ಉತ್ತಮ ರೀತಿಯಲ್ಲಿ ಕೆಲಸ ಮಾಡಿಕೊಂಡು ಹೊಗುವಂತೆ ಸಿಇಓ ಸೂಚನೆ

ಜಿಲ್ಲಾ ಸುದ್ದಿ

ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ
ಹುಣವಿನಡು ಗ್ರಾಮ ಪಂಚಾಯಿತಿಗೆ ದಿಢೀರ್ ಭೇಟಿ ನೀಡಿ ಗ್ರಾಮ ಪಂಚಾಯಿತಿ ಕಚೇರಿಯ ಕಡತಗಳನ್ನು ಮತ್ತು ಅಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದರು.

 

 

 

ಲಕ್ಕಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಮತ್ತು ಅಕ್ಷರ ದಾಸೋಹ ಅಡುಗೆ ಕೋಣೆಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳ ಬಗ್ಗೆ ಶಿಕ್ಷಕರೊಂದಿಗೆ, ಅಡುಗೆ ಸಹಾಯಕಿರೊಂದಿಗೆ ಮಾಹಿತಿ ಪಡೆದರು, ಆ ಶಾಲೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಂಡ ಶಾಲಾ ಶೌಚಾಲಯ ಮತ್ತು ಅಡುಗೆ ಕೋಣೆಯನ್ನ ವೀಕ್ಷಣೆ ಮಾಡಿದರು.

ಕಂಗುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊರಟಿಕೆರೆ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿ ಅನುಷ್ಠಾನಗೊಂಡ ಕಲ್ಯಾಣ ಪುನಶ್ಚೇತನ, ಆಟದ ಮೈದಾನ, ಸಂಜೀವಿನಿ ಶೆಡ್ ಮತ್ತು LWM ಕಾಮಗಾರಿಗಳ ವೀಕ್ಷಿಸಿದರು.ದೇವಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಯನಗರ ಫಾರಂ ಗ್ರಾಮದಲ್ಲಿ ನರೇಗಾ ಯೋಜನೆ ಅಡಿ ಅನುಷ್ಠಾನಗೊಂಡ ಇಕೋ ಪಾರ್ಕ್, ಕಲ್ಯಾಣಿ ಪುನಸ್ಚೇತನ, ಗೋಕಟ್ಟೆ ಅಭಿವೃದ್ಧಿ ಕಾಮಗಾರಿಗಳ ವೀಕ್ಷಿಸಿದರು.ಮಾಡದಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ರೈತರ ಸಂಪರ್ಕ ಕೇಂದ್ರಕ್ಕೆ ದಿಡೀರ್ ಭೇಟಿ ನೀಡಿ ವ್ಯವಸ್ಥೆಗಳ ಬಗ್ಗೆ ಸಿಬ್ಬಂದಿಗಳಿಂದ ಮಾಹಿತಿ ಪಡೆದರು. ನಂತರ ಎಲ್ಲಾ  ಉತ್ತಮ‌ರೀತಿಯಲ್ಲಿ ಕೆಲಸಮಾಡಿಕೊಂಡು ಹೋಗುವಂತೆ ಸೂಚಿಸಿದರು.ಈ  ಭೇಟಿಯಲ್ಲಿ ಹೊಸದುರ್ಗ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು,ಸಹಾಯಕ ನಿರ್ದೇಶಕರು (ನರೇಗಾ) ಇಂಜಿನಿಯರ್ ಇತರೇ ಸಿಬ್ಬಂದಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *