Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ದೇಶ»ಬಿಜೆಪಿ ಟಿಕೆಟ್ ಗಾಗಿ ಬಿಜೆಪಿಯಲ್ಲಿ ತೀವ್ರ ಪೈಪೋಟಿ: ಯಡಿಯೂರಪ್ಪ ಮೇಲೆ ವಿಶ್ವಸವಿಟ್ಟಿದ್ದೇನೆ ಟಿಕೆಟ್ ಮೇಲಿಟ್ಟಿಲ್ಲ: ಚಂದ್ರಪ್ಪ
ದೇಶ

ಬಿಜೆಪಿ ಟಿಕೆಟ್ ಗಾಗಿ ಬಿಜೆಪಿಯಲ್ಲಿ ತೀವ್ರ ಪೈಪೋಟಿ: ಯಡಿಯೂರಪ್ಪ ಮೇಲೆ ವಿಶ್ವಸವಿಟ್ಟಿದ್ದೇನೆ ಟಿಕೆಟ್ ಮೇಲಿಟ್ಟಿಲ್ಲ: ಚಂದ್ರಪ್ಪ

D KumaraswamyBy D KumaraswamyMarch 10, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಪಡೆಯಲು ತೀವ್ರ ಪೈಪೋಟಿ‌ ಎದುರಾಗಿದೆ. ಒಂದು ಕಡೆಗೆ ಚುನಾವಣೆಗೆ ನಾನು‌ ಈ‌ ಬಾರಿ ಸ್ಪರ್ಧಿಸುವುದಿಲ್ಲ, ಭ್ರಷ್ಟಾಚಾರ ನೋಡಿ‌ ನನಗೆ ಸಾಕಾಗಿದೆ. ರಾಜಕೀಯದಿಂದ ದೂರ ಉಳಿಯುತ್ತೇನೆ ಎಂದು ಹೇಳಿಕೆ ನೀಡುತ್ತಾ ಬಂದಿರುವ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಅವರಿಗೆ ಸಮುದಾಯದವರು ಮತ್ತೆ ಸ್ಪರ್ಧೆ ಮಾಡಬೇಕೆಂದು ಒತ್ತಡ ಹಾಕಿದ್ದು, ಇನ್ನೊಂದು‌ ಕಡೆ ಬಿಜೆಪಿ ವರಿಷ್ಠರು ಕೂಡ ಹಾಲಿ ಸಂಸದರಾಗಿರುವುದರಿಂದ ಅವರಿಗೆ ಮಣೆ ಹಾಕುತ್ತದೆ ಎಂಬ ಮೂಲಗಳು ಹೇಳುತ್ತಿವೆ. ಇತ್ತ ಮಾದಾರ ಚನ್ನಯ್ಯ ಶ್ರೀಗಳು ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಚರ್ಚೆಗಳು ಜಿಲ್ಲೆ ತುಂಬಾ ಹರಿದಾಡುತ್ತಿವೆ. ಆದರೆ ಚನ್ನಯ್ಯ ಶ್ರೀಗಳು ನಾವು ಕೂಡ ಆಕಾಂಕ್ಷಿ ಎಂದು ಎಲ್ಲಿಯು ಹೇಳಿಲ್ಲ. ಮತ್ತೊಂದೆಡೆ ಹೊಳಲ್ಕೆರೆ ಶಾಸಕ ಡಾ. ಎಂ. ಚಂದ್ರಪ್ಪ ಹಾಗೂ ಅವರ ಪುತ್ರ ರಘು ಚಂದನ್ ಕೂಡ ಕಳೆದ ಬಾರಿಯೇ ಟಿಕೆಟ್ ಕೇಳಿದ್ದು, ವರಿಷ್ಠರು ವಯಸ್ಸಿನ ಕಾರಣವೇಳಿ ಸುಮ್ಮ‌ನಾಗಿಸಿದ್ದರು. ಆದರೆ ಈ ಬಾರಿ ಶತಾಯ ಗತಾಯ ಟಿಕೆಟ್ ಪಡೆಯಲೇಬೇಕೆಂದು ಬೆಂಗಳೂರು, ದೆಹಲಿ‌ ಮತ್ತು ಆರ್ ಎಸ್ ಎಸ್ ನ ಕೇಂದ್ರ ಕಚೇರಿ ನಾಗಪುರದ ಬಾಗಿಲನ್ನು ಎಡತಾಕಿ ಬಂದಿದ್ದಾರೆ. ಇನ್ನು ಶಾಸಕ ಡಾ. ಎಂ. ಚಂದ್ರಪ್ಪ ಅವರು ಶಿವರಾತ್ರಿ ದಿನವೇ ನಸುಕಿನಲ್ಲಿ ರಾಜಧಾನಿ ಬೆಂಗಳೂರಿನ ಯಡಿಯೂರಪ್ಪ‌ ಅವರ ಮನೆಗೆ ತೆರಳಿ‌ ಮಾತುಕತೆಯಾಡಿದ್ದು, ದೆಹಲಿಗೂ ಹೋಗಿ ಬಂದಿದ್ದಾರೆ. ಇದರ ನಡುವೆ ಇಂದು‌ ಶಿವಮೊಗ್ಗಾಕ್ಕೆ ತೆರಳಿ‌ ಅಲ್ಲಿ ಯಡಿಯೂರಪ್ಪ ಅವರನ್ನು ಬೇಟಿಯಾಗಿದ್ದಾರೆ. ಟಿಕೆಟ್ ಗಾಗಿ ಒತ್ತಡವನ್ನು ಹಾಕಿದ್ದಾರೆ. ಇದರ ಬೆನ್ನಲ್ಲೆ ಮಾಧ್ಯಮಗಳೊಂದಿಗೆ ಮಾತಾಡಿದ ಶಾಸಕ ಡಾ.‌ಎಂ. ಚಂದ್ರಪ್ಪ, ನಾನು ಐದು ಸಲ‌ ಎಂ ಎಲ್ ಎ ಆಗಿದ್ದೇನೆ. ಯಡಿಯೂರಪ್ಪ ಕುಟುಂಬದ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಯಾವಾಗಲೂ ಬರುವ ಹಾಗೆ ಬಂದಿದ್ದೇನೆ. ನಾನು ಕಳೆದ ಬಾರಿ ನನ್ನ ಮಗನಿಗೆ ಟಿಕೆಟ್ ಕೇಳಿದ್ದೆ ಮುಂದೆ ನೋಡೋಣ ಅಂದಿದ್ದರು. ಹಾಗಾಗಿ ಈ ಸಲ ಅವಕಾಶವಿದ್ರೆ ಟಿಕೆಟ್ ಕೊಡಿಸಿ ಎಂದು ಮನವಿ ಮಾಡಿದ್ದೇನೆ. ಅವರಿಗೆ ಎಷ್ಟು ಒತ್ತಡವಿರುತ್ತದೆ, ಅವರು ಪಾರ್ಲಿಮೆಂಟರಿ ಸದಸ್ಯರು ಆಗಿದ್ದಾರೆ. ನನ್ನ ಮಗನೂ ಟಿಕೆಟ್ ಆಕಾಂಕ್ಷಿಯಾಗಿದ್ದಾನೆ. ನಾನು ಯಡಿಯೂರಪ್ಪ ಅವರ ಮೇಲೆ‌ ವಿಶ್ವಾಸವಿಟ್ಟಿದ್ದೇನೆ. ಟಿಕೆಟ್ ಮೇಲೆ ವಿಶ್ವಾಸವಿಟ್ಟಿಲ್ಲ ಎಂದು ಹೇಳಿದ್ದಾರೆ. ಒಟ್ಟಾರೆ ಚಿತ್ರದುರ್ಗದ ಬಿಜೆಪಿ ಟಿಕೆಟ್ ಗಾಗಿ ತೀವ್ರ ಪೈಪೋಟಿ‌ ನಡೆದಿದ್ದು, ಟಿಕೆಟ್ ಯಾರಿಗೆ ಸಿಗಲಿದೆ ಎಂಬುದು ತೀವ್ರ ಕುತೂಹಲವುಂಟು ಮಾಡಿದೆ.

 

 

Share. Facebook Twitter Pinterest LinkedIn Tumblr WhatsApp Email
Previous Articleನನ್ನ ಕೈಗೆ ಸಿಕ್ಕರೆ ಕಾಲಲ್ಲಿರೋದು ತಗೊಂಡು ಹೊಡಿತಿನಿ: ವಿವಾದಾತ್ಮಕ ಹೇಳಿಕೆ ನೀಡಿದ ಮುಖಂಡ
Next Article ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ: ಖಾಸಗಿ ಟ್ಯಾಂಕರ್ ಮೂಲಕ ನೀರು ಪೂರೈಕೆ
D Kumaraswamy
  • Tumblr

Related Posts

ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ ನಡೆದಿದೆ: ಅರ್ಜುನ್, ಕೇಶವ

February 10, 2025

ಎಸ್ಸಿ ಪಟ್ಟಿಯಿಂದ ಎಕೆ ಎಡಿ  ಹೆಸರು ತೆಗೆಯಿರಿ: ಮಾಜಿ ಸಚಿವ ಹೆಚ್.ಆಂಜನೇಯ

February 10, 2025

ಲಿಂಗ ಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

February 7, 2025

ವಿಭಿನ್ನ ಚಿತ್ರಕ್ಕಾಗಿ ಮತ್ತೆ ಒಂದಾದ ನಿರ್ದೇಶಕ ಚಿದಂಬರಂ ಹಾಗು ಜೀತು ಮಾಧವನ್

January 2, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.