ಚಿತ್ರದುರ್ಗ: ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಈ ಕೇಸ್ನಲ್ಲಿ ಶ್ರೀಗಳು ಜೈಲು ಸೇರಿದ್ದು, ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಇದರ ಮಧ್ಯೆ ಬಾಲಕಿಯರ ಚಿಕ್ಕಪ್ಪ ನೀಡಿರುವ ದೂರಿನಿಂದ ಹೊಸ ಟ್ವಿಸ್ಟ್ ಸಿಕ್ಕಿದೆ.
ಬಸವರಾಜನ್ ವಿರುದ್ಧ ಸಂತ್ರಸ್ತ ಬಾಲಕಿಯರ ಚಿಕ್ಕಪ್ಪ ಕಂಪ್ಲೆಂಟ್..
ಕಳೆದೊಂದು ವಾರದಿಂದ ರಾಜ್ಯದಲ್ಲಿ ತೀವ್ರ ಸಂಚಲ ಸೃಷ್ಟಿಸಿದ್ದ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋಗೆ ಇದೀಗ ರೋಚಕ ಟ್ವಿಸ್ಟ್ ಸಿಕ್ಕಿದೆ. ಮುರುಘಾ ಮಠದ ಪೀಠಾಧ್ಯಕ್ಷರಾಗಿ, ಸಮಾಜದ ಏಳಿಗೆಗೆ ಶ್ರಮಿಸುತ್ತಿದ್ದ ಶ್ರೀಗಳು, ಈ ಕೇಸ್ನಲ್ಲಿ ಜೈಲು ಕಂಬಿ ಹಿಂದೆ ಸೇರಿದ್ದಾರೆ. ಆದ್ರೆ, ಸಂತ್ರಸ್ತ ಬಾಲಕಿಯ ಚಿಕ್ಕಪ್ಪ ಸಲ್ಲಿರುವ ದೂರಿನಿಂದ ಇಡೀ ಪ್ರಕರಣವೇ ಹೊಸ ತಿರುವು ಪಡೆದುಕೊಳ್ಳುವ ಲಕ್ಷಣಗಳು ಕಾಣ್ತಿವೆ.
ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಬಾಲಕಿಯ ಚಿಕ್ಕಪ್ಪ ಚಿತ್ರದುರ್ಗ ಪೊಲೀಸ್ ಅಧೀಕ್ಷಕರಿಗೆ ದೂರು ಸಲ್ಲಿಸಿದ್ದು. ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ವಿರುದ್ದ ಆರೋಪ ಮಾಡಿದ್ದಾರೆ.
ದೂರಿನಲ್ಲಿ ಏನಿದೆ..?
ಜುಲೈ 27ರಂದು ಬಸವರಾಜನ್ ನನ್ನನ್ನು ಕರೆಸಿಕೊಂಡಿದ್ರು, ಆಗ ಮಕ್ಕಳು ಅವರ ಮನೆಯಲ್ಲಿದ್ದರು. ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಅವರ ವಿದ್ಯಾಭ್ಯಾಸ, ಮದುವೆ ಜವಾಬ್ದಾರಿ ನನ್ನದು ಎಂದು ಬಸವರಾಜನ್ ಹೇಳಿದ್ರು. ಆದರೆ ನಾವು ಮಗಳನ್ನ ಮನೆಗೆ ಕರೆತಂದಿರೋ ಹೇಳಿಕೆ ಸುಳ್ಳು. ಬಾಲಕಿಯರ ಬಳಿ ಖಾಲಿ ಪೇಪರ್ಗೆ ಸಹಿ ಹಾಕಿಸಿದ್ದಾರೆ ಎಂದು ಓರ್ವ ಸಂತ್ರಸ್ತ ಬಾಲಕಿಯ ಚಿಕ್ಕಪ್ಪ, ಬಸವರಾಜನ್ ವಿರುದ್ಧ ಚಿತ್ರದುರ್ಗ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ್ದಾರೆ. ಹಾಗೂ ಜುಲೈ 27ರಿಂದ ಆಗಸ್ಟ್ 26ರವರೆಗೆ ಸಂತ್ರಸ್ತ ಬಾಲಕಿಯರು, ಇದ್ದಿದ್ದಾರೂ ಎಲ್ಲಿ ಎಂಬ ಪ್ರಶ್ನೆ ಪೊಲೀಸರಲ್ಲಿ ಮೂಡಿದೆ.