ಹೊಟ್ಟೆ ನೋವು ತಾಳಲಾರದೆ ನೇಣಿಗೆ ಶರಣಾದ ವ್ಯಕ್ತಿ

ಕ್ರೈಂ

ಹಿರಿಯೂರು:ಹೊಟ್ಟೆ ನೋವು ತಾಳಲಾರದೇ ವ್ಯಕ್ತಿಯೊಬ್ಬ ಹುಣಸೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹಿರಿಯೂರು ತಾಲ್ಲೂಕಿನ ನಡೆದಿದೆ.

 

 

 

ಮೃತ ವ್ಯಕ್ತಿಯನ್ನು ತಾಲ್ಲೂಕಿನ ಕೆರೆಕೋಡಿಹಟ್ಟಿ ಗ್ರಾಮದ 35 ವರ್ಷದ ಪ್ರಶಾಂತ ಎಂದು ಗುರುತಿಸಲಾಗಿದೆ.
ಮೃತ ವ್ಯಕ್ತಿ ಪ್ರಶಾಂತನು ಹಲವಾರು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದನು. ವಿವಿಧ ಕಡೆಗಳಲ್ಲಿ ಆಸ್ಪತ್ರೆಗೆ ತೋರಿಸಿ ಚಿಕಿತ್ಸೆ ನೀಡಿದರೂ ಹೊಟ್ಟೆ ನೋವು ವಾಸಿಯಾಗಿರಲಿಲ್ಲ ಎನ್ನಲಾಗಿದೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ನನ್ನ ಪತಿಯ ಸಾವಿಗೆ ಬೇರೆ ಯಾವುದೇ ಕಾರಣ ಇಲ್ಲ ಎಂದು ಪತ್ನಿ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೇಳಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *