ತಮ್ಮ ಕ್ಲಿಷ್ಟ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ

ಜಿಲ್ಲಾ ಸುದ್ದಿ

ಚಳ್ಳಕೆರೆ ತಾಲೂಕಿನ ಪರಶುರಾಂಪುರ ಹೋಬಳಿಯ ಮಹದೇವಪುರ ಗ್ರಾಮದಲ್ಲಿ 27 ರಂದು ಜಿಲ್ಲಾಧಿಕಾರಿಗಳ ನಡೆಯ ಕಡೆ ಎಂಬ ಕಾರ್ಯಕ್ರಮ ಆಯೋಜಿಸಿದ್ದು ಈ  ಕಾರ್ಯಕ್ರಮದಲ್ಲಿ ಪಿ ಮಹದೇವಪುರ ಪಂಚಾಯತಿ ವ್ಯಾಪ್ತಿಯಲ್ಲಿರುವ ಎಲ್ಲ ಸಾರ್ವಜನಿಕರು ಕೂಡ ಸರ್ಕಾರದಿಂದ ಕೊಡುವ ಮತ್ತು ಕಂದಾಯ ಇಲಾಖೆಯಲ್ಲಿರುವಂತ ಕ್ಲಿಷ್ಟ ಸಮಸ್ಯೆಗಳನ್ನು ಬಗೆಹರಿಸಿ ಕೊಳ್ಳಬೇಕೆಂದು ಚಳ್ಳಕೆರೆ ತಹಶೀಲ್ದಾರ್ ಎನ್ ರಘುಮೂರ್ತಿ ಹೇಳಿದರು ಅವರು ಇಂದು ಪಿ ಮಹಾದೇವಪುರ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಪಂಚಾಯಿತಿ ಸದಸ್ಯರುಗಳು ಹಾಗೂ ಕಂದಾಯ ಇಲಾಖೆ ಮತ್ತು ಗ್ರಾಮೀಣ ಅಭಿವೃದ್ಧಿ ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡಿ ಅಂದಿನ ಕಾರ್ಯಕ್ರಮವನ್ನು ಕ್ಷೇತ್ರದ ಶಾಸಕರಾದ ಶ್ರೀ ಟಿ ರಘುಮೂರ್ತಿ ರವರು ಉದ್ಘಾಟಿಸಲಿದ್ದು ತಾಲೂಕಿನ ಎಲ್ಲಾ ಅಧಿಕಾರಿಗಳು ಇಡೀ ದಿನ ಈ ಪಂಚಾಯತಿಯಲ್ಲಿ ಇರುತ್ತಾರೆ ವಿವಿಧ ಇಲಾಖೆಗಳ ಯಾವುದೇ ಸಮಸ್ಯೆಗಳಿದ್ದಲ್ಲಿ ಮುಕ್ತವಾಗಿ ಅಂದು ಚರ್ಚಿಸಬಹುದಾಗಿದೆ ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರಿಗೆ ಆಗುವಂತಹ ಎಲ್ಲ ಕೆಲಸಗಳನ್ನು ಪಂಚಾಯಿತಿ ಮಟ್ಟದಲ್ಲಿನ ಈ ಒಂದು ಕಾರ್ಯಕ್ರಮದಲ್ಲಿ ರೈತರ ಮನೆ ಬಾಗಿಲಿಗೆ ಬಂದು ಅವರ ಎಲ್ಲ ಕೆಲಸ ಕಾರ್ಯಗಳನ್ನು ಹಾಗೂ ಅವರ ಆಶೋತ್ತರಗಳನ್ನು ಈಡೇರಿಸಿ ನೆಮ್ಮದಿ ಬದುಕನ್ನು ಕಟ್ಟಿಕೊಳ್ಳಲು ಅಧಿಕಾರಿಗಳು ಮತ್ತು ನೌಕರರು ಸಹಕಾರಿಯಾಗಬೇಕೆಂಬುದು ಸರ್ಕಾರದ ಆಶಯವಾಗಿದೆ ಈ ಹಿನ್ನೆಲೆಯಲ್ಲಿ ಈಗಾಗಲೇ ಚಳ್ಳಕೆರೆ ತಾಲೂಕಿನಲ್ಲಿ 58 ಗ್ರಾಮಗಳನ್ನು ಕಂದಾಯ ಇಲಾಖೆಗೆ ಸಂಬಂದಿಸಿದ ಸಮಸ್ಯೆಗಳನ್ನು ತೀರಿ ಸಲಾಗಿದೆ ಅದೇ ರೀತಿ ಈ ಗ್ರಾಮದಲ್ಲೂ ಕೂಡ ಕಂದಾಯ ಇಲಾಖೆಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಗಮನಕ್ಕೆ ಮುಂಗಡವಾಗಿ ತರಬೇಕು ಈ ಬಗ್ಗೆ ಪ್ರತಿ ಹಳ್ಳಿಯಲ್ಲೇ ಟಾಮ್ ಟಾ ಮೂಲಕ ಪ್ರಚಾರಪಡಿಸಲಾಗಿದೆ ಎಲ್ಲ ಪಂಚಾಯತಿ ಸದಸ್ಯರುಗಳು ನಮ್ಮ ವ್ಯಾಪ್ತಿಯಲ್ಲಿ ಬರುವಂತ ಸಾರ್ವಜನಿಕಸಮಸ್ಯೆಗಳನ್ನು ಮುಕ್ತವಾಗಿ ತಿಳಿಸಿದಲ್ಲಿ ಬಗೆಹರಿಸುವ ಕೆಲಸವನ್ನು ಮಾಡಲಾಗುವುದು ಕಂದಾಯ ಇಲಾಖೆಯ ಪೌತಿ ಖಾತೆ ಪೋಡಿ ಪಿಂಚಣಿ ದಾರಿ ಪ್ರವಾಹದಿಂದ ಉಂಟಾಗುವಂತ ಪರಿಹಾರಕ್ಕೆ ಸಂಬಂದಿಸಿದ ಸಮಸ್ಯೆಗಳು ಇನ್ನು ಹತ್ತು ಹಲವು ಸಮಸ್ಯೆಗಳನ್ನು ಬಗೆಹರಿಸಲಾಗುವುದು ಈ ಭಾಗದ ಎಲ್ಲ ಸಾರ್ವಜನಿಕರು ಈ ಒಂದು ಕಾರ್ಯಕ್ರಮದ ಇದು ಉಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾ ಡಿದರು ಈ ಸಂದರ್ಭದಲ್ಲಿ ಪಿ ಮಾದೇಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ತ್ಯಾಗರಾಜ್ ಸದಸ್ಯರಾದಂತಹ ವೀರೇಶ ಓಬಳೇಶ ಶಿವಣ್ಣ ರಾಜಶ್ವನಿರೀಕ್ಷಕರಾದಂತಹ ಮೋಹನ್ ಗ್ರಾಮ ಲೆಕ್ಕಾಧಿಕಾರಿಗಳಾದಂತಹ ದುರ್ಗಮ್ಮ ಮತ್ತಿತರು ಹಾಜರಿದ್ದರು

 

 

 

Leave a Reply

Your email address will not be published. Required fields are marked *