ಹೊಳಲ್ಕೆರೆ : ಕ್ಷೇತ್ರದ ಬಿಜೆಪಿ ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸಿದ ಶಾಸಕ ಎಂ.ಚಂದ್ರಪ್ಪ, ಈಗಾ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ದದ ಪಿತೂರಿ ಗುಂಪಿನಲ್ಲಿದ್ದಾರೆ ಹಾಗಾಗಿ ಶಾಸಕ ಎಂ.ಚಂದ್ರಪ್ಪರನ್ನು ಹೈಕಮಾಂಡ್, ಪಕ್ಷ ದಿಂದ ಉಚ್ಚಾಟಿಸಬೇಕೆಂದು ಪಟ್ಟಣ ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಜಯಸಿಂಹ ಖಾಟ್ರೂತ್ ಪಕ್ಷದ ಮುಖಂಡರನ್ನು ಮನವಿ ಮಾಡಿದರು.
ಹೊಳಲ್ಕೆರೆಯ ಸ್ನೇಹ ಕಂಫರ್ಟ್ ನಲ್ಲಿ ಮಂಗಳವಾರ ಬಿಜೆಪಿ ಪಕ್ಷದ ಕಾರ್ಯಕರ್ತರ ಸಂಘಟನಾ ಸಭೆಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಬಿಜೆಪಿ ಪಕ್ಷದ ಕಟ್ಟಿದ್ದು ಬಿ.ಎಸ್.ಯಡಿಯೂರಪ್ಪ, ಅವರಿಂದ ರಾಜಕೀಯ ಸ್ಥಾನ ಮಾನ ಪಡೆದುಕೊಂಡಿದ್ದ ಶಾಸಕ ಎಂ.ಚಂದ್ರಪ್ಪ ಅವರ ವಿರುದ್ದದ ಪಿತೂರಿಯಲ್ಲಿ ತೊಡಗಿದ್ದಾರೆ. ಹೊಳಲ್ಕೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಶಾಸಕ ಎಂ.ಚಂದ್ರಪ್ಪಗೆ ಯಾವುದೇ ವರ್ಚಸಿಲ್ಲ. ಕ್ಷೇತ್ರದಲ್ಲಿ ದೊಡ್ಡ ಸಂಖ್ಯೆ ಲಿಂಗಾಯಿತರು ಬಿಜೆಪಿ ಸಿದ್ದಾಂತದ ಜೊತೆ ಪ್ರಧಾನಿ ಮೋದಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇವರ ನಾಯಕತ್ವಕ್ಕೆ ಬೆಂಬಲಿಸಿ ಶಾಸಕ ಎಂ.ಚಂದ್ರಪ್ಪರಿಗೆ ಮತ ನೀಡಿದ್ದಾರೆ. ಅದನ್ನೇ ಬಂಡವಾಳ ಮಾಡಿಕೊಂಡಿರುವ ಶಾಸಕ ಎಂ.ಚಂದ್ರಪ್ಪ ಯಪಕ್ಷದ ಕಾರ್ಯಕರ್ತರನ್ನು ನಿರ್ಲಕ್ಷಿಸಿ, ಹಿರಿಯ ಕಾರ್ಯಕರ್ತರನ್ನು ಮೂಲೆಗುಂಪು ಮಾಡಲು ಹವಣಿಸುತ್ತಿದ್ದಾರೆ. ಪಕ್ಷದ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಮಾಜಿ ಅಧ್ಯಕ್ಷ ರಾಜಶೇಖರ್ ಮಾತಾಡಿ, ಶಾಸಕರ ಚುನಾವಣೆಗೆ ಮಾತ್ರ ಎಲ್ಲರೂ ಬೆಂಬಲಿಸಬೇಕು. ಅವರು ಮಾತ್ರ ಇನ್ನೊಬ್ಬರ ಪರವಾಗಿ ಕೆಲಸ ಮಾಡುವುದಿಲ್ಲ. ಬೇರೆಯವನ್ನು ಸೋಲಿಸಿ ಜಿಲ್ಲೆಯಲ್ಲಿ ಚಕ್ರಾಧಿಪತಿಯಾಗಬೇಕೆಂಬ ಬಯಕೆ ಅವರದ್ದು, ಪ್ರತಿ ಸಂಸತ್ ಚುನಾವಣೆಯಲ್ಲಿಯೂ ಪಕ್ಷ ವಿರೋಧಿ ಚಟುವಟಿಕೆ ಮಾಡಿಕೊಂಡು ಬಂದಿದ್ದಾರೆ. ಮಾಜಿ ಎಂಪಿ ಜನಾರ್ಥನಸ್ವಾಮಿ, ನಾರಾಯಾಣಸ್ವಾಮಿ, ಈಗಿನ ಗೋವಿಂದ ಕಾರಜೋಳ ವಿರುದ್ದ ಚುನಾವಣೆ ಮಾಡಿದರು. ಜನರು ಮಾತ್ರ ಪಕ್ಷಕ್ಕೆ ಮನ್ನಣೆ ನೀಡಿ ಮತ ನೀಡಿ ಗೆಲ್ಲಿಸಿದ್ದಾರೆ. ಸೋಲಿಸಲು ಪ್ರಯತ್ನಿಸುವ ಶಾಸಕ ಎಂ.ಚಂದ್ರಪ್ಪ ಗೆದ್ದ ಬಳಿಕ ನಾನೆ ಗೆಲ್ಲಿಸಿದೆ ಎಂದು ಬಿಂಬಿಸಿಕೊಳ್ಳುತ್ತಾರೆ. ಮಗನಿಗೆ ಟಿಕೆಟ್ ಮಿಸ್ ಆಗಿದ್ದರಿಂದ ಗೋವಿಂದ ಕಾರಜೋಳರನ್ನು ಸೋಲಿಸುವ ಪಣ ತೊಟ್ಟಿದ್ದರು. ಅದರೇ ಕ್ಷೇತ್ರ ಪ್ರಬುದ್ದ ಮತದಾರರು ಗೋವಿಂದ ಕಾರಜೋಳರನ್ನು ಅಯ್ಕೆ ಮಾಡಿದರು. ಅವರನ್ನು ಬೆಂಬಲಿಸಿದ ಕಾರ್ಯಕರ್ತರನ್ನು ಗುರಿಮಾಡಿಕೊಂಡು ಸೇಡು ತೀರಿಸಿಕೊಳ್ಳಲು ಶಾಸಕ ಎಂ.ಚಂದ್ರಪ್ಪ ಮುಂದಾಗಿರುವುದು ಸರಿಯಲ್ಲ ಎಂದು ಆಕ್ರೊಶ ವ್ಯಕ್ತಪಡಿಸಿದರು.
ಸಂಸದ ಗೋವಿಂದ ಕಾರಜೋಳ ಹೊಳಲ್ಕೆರೆ ಪುರಸಭೆ ಚುನಾವಣೆಯಲ್ಲಿ ಪಾಲ್ಗೊಂಡು ಬಿಜೆಪಿ ಪಕ್ಷದ ಮಹಿಳಾ ಸದಸ್ಯರನ್ನು ಪುರಸಭೆಯ ಉಪಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿಸಿದ್ದಾರೆ. ಗೋವಿಂದ ಕಾರಜೋಳ ಬಂದ್ದಿದ್ದ ಹಿನ್ನಲೆಯಲ್ಲಿ ಎಲ್ಲಾ ಪಕ್ಷದವರು ಬಿಜೆಪಿ ಪಕ್ಷದ ಅಭ್ಯರ್ಥಿಗೆ ಬೆಂಬಲಿಸಿ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆಗೆ ಸಹಕರಿಸಿದ್ದಾರೆ. ಇದು ಬಿಜೆಪಿ ಪಕ್ಷದ ಕಾರ್ಯಕರ್ತರಿಗೆ ಸಿಕ್ಕ ಗೆಲುವು, ಶಾಸಕರ ಕೈಲಿ ಸಾಧ್ಯವಾಗದ ಕೆಲಸವನ್ನು ಸಂಸದರು ಮಾಡಿದ್ದಾರೆ. ಇದು ಕಾರ್ಯಕರ್ತರಿಗೆ ಶಕ್ತಿ ನೀಡಿದಂತಾಗಿದೆ ಎಂದರು.
ಬಿಜೆಪಿ ಮುಖಂಡ ದೇವೇಂದ್ರನಾಯ್ಕ ಮಾತನಾಡಿ, ಶಾಸಕ ಎಂ.ಚಂದ್ರಪ್ಪ ಕ್ಷೇತ್ರದಲ್ಲಿ ಅಭಿವೃದ್ಧಿ ಹೆಸರಲ್ಲಿ ಸಾಕಷ್ಟು ಭ್ರಷ್ಟಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಸಣ್ಣ ನೀರಾವರಿ ಇಲಾಖೆಯಲ್ಲಿ ಕೆರೆ ಹೂಳೆತ್ತುವ, ಚಕ್ ಡ್ಯಾಂ ಕಟ್ಟುವ ಹೆಸರಲ್ಲಿ ಹಣದ ಲೂಟಿಯಾಗಿದೆ. ಇವರ ಕಾಲದಲ್ಲಿ ನಡೆದಿರುವ ಎಲ್ಲಾ ಕಾಮಗಾರಿ ತನಿಖೆ ನಡೆಸಲು ಸರಕಾರ ಮುಂದಾಗಬೇಕೆಂದು ಆಗ್ರಹಿಸಿದರು.





