ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾ ವೃತ್ತಿ ಸಂಬಂಧಿತ ನಾನಾ ಪದಾಧಿಕಾರಿಗಳ ಜತೆ ಸಭೆ ನಡೆಸಿ ಎಲ್ಲರ ಅಹವಾಲು ಮತ್ತು ಬೇಡಿಕೆಗಳನ್ನು ಆಲಿಸಿದರು.
ಪತ್ರಿಕಾ ವಿತರಕರ ಸಂಘ ಸೇರಿ ಕಾರ್ಯನಿರತ ಪತ್ರಕರ್ತರ ಸಂಘಟನೆಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಒಟ್ಟು ಒಂಬತ್ತು ಸಂಘಟನೆಗಳ 12 ಮಂದಿ ಪದಾಧಿಕಾರಿಗಳು ತಮ್ಮ ಬೇಡಿಕೆಗಳನ್ನು ಮಂಡಿಸಿದರು.
ಎಲ್ಲರ ಬೇಡಿಕೆಗಳನ್ನೂ ಸಮಗ್ರವಾಗಿ ಪರಿಶೀಲಿಸಿ ಬಳಿಕ ಪ್ರತಿಕ್ರಿಯಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.