ರಾಜ್ಯಪಾಲರಾದ ಥೇವರ್ ಚಂದ್ ಗೆಹ್ಲೋಟ್ ಅವರು ಮೈಸೂರಿನ ಕರ್ನಾಟಕ ಮುಕ್ತ ವಿಶ್ವ ವಿದ್ಯಾಲಯದ ಮೌಲ್ಯಮಾಪನದ ರಿಜಿಸ್ಟ್ರಾರ್ ಆಗಿ ಡಾ. ವಿಶ್ವನಾಥ್ ಅವರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ಡಾ. ವಿಶ್ವನಾಥ್ ಅವರು ದಾವಣಗೆರೆ ವಿಶ್ವ ವಿದ್ಯಾಲಯದಲ್ಲಿ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಈ ಮೊದಲು ಕೆ ಬಿ ಪ್ರವೀಣ್ ಅವರು ಮೌಲ್ಯ ಮಾಪನದ ರಿಜಿಸ್ಟ್ರಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರ ಸ್ಥಾನಕ್ಕೆ ಡಾ. ವಿಶ್ವನಾಥ್ ಅವರನ್ನು ನೇಮಕ ಮಾಡಿದ್ದು, ಅವರು ಸಹಪಾಠಿಗಳು, ಹಿತೈಷಿಗಳು ಹಾಗೂ ಬಂಧುಗಳು ಶುಭ ಕೋರಿದ್ದಾರೆ.