ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ಅವರು ನಾಳೆ ದಾವಣಗೆರೆಯಲ್ಲಿ ಚುನಾವಣಾ ಪ್ರಚಾರವನ್ನು ಉದ್ಘಾಟಿಸಲು ಆಗಮಿಸಲು ಬರುತ್ತಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಆಗಮಿಸುತ್ತಿದ್ದು, ಚುತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮತದಾರರು, ಕಾರ್ಯಕರ್ತರು ಹಾಗು ಸಾರ್ವಜನಿಕರು ಹೆಚ್ಚಿನಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಹೊಳಲ್ಕೆರೆ ಕ್ಷೇತ್ರದ ಅಭ್ಯರ್ಥಿ ಮಹಂತೇಶ್ ಮನವಿ ಮಾಡಿದ್ದಾರೆ.