ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಭರಮಸಾಗರ ಹೋಬಳಿಯ ಇಸಾಮುದ್ರ ಗೊಲ್ಲರಹಟ್ಟಿಯ ಸರ್ಕಾರಿ ಶಾಲೆಯ ಮಕ್ಕಳು ವಿಷ ಪೂರಿತ ಆಹಾರ ಸೇವನೆಯಿಂದ ಅಸ್ವಸ್ತ ರಾಗಿದ್ದ ಘಟನೆ ನಡೆದಿದ್ದು, ಇದರಲ್ಲಿ ನಾಲ್ಕು ಜನ ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿತ್ತು. ಘಟನೆ ನಡೆದ ಶಾಲೆಗೆ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಹಾಗೂ ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಸವಿತಾ ರಘು ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ಪೋಷಕರಿಗೆ ಸಾಂತ್ವಾನ ಹೇಳಿ ಅವರಿಗೆ ಧನ ಸಹಾಯ ಮಾಡಿದರು.
ಶಾಲಾ ಸಿಬ್ಬಂದಿ ಹಾಗೂ ಅಡುಗೆ ಸಿಬ್ಬಂದಿ ಯವರ ಜೊತೆಗೆ ಮಾತನಾಡಿ ಶಾಲೆಗೆ ಅಗತ್ಯವಿರುವ ಮೂಲಭೂತ ಸೌಲಭ್ಯ ಗಳಾದ ಕುಡಿಯುವ ನೀರು ಶೌಚಾಲಯ ಅಡುಗೆ ಕೊಠಡಿ ಇನ್ನಿತರ ಸೌಲಭ್ಯಗಳ ಮಾಡುವ ಭರವಸೆ ನೀಡಿದರು
ಈ ಸಂದರ್ಭದಲ್ಲಿ ಎಐಸಿಸಿ ವೀಕ್ಷಕರಾದ ಮಯೂರ ಜಯಕುಮಾರ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಾಜ್ ಪೀರ್ ರವರು ಚಿತ್ರದುರ್ಗದ ಮಾಜಿ ಸಂಸದರಾದ ಬಿಎನ್ ಚಂದ್ರಪ್ಪ ಭರಮಸಾಗರದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಎಸ್ಎಂಎಲ್ ತಿಪ್ಪೇಸ್ವಾಮಿ, ಜಿಲ್ಲಾ ಕಾರ್ಯಾಧ್ಯಕ್ಷ ರಾದ ಹಾಲೇಶ್ ಮಹಿಳಾ ಅಧ್ಯಕ್ಷೆ ಗೀತಾ ನಂದಿನಿ ಗೌಡ ಹಾಗೂ ಹೊಳಲ್ಕೆರೆ ಯ ಯುವ ಕಾಂಗ್ರೆಸ್ ಮುಖಂಡರಾದ ರಘು, ಮತ್ತು ಗ್ರಾಮದ ಮುಖಂಡರು ಉಪಸ್ಥಿತರಿದ್ದರು..
ಸುದ್ದಿ ಮತ್ತು ಜಾಹೀರಾತಿಗೆ ಸಂಪರ್ಕಿಸಿ: 8660924503