ಇಂದು ಕೋಟೆ ನಾಡಿಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್ ಆಗಮನ

ರಾಜಕೀಯ

 

ಇಂದು ಚಿತ್ರದುರ್ಗಕ್ಕೆ ಎಂ.ಬಿ.ಪಾಟೀಲ್ ಆಗಮನ

ನೀಲಂಠೇಶ್ವರ ದೇವಸ್ಥಾನದಿಂದ ಅದ್ದೂರಿ ಮೆರವಣಿಗೆ

 

 

 

ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಬಹಿರಂಗ ಸಭೆ, ಗೌರವ ಸಮರ್ಪಣೆ.

ಚಿತ್ರದುರ್ಗ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರೂ, ಶಾಸಕರಾದ ಎಂ.ಬಿ.ಪಾಟೀಲ್ ಅವರು ಇಂದು ಪ್ರಥಮಬಾರಿಗೆ ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದು, ಅವರನ್ನೂ ಅದ್ದೂರಿ ಮೆರವಣಿಗೆ ಮೂಲಕ ಪಕ್ಷದ ಕಚೇರಿಗೆ ಕರೆತರಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ ಪೀರ್ ತಿಳಿಸಿದ್ದಾರೆ.

ಬೆಳಗ್ಗೆ 10.30ಕ್ಕೆ ನೀಲಕಂಠೇಶ್ವರ ದೇವಸ್ಥಾನದಿಂದ ಡಿಸಿ ಸರ್ಕಲ್ ವರೆಗೆ ಪಾದಯಾತ್ರೆ ಮೆರವಣೆಗೆ ಮೂಲಕ ಅಧ್ಯಕ್ಷರನ್ನು ಪಕ್ಷದ ಕಚೇರಿಗೆ ಕರೆತರಲಾಗುವುದು. ನಂತರ ಪಕ್ಷದ ಕಚೇರಿ ಮುಂಭಾಗ ಬಹಿರಂಗ ಸಭೆ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಎಂ.ಬಿ.ಪಾಟೀಲ್ ಅವರನ್ನು ಪಕ್ಷದ ಸಮಸ್ತ ಕಾರ್ಯಕರ್ತರ ಪರವಾಗಿ ಗೌರವಿಸಲಾಗುತ್ತದೆ.

ಪಾದಯಾತ್ರೆ ಮೆರವಣಿಗೆ ಹಾಗೂ ಬಹಿರಂಗ ಸಭೆಯಲ್ಲಿ ಮಾಜಿ ಸಚಿವರಾದ ಎಚ್. ಆಂಜನೇಯ, ಡಿ.ಸುಧಾಕರ್, ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮಾಜಿ ಶಾಸಕರಾದ ಬಿ.ಜಿ.ಗೋವಿಂದಪ್ಪ, ಎ.ವಿ.ಉಮಾಪತಿ, ಎಸ್.ತಿಪ್ಪೇಸ್ವಾಮಿ, ಷಣ್ಮುಖಪ್ಪ, ವಿಧಾನಪರಿಷತ್ ಮಾಜಿ ಸದಸ್ಯರಾದ ರಘು ಆಚಾರ್, ಜಯಮ್ಮ ಬಾಲರಾಜ್, ಮುಖಂಡರಾದ ಹನುಮಲಿ ಷಣ್ಮುಖಪ್ಪ, ಡಾ.ಯೋಗೀಶಬಾಬು, ಬಿ.ಸೋಮಶೇಖರ್, ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ಹಾಲಸ್ವಾಮಿ ಸೇರಿದಂತೆ ಪಕ್ಷದ ವಿವಿಧ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಹಾಲಿ-ಮಾಜಿ ಜನಪ್ರತಿನಿಧಿಗಳು, ಅನೇಕ ಮುಖಂಡರು ಪಾಲ್ಗೊಳ್ಳಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ ಪೀರ್ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *