ಪತ್ನಿ ಪ್ರಾಣಕ್ಕೆ ಕುತ್ತು ತಂದ ಪತಿ ಮಾಡಿದ ಸಾಲ

ರಾಜ್ಯ

ಸಾಲದವರ ಕಾಟ ತಾಳಲಾರದೇ ಮನನೊಂದ ಗೃಹಿಣಿಯೊಬ್ಬರು ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

 

 

 

ಹೊಳಲ್ಕೆರೆಯ ಬಸವ ಲೇಔಟ್ ನಿವಾಸಿ ರಂಜಿತಾ (23) ಆತ್ಮಹತ್ಯೆ ಮಾಡಿಕೊಂಡವರು.
ರಂಜಿತಾ ಐದು ವರ್ಷಗಳ ಹಿಂದೆ ದರ್ಶನ್ ಬಾಲು ಎಂಬುವರನ್ನು ಮದುವೆಯಾಗಿದ್ದರು. ದಂಪತಿಗೆ ನಾಲ್ಕು ವರ್ಷದ ಗಂಡು ಮಗು ಇದೆ. ಪತಿ ನೀರಾವರಿ ಇಲಾಖೆಯಲ್ಲಿ ಎಂಜಿನಿಯರ್ ಆಗಿ ಸರ್ಕಾರಿ ಕೆಲಸದಲ್ಲಿದ್ದರೂ, ಖಾಸಗಿಯಾಗಿ ಸುಮಾರು ₹1 ಕೋಟಿಗೂ ಹೆಚ್ಚು ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಸಾಲವು ಐಪಿಎಲ್ ಬೆಟ್ಟಿಂಗ್ ಗಾಗಿ ಮಾಡಿದ್ದು ಎಂದು ಹೇಳಲಾಗುತ್ತಿದೆ. ಸಾಲವನ್ನು ಮೀಟ‌ರ್ ಬಡ್ಡಿ ಲೆಕ್ಕದಲ್ಲಿ ಪಡೆದಿದ್ದು, ಸಾಲ ಕೊಟ್ಟವರು ಬಡ್ಡಿ ಹಾಗೂ ಅಸಲು ವಾಪಸ್ ಕೊಡುವಂತೆ ಪೀಡಿಸುತ್ತಿದ್ದರು ಎನ್ನಲಾಗಿದೆ.ಸಾಲ ಕೊಟ್ಟವರು ಹಣಕ್ಕಾಗಿ ಮನೆಯ ಹತ್ತಿರ ಬಂದು ಪತಿ, ಪತ್ನಿ ಇಬ್ಬರನ್ನೂ ಪೀಡಿಸುತ್ತಿದ್ದರು. ಇದರಿಂದ ಮನನೊಂದು ರಂಜಿತಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ನನ್ನ ಪತ್ನಿ ಸಾವಿಗೆ ಸಾಲ ಕೊಟ್ಟವರೇ ಕಾರಣ ಎಂದು ಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ಹೊಳಲ್ಕೆರೆ ಪೊಲೀಸರು ಪ್ರಕರಣ ಪರಿಶೀಲಿಸುತ್ತಿದ್ದಾರೆ.

Leave a Reply

Your email address will not be published. Required fields are marked *