ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಯಾಗಿರುವ ಸವಿತಾ ರಘು ಅವರು ಇಂದು ಹಿರಿಯೂರಿನಿಂದ ಚಳ್ಳಕೆರೆಗೆ ಸಾಗಿ ಬಂದ ರಾಹುಲ್ ಗಾಂಧಿ ನೇತೃತ್ವದ ಭಾವೈಕ್ಯತಾ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಸವಿತಾ ರಘು ಅವರು ಅವರ ಜೊತೆ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು. ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರು ಸವಿತಾ ರಘು ಅವರನ್ನು ಪಾದಯಾತ್ರೆ ಮಾಡಲು ಹುರಿದುಂಬಿಸಿದ್ದು ಕಂಡು ಬಂತು, ಇತ್ತ ರಘು ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಜೊತೆ ಸವಿತಾ ಅವರ ಪತಿ ಹಾಗೂ ಕಾಂಗ್ರೆಸ್ ಮುಖಂಡ ರಘು ಕೂಡ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.