ಚಿತ್ರದುರ್ಗ,ನ02(ಸಂವಾ)- ಹೊಳಲ್ಕೆರೆ ಪಟ್ಟಣ ಪಂಚಾಯಿತಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆವತಿಯಿಂದ ಪಟ್ಟಣ ಪಂಚಾಯಿತಿ ಪೌರ ನೌಕರರು, ನೀರು ಸರಬರಾಜು ಸಿಬ್ಬಂದಿ ಕಚೇರಿ ಸಿಬ್ಬಂದಿಗಳಿಗೆ ಹಾಗೂ ಸಾರ್ವಜನಿಕರಿಗೆ ಉಚಿತ ನೇತ್ರ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
ದೃಷ್ಠಿ ಕಣ್ಣಿನ ಆಸ್ಪತ್ರೆಯ ಚಿತ್ರದುರ್ಗ ದ ವೈದ್ಯರ ತಂಡ ಎಲ್ಲರಿಗೂ ತಪಾಸಣೆ ನಡೆಸಿತು. ಪಟ್ಟಣ ಪಂಚಾಯಿತಿ ಸದಸ್ಯರು ತಪಾಸಣೆ ಮಾಡಿಕೊಳ್ಳುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವಾಸೀಂ ಹಾಜರಿದ್ದು ಪ್ರತಿಯೊಬ್ಬರಿಗೂ ತಪಾಸಣೆ ಮಾಡಿಸಿದರು.
ಸಂಯುಕ್ತವಾಣಿ
ಚಿತ್ರದುರ್ಗ