Breaking news
ಮಂಗಳೂರಿನ ಪ್ರವೀಣ್ ಹತ್ಯೆ ಮಾಸುವ ಮುನ್ನವೇ ಇನ್ನೊಂದು ಕೊಲೆ ನಡೆದಿದ್ದು ಅಪರಿಚಿತಬ ತಂಡವು ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಲಾಗಿದೆ.
ಹತ್ಯೆಗೀಡಾದ ವ್ಯಕ್ತಿಯನ್ನು ಫಾಜಿಲ್ ಎಂದು ಗುರುತಿಸಲಾಗಿದ್ದು, ಮಂಗಳೂರಿನ ಹೊರ ವಲಯದ ಸುರತ್ಕಲ್ ಬಳಿ ಬಟ್ಟೆ ಅಂಗಡಿಗೆ ನುಗ್ಗಿದ ಅಪರಿಚಿತ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೋಲಿಸರು ಧಾವಿಸಿ ಪರಿಶೀಲಿಸಿದ್ದಾರೆ. ಈ ಘಟನೆಯಿಂದ ಬೆಚ್ಚಿ ಬಿದ್ದಿರುವ ಮಂಗಳೂರಿನ ಅಂಗಡಿಗಳು ಬಂದ್ ಆಗಿವೆ.