ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು: ಸಿಇಓ ಸೂಚನೆ

ಜಿಲ್ಲಾ ಸುದ್ದಿ

ಜಲ‌ಜೀವನ್ ಮಿಷನ್ ಕಾಮಗಾರಿಯು ಉತ್ತಮ ಗುಣಮಟ್ಟದಲ್ಲಿರಬೇಕು ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ಸಮಸ್ಯೆ ಆಗಬಾರದು ಎಂದು ಅಲ್ಲಿನ ಇಂಜಿನಿಯರ್ ಗೆ ಸಿಇಓ ದಿವಾಕರ್ ಸೂಚಿಸಿದರು.
ಅವರು ಭರಮಸಾಗರದ ಕೋಡಿ ರಂಗವ್ವನಹಳ್ಳಿಯಲ್ಲಿ ನಡೆಯುತ್ತಿರುವ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿ ವೀಕ್ಷಿಸಿ ಮಾತನಾಡಿದರು.ಈ ಸಮಯದಲ್ಲಿ ಸಾರ್ವಜನಿಕರಿಂದ ಮಾಹಿತಿ ಪಡೆದುಕೊಂಡರು

 

 

 

ಇಸಾಮುದ್ರದಲ್ಲಿ‌ಮಹಿಳಾ ಸಂಘಟನೆಗಳೊಂದಿಗೆ ಸಂವಾದ ನಡೆಸಿದ ಸಿಇಓ‌ದಿವಾಕರ್ ಅವರು ಮಹಿಳೆಯರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು. ಈ ಸಮಯದಲ್ಲಿ ಸ್ಥಳದಲ್ಲಿದ್ದ ಆರೋಗ್ಯ ಇಲಾಖೆ ಸಿಬ್ಬಂದಿಗಳು ಮಹಿಳೆಯರ ಆರೋಗ್ಯ ತಪಾಸಣೆ ನಡೆಸಿದರು. ಇದರ ಜೊತೆಗೆ ಆರೋಗ್ಯ ಕೇಂದ್ರದಿಂದ ನಮಗೆ ಉತ್ತಮ‌ ಸಹಕಾರ ಸಿಗುತ್ತಿದೆ. ಸಕಾಲದಲ್ಲಿ ಚಿಕಿತ್ಸೆ ಸಿಗುತ್ತಿದೆ ಎಂದರು. ನಂತರ ಲಕ್ಷ್ಮಿ ಸಾಗರದ ಪ್ರಾಥಮಿಕ‌ ಆರೋಗ್ಯ ಕೇಂದ್ರಕ್ಕೆ ಭೇಟಿ‌ ನೀಡಿ ಅಲ್ಲಿನ ಸ್ಥಿತಿಯನ್ನು ನೋಡಿ ಶ್ಲಾಘಿಸಿದರು. ಉಪಕಾರ್ಯದರ್ಶಿಗಳು ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಜರಿದ್ದರು.

Leave a Reply

Your email address will not be published. Required fields are marked *