧರ, ಶ್ರೀನಿವಾಸ್, ತಿಪ್ಪಮ್ಮ, ಗಿರೀಶ್, ರಂಗಸ್ವಾಮಿ, ಮೂಡಲಗಿರಿಯಪ್ಪ ಹಾಗೂ ಕಾರ್ಯಕರ್ತರು, ಮುಖಂಡರುಗಳು ಮತ್ತು ನಿರಾಶ್ರಿತರು ಉಪಸ್ಥಿತರಿದ್ದರು.