Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಮತ ಕೇಳಲು ಕಾಡುಗೊಲ್ಲರ ಹಟ್ಟಿಗಳಿಗೆ ಬರಬೇಡಿ: ಶಿವುಯಾದವ್ ಎಚ್ಚರಿಕೆ
ರಾಜ್ಯ

ಮತ ಕೇಳಲು ಕಾಡುಗೊಲ್ಲರ ಹಟ್ಟಿಗಳಿಗೆ ಬರಬೇಡಿ: ಶಿವುಯಾದವ್ ಎಚ್ಚರಿಕೆ

D KumaraswamyBy D KumaraswamyFebruary 4, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ರಾಜ್ಯ ಸರ್ಕಾರ ಕಾಡುಗೊಲ್ಲರನ್ನು ಎಸ್.ಟಿ.ಗೆ ಸೇರ್ಪಡೆ ಮಾಡುವಂತೆ ಕಳೆದ 2014ರಲ್ಲಿ ಶಿಫಾರಸ್ಸು ಮಾಡಿತ್ತು, ಆದರೆ ಕೇಂದ್ರ ಸರ್ಕಾರ 10 ವರ್ಷ ಕಳೆದರೂ ಸಹಾ ಅದನ್ನು ಜಾರಿ ಮಾಡಿಲ್ಲ ಕೇಂದ್ರ ಸರ್ಕಾರ ಈ ಅಧಿವೇಶನದಲ್ಲಿ ಮಾಡದಿದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಡುಗೊಲ್ಲರು ತಮ್ಮ ಶಕ್ತಿಯನ್ನು ಬಿಜೆಪಿ ವಿರುದ್ದ ಪ್ರದರ್ಶನ ಮಾಡಬೇಕಾಗುತ್ತದೆ ಎಂದು ಕಾಡುಗೊಲ್ಲ ಕ್ಷೇಮಾಭಿವೃದ್ದಿ ಸಂಘದ ರಾಜ್ಯಾಧ್ಯಕ್ಷ ಶಿವುಯಾದವ್ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ.
ಚಿತ್ರದುರ್ಗದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಡುಗೊಲ್ಲರನ್ನು ಎಸ್.ಟಿ.ಗೆ ಸೇರ್ಪಡೆ ಮಾಡುವಂತೆ ಅನ್ನಪೂರ್ಣಮ್ಮ ವರದಿಯನ್ನು ನೀಡಿತ್ತು. ಅದರಂತೆ ಕುಲಶಾಸ್ತ್ರಿ ಅಧ್ಯಯನವೂ ಸಹಾ ಆಗಿತ್ತು. ಕಾಡುಗೊಲ್ಲ ಜನಾಂಗ ಎಸ್.ಟಿ.ಗೆ ಸೇರ್ಪಡೆಯಾಗುವ ಎಲ್ಲಾ ರೀತಿಯ ಅರ್ಹತೆಯನ್ನು ಹೊಂದಿದೆ, ಆದರೆ ಕೇಂದ್ರ ಸರ್ಕಾರವು ಕಾಡುಗೊಲ್ಲ ಜನಾಂಗವನ್ನು ಎಸ್,ಟಿ.ಗೆ ಸೇರಿಸುವುದಾಗಿ ಭರವಸೆಯನ್ನು ನೀಡಿತ್ತು. ಆದರೆ ಅದನ್ನು ಇದುವರೆವಿಗೂ ಈಡೇರಿಸಿಲ್ಲ, ಈಗ ಕೇಂದ್ರ ಸರ್ಕಾರದ ಅವಧಿ ಮುಗಿಯುತ್ತಾ ಬಂದಿದೆ ಇನ್ನು ಕೆಲವು ದಿನಗಳು ಮಾತ್ರ ಬಾಕಿ ಇದೆ. ಈಗ ಅಧಿವೇಶನ ನಡೆಯುತ್ತಿದೆ, ಈ ಸಮಯದಲ್ಲಿ ಕಾಡುಗೊಲ್ಲರ ಬಗ್ಗೆ ಸಂಸತ್‍ನಲ್ಲಿ ಚರ್ಚೆಯಾಗಿ ನಮ್ಮನ್ನು ಎಸ್.ಟಿ.ಗೆ ಸೇರ್ಪಡೆಯಾಗುವಂತೆ ಮಾಡುವ ಹೊಣೆಗಾರಿಕೆ ಕೇಂದ್ರ ಸರ್ಕಾರದ ಮೇಲಿದೆ ಎಂದರು.
ಕಳೆದ ಚುನಾವಣೆಯಲ್ಲಿ ಕೇಂದ್ರ ಸರ್ಕಾರ ನಮ್ಮ ಜನಾಂಗವನ್ನು ಎಸ್.ಟಿ.ಗೆ ಸೇರ್ಪಡೆ ಮಾಡುವುದಾಗಿ ಭರವಸೆಯನ್ನು ನೀಡಿತ್ತು. ಇದರಂತೆ ರಾಜ್ಯ ಸರ್ಕಾರವೂ ಸಹಾ 2014ರಲ್ಲಿಯೇ ಕಾಡುಗೊಲ್ಲ ಜನಾಂಗವನ್ನು ಎಸ್.ಟಿ.ಗೆ ಸೇರಿಸುವಂತೆ ಶಿಫಾರಸ್ಸು ಮಾಡಿತ್ತು, ಆದರೆ ಕೇಂದ್ರ ಸರ್ಕಾರಕ್ಕೆ ಹೋದ ಫೈಲು ಒಂದು ಇಂಚು ಸಹಾ ಸರಿದಿಲ್ಲ ಎಲ್ಲಿ ಇದೇಯೋ ಅಲ್ಲಿಯೇ ಇದೆ ಇದರ ಬಗ್ಗೆ ಹಲವಾರು ಬಾರಿ ಸಂಬಂಧಪಟ್ಟ ಮಂತ್ರಿಗಳಿಗೆ ಮನವಿ ಸಹ ಮಾಡಲಾಗಿತ್ತಾದರೂ ಏನು ಪ್ರಯೋಜನವಾಗಿಲ್ಲ ಎಂದ ಅವರು, ಈಗ ಕೇಂದ್ರ ಸರ್ಕಾರದ ಅಧಿವೇಶನ ನಡೆಯುತ್ತಿದೆ. ಇದರಲ್ಲಿ ನಮ್ಮ ಜನಾಂಗದವರನ್ನು ಎಸ್.ಟಿ.ಗೆ ಸೇರಿಸುವ ಬಗ್ಗೆ ಚರ್ಚೆ ನಡೆದು ಸೇರಿಸುವ ಕಾರ್ಯವನ್ನು ಮಾಡಬೇಕಿದೆ ಇಲ್ಲವಾದಲ್ಲಿ ಕಳೆದ ವಿಧಾನಸಭೆಯಲ್ಲಿ ಕಾಡುಗೊಲ್ಲರು ಬಿಜೆಪಿಯ ಬಗ್ಗೆ ತೆಗೆದುಕೊಂಡ ನಿರ್ಣಯವನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತೆಗೆದುಕೊಳ್ಳಲಾಗುವುದು ಈ ಹಿನ್ನಲೆಯಲ್ಲಿ ಬಿಜೆಪಿ ಸರ್ಕಾರ ಇದಕ್ಕೆ ಆಸ್ಪದ ನೀಡದೆ ಈ ಅಧಿವೇಶನದಲ್ಲಿ ನಮ್ಮ ಜನಾಂಗದ ಬಗ್ಗೆ ನಿರ್ಣಯವನ್ನು ಮಾಡಿ ಎಸ್.ಟಿ.ಗೆ ಸೇರಿಸುವ ಕಾರ್ಯವನ್ನು ಮಾಡಬೇಕು ಎಂದು ಶಿವುಯಾದವ್ ಒತ್ತಾಯಿಸಿದರು.
ಚಿತ್ರದುರ್ಗ ಕ್ಷೇತ್ರದ ಸಂಸದರು ಸಚಿವರಾದ ನಾರಾಯಣಸ್ವಾಮಿಯವರು ಇದರ ಬಗ್ಗೆ ಅಧಿವೇಶನದಲ್ಲಿ ಮಾತನ್ನು ಸಹಾ ಆಡುತ್ತಿಲ್ಲ, ನಮ್ಮ ಜನಾಂಗವನ್ನು ಎಸ್.ಟಿ.ಗೆ ಸೇರಿಸುವಂತೆ ಮನವಿಯನ್ನು ಮಾಡಲಾಗಿತ್ತು, ಆದರೆ ಅವರು ಇದರುವರೆವಿಗೂ ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ. ಇದರ ಬಗ್ಗೆ ಅಧಿವೇಶನದಲ್ಲಿಯೂ ಸಹಾ ಮಾತನಾಡಿಲ್ಲ ಎಂದು ಸಚಿವರ ವಿರುದ್ದ ಆಕ್ರೋಶವನ್ನು ವ್ಯಕ್ತಪಡಿಸಿದ ಶಿವುಯಾದವ್, ಬಿಜೆಪಿ ಈ ಬಾರಿಯ ಅಧಿವೇಶನದಲ್ಲಿ ಕಾಡುಗೊಲ್ಲರನ್ನು ಎಸ್.ಟಿ.ಗೆ ಸೇರಿಸದಿದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಮ್ಮ ಮತಗಳನ್ನು ಕೇಳಲು ಹಟ್ಟಿಗಳ ಬಳಿ ಯಾವ ಮುಖಂಡರು ಬರಬೇಡಿ ಎಂದು ಕಟುವಾಗಿ ಹೇಳಿದರು.
ಗೋಷ್ಟಿಯಲ್ಲಿ ಕಾಡುಗೊಲ್ಲ ಕ್ಷೇಮಾಭೀವೃದ್ದಿ ಸಂಘದ ಜಿಲ್ಲಾಧ್ಯಕ್ಷರಾದ ಶಿವಣ್ಣ, ಕಾರ್ಯಧ್ಯಕ್ಷರಾದ ಕದರಪ್ಪ, ಉಪಾಧ್ಯಕ್ಷರಾದ ತಿಮ್ಮೇಶ್, ಜಗದೀಶ್, ಹರೀಶ್ ಭಾಗವಹಿಸಿದ್ದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಫಲ-ಪುಷ್ಪ ಪ್ರದರ್ಶನಕ್ಕೆ ಸಚಿವ ಡಿ.ಸುಧಾಕರ್ ಚಾಲನೆ
Next Article ಚೆಕ್ ಬೌನ್ಸ್ ಪ್ರಕರಣ; ಆರೋಪಿಗೆ 1 ವರ್ಷ ಜೈಲು ಶಿಕ್ಷೆ ಮತ್ತು 4 ಲಕ್ಷ ದಂಡ
D Kumaraswamy
  • Tumblr

Related Posts

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025

ಛಲವಿದ್ದರೆ ಏನಾದರೂ ಸಾಧಿಸಬಹದು

November 17, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.