ರಾಜ್ಯ ರಾಜಕೀಯದ ಬಗ್ಗೆ ಕೋಡಿ ಮಠದ ಶ್ರೀಗಳಿಂದ ಸ್ಪೋಟಕ ಭವಿಷ್ಯ!!

ರಾಜ್ಯ

ರಾಜ್ಯ ರಾಜಕೀಯದ ಬಗ್ಗೆ ಕೋಡಿ ಮಠದ ಶ್ರೀಗಳಿಂದ ಸ್ಪೋಟಕ ಭವಿಷ್ಯ!!

 

 

 

 

ರಾಜ್ಯದಲ್ಲಿ ಈ ಬಾರಿ ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತೆ. ರಾಜಕೀಯದಲ್ಲಿ ಇನ್ನೂ ದಾಳಗಳಿವೆ, ಹಲವು ಗೊಂದಲಗಳಿವೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ.

ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠದ ಶ್ರೀಗಳಿಂದ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ಈ ಬಾರಿ ಒಂದು ಪಕ್ಷ ಈ ಬಾರಿ ಅಧಿಕಾರಕ್ಕೆ ಬರುತ್ತೆ. ರಾಜಕೀಯದಲ್ಲಿ ಇನ್ನೂ ದಾಳಗಳಿವೆ, ಹಲವು ಗೊಂದಲಗಳಿವೆ. ಪಕ್ಷಗಳು ಒಡೆಯುತ್ತೆ ಚುನಾವಣೆ ನಡೆದ್ರು ಪಕ್ಷ ಒಡೆಯುತ್ತೆ. ಯುಗಾದಿ ನಂತರ ಯಾರು ರಾಜ್ಯದ ಸಿಎಂ ಆಗ್ತಾರೆ ಅನ್ನೋದನ್ನ ಹೇಳ್ತೀನಿ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ ಹೇಳಿದ್ದಾರೆ.

ಈ ಹಿಂದೆ ಬಾಗಲಕೋಟೆಯಲ್ಲಿ ರಾಜಕಾರಣದ ಬಗ್ಗೆ ಭವಿಷ್ಯ ನುಡಿದಿದ್ದ ಕೋಡಿ ಶ್ರೀಗಳು, ರಾಜಕೀಯ ಅಸ್ಥಿರತೆ ಇದೆ. ಯಾವ ಪಕ್ಷವೂ ಕೂಡಿ ಹೋಗೋದು ಕಷ್ಟ. ಚುನಾವಣೆವರೆಗೂ ಏನನ್ನು ಹೇಳೋಕೆ ಆಗೋದಿಲ್ಲ. ಎಲ್ಲ ಡಿವೈಡ್ ಆಗುವ ಲಕ್ಷಣ ಇದೆ. ಆದರೂ ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದ್ದರು.

Leave a Reply

Your email address will not be published. Required fields are marked *