ಕೆಲವೇ ಕ್ಷಣಗಳಲ್ಲಿ ಮುರುಘಾ ಶರಣರು ಜಯದೇವ ಆಸ್ಪತ್ರೆಗೆ ಶಿಫ್ಟ್

ದೇಶ

 

ಕೆಲವೇ ಕ್ಷಣಗಳಲ್ಲಿ ಶರಣರು ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಶಿಫ್ಟ್

 

 

 

ಚಿತ್ರದುರ್ಗ : ಲೈಂಗಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ ಚಿತ್ರದುರ್ಗ ಮುರುಘಾ ಶರಣರ ಆರೋಗ್ಯದಲ್ಲಿ ಏರು ಪೇರು ಹಿನ್ನೆಲೆಯಲ್ಲಿ ಶ್ರೀಗಳಿಗೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗುವುದು ಎಂದು ಜಿಲ್ಲಾ ಸರ್ಜನ್ ಡಾ‌. ಬಸವರಾಜ್ ತಿಳಿಸಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಶ್ರೀಗಳ ಆರೋಗ್ಯದಲ್ಲಿ ಹೆಚ್ಚು ಏರುಪೇರು ಉಂಟಾಗಿದ್ದು ಅವರನ್ನು ರಸ್ತೆ ಮೂಲಕ ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತದೆ ಎಂದು ಹೇಳಿದರು. ಶ್ರೀಗಳು ಹೃದಯರೋಗದಿಂದ ಬಳಲುತ್ತಿದ್ದರು. ಎದೆ ನೋವಿನಿಂದ ಬಳಲುತ್ತಿದ್ದ ಶ್ರೀಗಳಿಗೆ ಬೆಳಿಗ್ಗೆಯಿಂದಲೇ ಚಿಕಿತ್ಸೆ ನೀಡಲಾಗಿದ್ದು, ಅದರಲ್ಲಿ ಹೃದಯರೋಗ ಇರುವುದು ಹಾಗೂ ರಕ್ತದೊತ್ತಡ ಹೆಚ್ಚು ಇರುವುದರಿಂದ ಅವರನ್ನು ಬೆಂಗಳೂರಿಗೆ ಶಿಫ್ಟ್ ಮಾಡಬೇಕು ಎಂದು ದಾವಣಗೆರೆ ನಾರಾಯಣ ಹೃದಯದ ವೈದ್ಯರು ಬಂದು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಸ್ಥಳಾಂತರಿಸಲು ಸಲಹೆ ನೀಡಿದ್ದಾರೆ. ಅದರಂತೆ ಹೆರ್ ಲಿಲ್ಟ್ ಮೂಲಕ ಶಿಫ್ಟ್ ಮಾಡಲು ಸಾಧ್ಯವಿಲ್ಲ ಎಂದರು.

ಈಗಾಗಲೇ ಬೆಂಗಳೂರಿಗೆ ಶಿಫ್ಟ್ ಮಾಡಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಿಂದ ಅಂಬುಲೆನ್ಸ್ ಮೂಲಕ ಹಿರಿಯೂರು,‌ಶಿರಾ, ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *