ವೇದಾವತಿ ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಪ್ರಕರಣಕ್ಕರ ಸಂಬಂಧಿಸಿದಂತೆ ಇಂದು ಯುವಕ ಕುಮಾರ್ ಶವವಾಗಿ ಪತ್ತೆಯಾಗಿದ್ದಾನೆ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಚೌಳೂರು ಬಳಿ ನಿನ್ನೆ ಘಟನೆ ನಡೆದಿತ್ತು. ವೇದಾವತಿ ನದಿಯಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಸೆರೆಯಾಗಿತ್ತು. ಈ ಸಮಯದಲ್ಲಿ ಹಗ್ಗ ಬಿಟ್ಟು ಕುಮಾರ್ ನನ್ನು ಮೇಲೆತ್ತಲು ಗ್ರಾಮಸ್ಥರು ಪ್ರಯತ್ನ ಪಟ್ಟಿದ್ದರೂ ಕೂಡ ಅದು ಫಲಕಾರಿಯಾಗಿರಲಿಲ್ಲ. ನೀರಿನ ರಭಸಕ್ಕೆ ಕುಮಾರ್ ಕೊಚ್ಚಿ ಹೋಗಿದ್ದ, ಕುರಿಮೈ ತೊಳೆಯಲು ಹೋಗಿದ್ದಾಗ ಈ ಘಟನೆ ನಡೆದಿತ್ತು. ಪರುಶುರಾಮಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.