Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಕಾಯಕದಲ್ಲಿ ಕೈಲಾಸ ಕಂಡ ಶರಣ ನುಲಿಯ ಚಂದಯ್ಯ
ಜಿಲ್ಲಾ ಸುದ್ದಿ

ಕಾಯಕದಲ್ಲಿ ಕೈಲಾಸ ಕಂಡ ಶರಣ ನುಲಿಯ ಚಂದಯ್ಯ

D KumaraswamyBy D KumaraswamyAugust 12, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಕಾಯಕದಲ್ಲಿ ಕೈಲಾಸ ಕಂಡ ಶರಣ ನುಲಿಯ ಚಂದಯ್ಯ

 

 

ಕಾಯಕದಲ್ಲಿ ಕೈಲಾಸ ಕಂಡ ಶರಣ ನುಲಿಯ ಚಂದಯ್ಯ ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಹೇಳಿದರು.
ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ನುಲಿಯ ಚಂದಯ್ಯ ಜಯಂತಿ ಆಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ನುಲಿಯ ಚಂದಯ್ಯ ಬಸವಣ್ಣನವರ ಸಮಾಕಾಲೀನರು ಮತ್ತು ಅವರ ಜೊತೆ ಕೈಜೋಡಿಸಿದ ಪ್ರಮುಖ ಶರಣರಲ್ಲಿ ಒಬ್ಬರು. ಕಾಯಕ ಮತ್ತು ದಾಸೋಹದ ಮೂಲಕ ಸಮಾಜಕ್ಕೆ ಬೆಳಕು ನೀಡಿದರು ಎಂದು ಹೇಳಿದರು.

ಶರಣರು, ವಚನಕಾರರು, ಅನುಭಾವಿಗಳನ್ನು ಸ್ಮರಿಸುವ ಮೂಲಕ ಸಮಾಜಕ್ಕೆ ಗಟ್ಟಿನೆಲೆ ಹಾಕಿ ಕೊಡುವ ನಿಟ್ಟಿನಲ್ಲಿ ಮಹನೀಯರ ಜಯಂತಿಗಳನ್ನು ಆಚರಿಸಬೇಕಿದೆ. ನುಲಿಯ ಚಂದಯ್ಯ ಅವರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಚಿತ್ರದುರ್ಗದ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ತ್ರಿವಿಧ ದಾಸೋಹಿಗಳು ಹಾಗೂ ಶೂನ್ಯಪೀಠಾಧ್ಯಕ್ಷರಾದ ಶಿವಮೂರ್ತಿ ಮುರುಘಾ ಶರಣರು ಮಾತನಾಡಿ, ನುಲಿಯ ಚಂದಯ್ಯ ಅವರ ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದ ಇದೇ ಮೊದಲ ಬಾರಿಗೆ ಆಚರಿಸಲಾಗುತ್ತಿದೆ. ಇದು ಚಂದಯ್ಯ ಅವರಿಗೆ ಸಲ್ಲುವ ದೊಡ್ಡ ಗೌರವವಾಗಿದೆ. 12ನೇ ಶತಮಾನದ ಬಸವಯುಗದಲ್ಲಿ ಮಿಂಚಿದ ಧೃವತಾರೆ ಚಂದಯ್ಯನವರು ಎಂದು ಬಣ್ಣಿಸಿದರು.
ಚಂದಯ್ಯ ಹಗ್ಗ ಹೊಸೆಯುವ ಅಪೂರ್ವ ಕಾಯಕ ಮಾಡುತ್ತಿದ್ದರು. ಕಾಯಕ ಬದುಕಿಗೆ ಒಂದು ಮಾರ್ಗ ಹಾಗೂ ಆಧಾರವೂ ಹೌದು.  ಕಾಯಕದಲ್ಲಿ ಭಿನ್ನಬಾವ ಮಾಡಲು ಸಾಧ್ಯವಿಲ್ಲ. ಎಲ್ಲ ವೃತ್ತಿಯನ್ನು ಸಮಾನವಾಗಿ ಕಾಣಲಿದೆ. ಕಾಯಕ ತತ್ವ ಸರ್ವಶ್ರೇಷ್ಟವಾದ ಒಂದು ತತ್ವವಾಗಿದೆ. ನುಲಿಯ ಚಂದಯ್ಯ ಅವರು ಕಾಯಕ ತತ್ವಕ್ಕೆ ಭಾಷ್ಯ ಬರೆದ ಅದ್ಭುತ ಶರಣರು ಎಂದು ಹೇಳಿದರು.
ಪ್ರಾಮಾಣಿಕವಾಗಿ, ಪರಿಶುದ್ಧವಾಗಿ, ಸತ್ಯಶುದ್ಧರಾಗಿ ಕಾಯಕ ಮಾಡುತ್ತಾರೆಯೋ ಅವರ ಇಡೀ ಜೀವನ ಮುಕ್ತಿಯನ್ನು ಅನುಭವಿಸಲಿದೆ. ಕಾಯಕ ಮಾಡುವುದಿಲ್ಲವೋ ಅವರು ಮುಕ್ತರಾಗುವುದಿಲ್ಲ. ಕಾಯಕ ಮಾಡುವ ಉದಾತ್ತ ತತ್ವನ್ನು ಜಗತ್ತಿಗೆ ಸಾರಿ ಹೇಳಿದವರು ನುಲಿಯ ಚಂದಯ್ಯನವರು, ಕಾಯಕಜೀವಿಗಳೂ, ಕಾಯಕ ಪ್ರೇಮಿ, ಕಾಯಕಯೋಗಿಗಳು ಹೌದು. ಕಾಯಕತತ್ವವನ್ನು ಚಾಚೂತಪ್ಪದೇ ಜೀವನದಲ್ಲಿ ಪಾಲಿಸಿ, ಉದಾತ್ತತೆಯನ್ನು ತಂದುಕೊಟ್ಟವರು ಎಂದು ಹೇಳಿದರು.
ಆರ್.ನುಲೇನೂರು ಗ್ರಾಮದ ಶರಣ ಸಾಹಿತಿ ಜಿ.ಎನ್.ಬಸವರಾಜಪ್ಪ ಉಪನ್ಯಾಸ ನೀಡಿ, ಕಾಯಕಯೋಗಿ ನುಲಿಯ ಚಂದಯ್ಯ ಅವರ ಅನುಭಾವ ನಮ್ಮೆಲ್ಲರಿಗೆ ಅತ್ಯಾವಶ್ಯಕವಾಗಿ ಬೇಕಾಗಿದೆ. ಜೀವನ ನಿರ್ವಹಣೆ ಮಾಡುವುದು ಕಾಯಕವಲ್ಲ. ಕಾಯಕ ಅಂದರೆ ಅಮೂಲ್ಯವಾದ ಮೌಲ್ಯ. ಜಗತ್ತಿನ ಇತಿಹಾಸದಲ್ಲಿಯೇ ಯಾರು ಕೊಡದೇ ಇರುವ ಒಂದು ಘನತೆ, ಮರ್ಯಾದೆಯನ್ನು ಧಾರ್ಮಿಕ ಹಿನ್ನಲೆಯಲ್ಲಿ ಮಾಡುವ ಕಸುಬುಗಳಿಗೆ ಮೌಲ್ಯ ಕೊಟ್ಟಂತಹ 12ನೇ ಶತಮಾನದ ಬಸವಾದಿ ಶರಣರು ಎಂದು ಹೇಳಿದರು.
ದೇಶ ಮೂಢನಂಬಿಕೆಯ ತವರೂರು. ಮೌಡ್ಯಗಳನ್ನು ಜೀವನದಲ್ಲಿ ಹಾಸುಹೊಕ್ಕಾಗಿ ಬೆಳೆಸಿಕೊಂಡ ದೇಶ. ಇವೆಲ್ಲಕ್ಕೂ ತಿಲಾಂಜಲಿ ಇಟ್ಟು, ಮೌಡ್ಯಗಳನ್ನು ಹೋಗಲಾಡಿಸಿದವರು ಬಸವಾದಿ ಪ್ರಮುಖರು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಧನಂಜಯ, ಕೊರಚ ಸಮಾಜದ ಜಿಲ್ಲಾ ಅಧ್ಯಕ್ಷ ವೈ.ಕುಮಾರ್, ಪ್ರಧಾನ ಕಾರ್ಯದರ್ಶಿ ಎನ್.ಧನಂಜಯ, ಕೊರಮ ಸಮಾಜದ ಜಿಲ್ಲಾ ಅಧ್ಯಕ್ಷ ಕೆ.ಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ದ್ವಾರಕನಾಥ್, ಗೌರವ ಅಧ್ಯಕ್ಷ ಹನುಮಂತಪ್ಪ, ಉಪಾಧ್ಯಕ್ಷ ರಾಮಣ್ಣ, ಖಜಾಂಚಿ ಅಂಜಿನಮೂರ್ತಿ, ಸಹ ಕಾರ್ಯದರ್ಶಿ ಪರಮೇಶ್, ನಿರ್ದೇಶಕ ನರಸಿಂಹಮೂರ್ತಿ ಸೇರಿದಂತೆ ಮತ್ತಿತರರು ಇದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಪ್ರತೀ ಕ್ಷೇತ್ರದಲ್ಲಿ ಪ್ರಗತಿ ಹೊಂದಲು ಶಿಕ್ಷಣ ಮುಖ್ಯ
Next Article ಸ್ಥಳೀಯ ಸಂಸ್ಥೆಗಳ ಮೀಸಲಾತಿ ವರದಿಗೆ ಒಪ್ಪಿಗೆ ನೀಡಿದ ಸಂಪುಟ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.