Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಅಭಿವೃದ್ದಿ ಪಥದಲ್ಲಿ ಸಾಗುತ್ತಿದೆ ಜಿಲ್ಲಾಸ್ಪತ್ರೆ: ಡಿಎಸ್ ಡಾ. ಎಸ್ಪಿ ರವೀಂದ್ರ
ರಾಜ್ಯ

ಅಭಿವೃದ್ದಿ ಪಥದಲ್ಲಿ ಸಾಗುತ್ತಿದೆ ಜಿಲ್ಲಾಸ್ಪತ್ರೆ: ಡಿಎಸ್ ಡಾ. ಎಸ್ಪಿ ರವೀಂದ್ರ

D KumaraswamyBy D KumaraswamyOctober 1, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: null;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: off;albedo: ;confidence: ;motionLevel: -1;weatherinfo: null;temperature: 43;
Share
Facebook Twitter LinkedIn Pinterest Email

 

ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ, ರೋಗಿಗಳಿಗೆ ಉತ್ತಮವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್.ಪಿ. ರವೀಂದ್ರ ಹೇಳಿದ್ದಾರೆ.
ಈ ಕುರಿತು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಮಂಗಳವಾರ ಜಿಲ್ಲಾ ಆಸ್ಪತ್ರೆಯ ಕಾರ್ಯವೈಖರಿಯಲ್ಲಿ ಉಂಟಾದ ಬದಲಾವಣೆ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಧ್ಯಮ ಮಿತ್ರರಿಗೆ ಅಂಕಿ ಸಂಖ್ಯೆಗಳ ಸಮೇತ ಮಾಹಿತಿ ನೀಡಿದ್ದಾರೆ.
26,090 ಒಳರೊಗಿಗಳಿಗೆ ಉಚಿತ ಚಿಕಿತ್ಸೆ:
ಕಳೆದ ಅಕ್ಟೋಬರ್ ನಿಂದ ಇಲ್ಲಿಯವರೆಗೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಎ.ಬಿ.ಆರ್.ಕೆ (ಆಯಷ್ಮಾನ್ ಭಾರತ ಆರೋಗ್ಯ ಕರ್ನಾಟಕ) ಅಡಿ 26,090 ಒಳರೋಗಿಗಳು ದಾಖಲಾಗಿ ಉಚಿತ ಚಿಕಿತ್ಸೆ ಪಡೆದಿದ್ದಾರೆ. ಜಿಲ್ಲಾ ಆಸ್ಪತ್ರೆಯಿಂದ ಸುವರ್ಣ ಕರ್ನಾಟಕ ಆರೋಗ್ಯ ಟ್ರಸ್ಟ್ಗೆ ಎ.ಬಿ.ಆರ್.ಕೆ ಅಡಿ ಚಿಕಿತ್ಸೆ ನೀಡಿದ 24,620 ಕ್ಲೇಮ್‌ಗಳನ್ನು ಸಲ್ಲಿಕೆ ಮಾಡಲಾಗಿದೆ. ಬಿಡುಗಡೆಯಾದ ಕ್ಲೇಮ್ ಮೊತ್ತದಲ್ಲಿ ಶೇ.20 ರಷ್ಟ ಮೊತ್ತವನ್ನು ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಇನ್ಸೆಟಿವ್ ರೂಪದಲ್ಲಿ ನೀಡಿ, ಮತ್ತಷ್ಟು ಉತ್ತಮ ಕಾರ್ಯಕ್ಕೆ ಪ್ರೇರಣೆ ನೀಡಲಾಗುತ್ತಿದೆ. ಈ ವರ್ಷದಲ್ಲಿ ರೂ.1.10 ಕೋಟಿ ಇನ್ಸೆಟಿವ್ ನೀಡಲಾಗಿದೆ.
ಏರಿಕೆಯಾದ ಶಸ್ತ್ರಚಿಕಿತ್ಸೆ ಪ್ರಮಾಣ :
ಶಸ್ತ್ರಚಿಕಿತ್ಸಕರು ಹಾಗೂ ವೈದ್ಯರು ಬೇರೆಡೆಗೆ ರೋಗಿಗಳನ್ನು ಶಿಫಾರಸ್ಸು ಮಾಡುವುದನ್ನು ತಡೆಗಟ್ಟಲಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಹೆಚ್ಚಿನ ಶಸ್ತ್ರಚಿಕಿತ್ಸೆಗಳನ್ನು ಕೈಗೊಳ್ಳಲಾಗುತ್ತಿದೆ. ಒಂದು ವರ್ಷ ಅವಧಿಯಲ್ಲಿ 2520 ಜನರಲ್ ಸರ್ಜರಿ, 1510 ಮೂಳೆ ಶಸ್ತ್ರಚಿಕಿತ್ಸೆ, 1100 ಕಣ್ಣ ಪೊರೆ, 100 ಇತರೆ ಕಣ್ಣಿನ ಶಸ್ತ್ರಚಿಕಿತ್ಸೆ, 450 ಲ್ಯಾಪ್ರೋಸ್ಕೋಪಿಕ್ ಸರ್ಜರಿ, 15 ಪುರುಷ ಸಂತಾನಹರಣ ಸೇರಿದಂತೆ, ಜಿಲ್ಲಾ ಆಸ್ಪತ್ರೆ ಮಕ್ಕಳ ವಿಭಾಗದಲ್ಲಿ 4651 ಸಿಜೆರಿಯನ್, ಗರ್ಭಕೋಶ ಇತರೆ ತೊಂದರೆ ಇರುವ 300 ವಿವಿಧ ಶಸ್ತ್ರಚಿಕಿತ್ಸೆ, 2100 ಸಹಜ ಹೆರಿಗೆಗಳನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಮಾಡಲಾಗಿದೆ. ಇದರೊಂದಿಗೆ 722 ಹಾವು ಕಡಿತ, 3626 ರಸ್ತೆ ಅಪಘಾತ, 3246 ಹೊಡದಾಟ, 2194 ವಿಷಪ್ರಾಶನದಂತಹ ಪ್ರಕರಣಗಳಲ್ಲಿ ಚಿಕಿತ್ಸೆ ನೀಡಲಾಗಿದೆ.
ನೂತನ ಕಟ್ಟಡದಲ್ಲಿ ತಾಯಿ ಮಕ್ಕಳ ಆಸ್ಪತ್ರೆ:
ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಕೋವಿಡ್ ಪೂರ್ವದಲ್ಲಿ ನಿರ್ಮಾಣವಾದ ನೂತನ ಕಟ್ಟಡದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ಕಾರ್ಯಾರಂಭ ಮಾಡಿದೆ. ನೂತನ ಕಟ್ಟಡದಲ್ಲಿ ಹೆರಿಗೆ ಕೇಂದ್ರ, ಆಪರೇಷನ್ ಥಿಯೇಟರ್, ವಾರ್ಡ್ ಹಾಗೂ ಔಷಧ ವಿತರಣೆ ಘಟಕಗಳನ್ನು ಪ್ರತ್ಯೇಕವಾಗಿ ತೆರದು ಚಿಕಿತ್ಸೆ ನೀಡಲಾಗುತ್ತಿದೆ. 4651 ಸಿಜೆರಿಯನ್, 2100 ಸಹಜ ಹೆರಿಗೆ ಸೇರಿದಂತೆ 6751 ಸುರುಕ್ಷಿತ ಹೆರಿಗೆಗಳನ್ನು ತಾಯಿ ಮತ್ತು ಮಕ್ಕಳ ವಿಭಾಗದಿಂದ ಮಾಡಲಾಗಿದೆ. ಸದ್ಯ ತಾಯಿ ಮಕ್ಕಳ ವಿಭಾಗ 100 ಹಾಸಿಗೆಗಳ ಸಾಮರ್ಥ್ಯ ಹೊಂದಿದೆ. 160 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಬೇಡಿಕೆ ಇರುವುದರಿಂದ 50 ಹಾಸಿಗೆಗಳ ಸಾಮರ್ಥ್ಯ ಹೆಚ್ಚಿಸಲು ಸಿದ್ದತೆ ನಡೆಸಲಾಗಿದೆ. ಅಪೌಷ್ಠಿಕ ಮಕ್ಕಳು ಹಾಗೂ ತಾಯಿಯ ಆರೈಕೆಗೆ 10 ಬೆಡ್‌ಗಳ ಎನ್‌ಆರ್‌ಸಿ ಕೇಂದ್ರವನ್ನು ಸಹ ಇಲ್ಲಿ ತೆರೆಯಲಾಗಿದೆ. ನವಜಾತ ಮ್ಕಕಳಲ್ಲಿ ಕಂಡುಬರುವ ಅಂಗವಿಕಲತೆ ಹಾಗೂ ಇತರೆ ಸಮಸ್ಯೆಗಳನ್ನು ಆರಂಭದಲ್ಲಿಯೇ ಗುರುತಿಸಿ ವಿಶೇಷ ಚಿಕಿತ್ಸೆ ನೀಡಲು ಡಿ.ಇ.ಐ.ಸಿ (ಡಿಸ್ಟ್ರಿಕ್ಟ್ ರ‍್ಲೀ ಇನ್ಟರ್‌ವೆನ್ಷನ್ ಸೆಂಟರ್) ವಿಶೇಷ ಕೇಂದ್ರ ತೆರೆಯಲಾಗುವುದು ಒಂದು ವರ್ಷದಲ್ಲಿ ಶ್ವಾಶಕೋಶ, ಉಸಿರಾಟ ಸೇರಿದಂತೆ ಇತರೆ ತೊಂದರೆ ಅನುಭವಿಸುವ 2370 ನವ ಜಾತ ಶಿಶುಗಳಿಗೆ ಚಿಕತ್ಸೆ ನೀಡಲಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿಯೇ 1913 ಮಕ್ಕಳ ಸಂಪೂರ್ಣ ಚಿಕಿತ್ಸೆ ಮಾಡಿ ಬಿಡುಗಡೆ ಮಾಡಲಾಗಿದೆ. 275 ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೇರೆಡೆಗೆ ಶಿಫಾರಸ್ಸು ಮಾಡಲಾಗಿದೆ. 1000.ಗ್ರಾಂಗಿಂತಲೂ ಕಡಿಮೆ ತೂಕದ 25 ಮಕ್ಕಳಿಗೆ ತಿಂಗಳಾನುಗಟ್ಟಲೇ ವಿಶೇಷ ಆರಕೈ ನೀಡಲಾಗಿದೆ. 1000 ರಿಂದ 1500 73 ಮಕ್ಕಳ ಚಿಕಿತ್ಸೆ ನೀಡಲಾಗಿದೆ. ನವಜಾತ ಶಿಶು ಪ್ರಮಾಣವನ್ನು ತಗ್ಗಸಿಲಾಗಿದೆ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.

 

 

Share. Facebook Twitter Pinterest LinkedIn Tumblr WhatsApp Email
Previous Articleಹೊಳಲ್ಕೆರೆ ರೈತರಿಗೆ ಬಂಪರ್ ಕೊಡುಗೆ ಕೊಟ್ಟ ಶಾಸಕ ಎಂ. ಚಂದ್ರಪ್ಪ
Next Article ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್ ಕೊಟ್ಟ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಎಸ್ಪಿ ರವೀಂದ್ರ
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.