ಕರುನಾಡಿನ ಪವಿತ್ರ ಹಬ್ಬ ಯುಗಾದಿ ಹಬ್ಬದ ಈ ಶುಭ ಸಂದರ್ಭದಲ್ಲಿ ಇಂದು ತರಳಬಾಳು ಜಗದ್ಗುರು ೧೧೦೮ ಶ್ರೀ ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಸಿರಿಗೆರೆಯಲ್ಲಿ ಚಂದ್ರದರ್ಶನ ಮಾಡಿದರು.ಚಂದ್ರ ದರ್ಶನ ಮಾಡಿದ ನಂತರ ಸುತ್ತಮುತ್ತಲಿನ ಗ್ರಾಮಸ್ಥರು ತರಳಬಾಳು ಮಠಕ್ಕೆ ಬಂದು ಶ್ರೀಗಳ ದರ್ಶನ ಮಾಡಿ ಆಶೀರ್ವಾದ ಪಡೆದುಕೊಂಡರುಇ
ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಹೆಚ್.ಆಂಜನೇಯ ಅವರು ಶ್ರೀಗಳ ಜೊತೆ ಸೇರಿ ತಮ್ಮ ಅಪಾರ ಸಂಖ್ಯೆಯ ಕಾರ್ಯಕರ್ತರು ಮತ್ತು ಬೆಂಬಲಿಗರೊಂದಿಗೆ ಸಿರಿಗೆರೆಯಲ್ಲಿ ಚಂದ್ರದರ್ಶನ ಮಾಡಿ, ಶ್ರೀಗಳಿಗೆ ಶುಭ ಕೋರಿ ಆಶೀರ್ವಾದ ಪಡೆದರು.