ನದಿಯಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ವೈರಲ್

ಕ್ರೈಂ

ವೇದಾವತಿ ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಪ್ರಕರಣಕ್ಕರ ಸಂಬಂಧಿಸಿದಂತೆ ಇಂದು ಯುವಕ ಕುಮಾರ್ ಶವವಾಗಿ ಪತ್ತೆಯಾಗಿದ್ದಾನೆ.

 

 

 

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಚೌಳೂರು ಬಳಿ ನಿನ್ನೆ ಘಟನೆ ನಡೆದಿತ್ತು. ವೇದಾವತಿ ನದಿಯಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಸೆರೆಯಾಗಿತ್ತು. ಈ ಸಮಯದಲ್ಲಿ ಹಗ್ಗ ಬಿಟ್ಟು ಕುಮಾರ್ ನನ್ನು ಮೇಲೆತ್ತಲು ಗ್ರಾಮಸ್ಥರು ಪ್ರಯತ್ನ ಪಟ್ಟಿದ್ದರೂ ಕೂಡ ಅದು ಫಲಕಾರಿಯಾಗಿರಲಿಲ್ಲ. ನೀರಿನ ರಭಸಕ್ಕೆ ಕುಮಾರ್ ಕೊಚ್ಚಿ ಹೋಗಿದ್ದ, ಕುರಿ‌ಮೈ ತೊಳೆಯಲು ಹೋಗಿದ್ದಾಗ ಈ ಘಟನೆ ನಡೆದಿತ್ತು. ಪರುಶುರಾಮಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *