Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಉತ್ಪನ್ನಗಳ ಬ್ರ್ಯಾಂಡಿಂಗ್, ಹಣಕಾಸು ಹಾಗೂ ಮಾರುಕಟ್ಟೆ ನಿರ್ವಹಣೆಗೆ ಆದ್ಯತೆ ನೀಡಿ -ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
ಜಿಲ್ಲಾ ಸುದ್ದಿ

ಉತ್ಪನ್ನಗಳ ಬ್ರ್ಯಾಂಡಿಂಗ್, ಹಣಕಾಸು ಹಾಗೂ ಮಾರುಕಟ್ಟೆ ನಿರ್ವಹಣೆಗೆ ಆದ್ಯತೆ ನೀಡಿ -ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

D KumaraswamyBy D KumaraswamyMarch 1, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಉತ್ಪನ್ನಗಳ ಬ್ರ್ಯಾಂಡಿಂಗ್, ಹಣಕಾಸು ಹಾಗೂ ಮಾರುಕಟ್ಟೆ ನಿರ್ವಹಣೆಗೆ ಆದ್ಯತೆ ನೀಡಿ
-ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

 

 

ಮಹಿಳಾ ಸ್ವ-ಸಹಾಯ ಗುಂಪುಗಳು ದೊಡ್ಡ ಉದ್ದಿಮೆಗಳಾಗುವ ನಿಟ್ಟಿನಲ್ಲಿ ತಮ್ಮ ಉತ್ಪನ್ನಗಳ ಬ್ರ್ಯಾಂಡಿಂಗ್, ಹಣಕಾಸು ಹಾಗೂ ಮಾರುಕಟ್ಟೆ ನಿರ್ವಹಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಶಾಸಕ ವೀರೇಂದ್ರ ಪಪ್ಪಿ ಹೇಳಿದರು.
ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್.ಆರ್.ಎಲ್.ಎಂ)-ಸಂಜೀವಿನಿ, ಜಿಲ್ಲಾ ಪಂಚಾಯತ್ ವತಿಯಿಂದ ಶುಕ್ರವಾರ ನಗರದ ವಾಸವಿ ಮಹಲ್ ನಲ್ಲಿ ಆಯೋಜಿಸಲಾದ ಎರಡು ದಿನಗಳ ಜಿಲ್ಲಾ ಮಟ್ಟದ ಸರಸ್ ಮೇಳ ಉದ್ಘಾಟಿಸಿ ಮಾತನಾಡಿದರು.
ಮಹಿಳಾ ಸ್ವ-ಸಹಾಯ ಗುಂಪುಗಳು ತಮ್ಮ ಉತ್ಪನ್ನಗಳನ್ನು ಸುಂದರ ಆಕರ್ಷಕ ಪ್ಯಾಕಿಂಗ್‍ಗಳಲ್ಲಿ ಮಾರಾಟ ನಡೆಸುವುದರೊಂದಿಗೆ ಸ್ಥಳೀಯವಾಗಿ ಪ್ರಚಾರ, ಜಾಹೀರಾತು ಕಾರ್ಯ ಮಾಡಿಕೊಳ್ಳಬೇಕು. ಎಲ್ಲಾ ಅಂತರಾಷ್ಟ್ರೀಯ ಉತ್ಪನ್ನಗಳು ಆರಂಭದಲ್ಲಿ ಸ್ಥಳೀಯ ಮಟ್ಟದಲ್ಲಿ ಬೃಹದಾಕಾರವಾಗಿ ಬೆಳದಿವೆ. ಇದಕ್ಕೆ ಮುಖ್ಯ ಕಾರಣ ಹಣಕಾಸು ಹಾಗೂ ಮಾರುಕಟ್ಟೆ ವ್ಯವಸ್ಥೆಯ ನಿರ್ವಹಣೆಯಾಗಿದೆ. ಒಂದೊಂದು ಮಹಿಳಾ ಸ್ವ-ಸಹಾಯ ಸಂಘದಲ್ಲಿ 12 ರಿಂದ 15 ಜನರು ಇರುತ್ತಾರೆ, ಇವರೆಲ್ಲರೂ ಉತ್ಪನ್ನಗಳ ತಯಾರಿಕೆಯಲ್ಲಿ ತೊಡಗಿಕೊಳ್ಳದೇ, ಕೆಲಸಗಳನ್ನು ಹಂಚಿಕೆ ಮಾಡಿಕೊಂಡು, ಹಣಕಾಸು ನಿರ್ವಹಣೆ ಹಾಗೂ ಮಾರುಕಟ್ಟೆ ವಿಸ್ತರಣೆ ಕಾರ್ಯಕ್ಕೆ ಪ್ರತ್ಯೇಕವಾಗಿ ಸದಸ್ಯರನ್ನು ನೇಮಿಸಿ ಕಾರ್ಯನಿರ್ವಹಿಸಬೇಕು. ಉತ್ಪಾದನೆಗಳ ಮಾರಾಟದಿಂದ ಬರುವ ಲಾಭವನ್ನು ಸಂಪೂರ್ಣವಾಗಿ ಬೇರೆಯದಕ್ಕೆ ಖರ್ಚು ಮಾಡದೆ, ಉದ್ದಿಮೆಯನ್ನು ಮತ್ತಷ್ಟು ಬಲಪಡಿಸಲು ಬಂಡವಾಳವಾಗಿ ಉಪಯೋಗಿಸಿಕೊಳ್ಳಬೇಕು. ಉತ್ಪನ್ನಗಳನ್ನು ಅನಾಮಧೇಯ ಹೆಸರಿನಿಂದ ಮಾರಾಟ ಮಾಡುವ ಬದಲು, ಅದಕ್ಕೊಂದು ಒಳ್ಳೆಯ ಹೆಸರು ನೀಡಿ ಬ್ರ್ಯಾಂಡ್ ಆಗಿ ಪರಿವರ್ತಿಸಬೇಕು. ತಮ್ಮದೆ ಆದ ಚಿಹ್ನೆ ಅಡಿ ಉತ್ಪನ್ನಗಳನ್ನು ಮಾರಾಟ ಮಾಡಿದರೆ, ಬೇರೆಯವರು ಅದನ್ನು ಅನುಕರಿಸಿ ನಕಲು ಉತ್ಪನ್ನಗಳನ್ನು ಮಾರಾಟ ಮಾಡುವುದು ತಪ್ಪುತ್ತದೆ. ಮಾರುಕಟ್ಟೆಯ ಸ್ಪರ್ಧೆಯಲ್ಲಿ ಉಳಿಯಬೇಕಾದರೆ ಸ್ವ ಸಹಾಯ ಗುಂಪುಗಳು ತಮ್ಮ ಮಾರುಕಟ್ಟೆ ನೀತಿಯನ್ನು ಬದಲಿಸಿಕೊಳ್ಳಬೇಕು. ಇದರಿಂದ ನಿಮ್ಮ ಉತ್ಪನ್ನಗಳು ಯಶಸ್ವಿಯಾಗಿ ಮಾರುಕಟ್ಟೆಯಲ್ಲಿ ಉಳಿಯುತ್ತವೆ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಸಲಹೆ ನೀಡಿದರು.
ಉತ್ಪನ್ನಗಳ ಗುಣಮಟ್ಟ ಕಾಯ್ದುಕೊಳ್ಳಬೇಕು. ಪ್ರತಿ ಉತ್ಪನ್ನಗಳ ತಯಾರಿಕೆಯಲ್ಲಿ ಸಿದ್ದ ಸೂತ್ರವನ್ನು ರೂಪಿಸಿ ಅದೇ ಮಾನದಂಡದಲ್ಲಿ ಉತ್ಪನ್ನಗಳ ತಯಾರಿಕೆ ಮಾಡಬೇಕು. ಮಹಿಳಾ ಸ್ವ ಸಹಾಯ ಗುಂಪುಗಳು ಸಹ ಇ-ಮಾರುಕಟ್ಟೆಗೆ ಲಗ್ಗೆ ಹಾಕಬೇಕು ಎಂದರು.ಸರಸ್ ಮೇಳದ ಬಗ್ಗೆ ಆಟೋಗಳಲ್ಲಿ ಧ್ವನಿವರ್ಧಕದ ಮೂಲಕ ಹಾಗೂ ಭಿತ್ತಿ ಪತ್ರಗಳನ್ನು ಹಂಚುವ ಮೂಲಕ ಪ್ರಚಾರ ನೀಡಬೇಕು.
ರಾಜ್ಯ ಸರ್ಕಾರ ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಅಕ್ಕಾ ಕೆಫೆ ಹಾಗೂ ಸಂಜೀವಿನಿ ಸೂಪರ್ ಮಾರುಕಟ್ಟೆಗಳನ್ನು ತೆರೆಯಲಿದೆ. ಈ ಕುರಿತು ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ತಿಳಿಸಿದರು.
ಜಿ.ಪಂ. ಸಿಇಓ ಎಸ್.ಜೆ. ಸೋಮಶೇಖರ್ ಅವರು ಮಾತನಾಡಿ, ಮಹಿಳಾ ಸ್ವ ಸಹಾಯ ಉತ್ಪಾದಕ ಸಂಘಗಳು ತಮ್ಮ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಹಾಗೂ ಬೇಡಿಕೆ ಪಡೆಯುವಂತಾಗಲು ಶಾಸಕರು ನೀಡಿರುವ ಸಲಹೆಗಳನ್ನು ಅನುಷ್ಠಾನಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಇದಕ್ಕೆ ಜಿಲ್ಲಾ ಪಂಚಾಯತ್ ನಿಂದ ಅಗತ್ಯ ನೆರವು ಒದಗಿಸಲಾಗುವುದು ಎಂದರು.
ಜಿ.ಪಂ. ಸಿಇಓ ಎಸ್.ಜೆ. ಸೋಮಶೇಖರ್, ಯೋಜನಾ ನಿರ್ದೇಶಕಿ ನಂದಿನಿ.ಆರ್.ಬಿ. ಇದ್ದರು. ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಸುಮಾರು 30 ಕ್ಕೂ ಹೆಚ್ಚು ಮಹಿಳಾ ಸ್ವ ಸಹಾಯ ಉತ್ಪಾದಕ ಸಂಘಗಳು ಸರಸ್ ಮೇಳದಲ್ಲಿ ಪಾಲ್ಗೊಂಡಿವೆ. ಎರಡು ದಿನಗಳ ಕಾಲ ಗಾಣದಿಂದ ತಯಾರಿಸಿದ ಶುದ್ಧ ನೈಸರ್ಗಿಕ ಎಣ್ಣೆ, ಉಪ್ಪಿನಕಾಯಿ, ಹಪ್ಪಳ, ಸಂಡಿಗೆ, ರೊಟ್ಟಿ, ಆಕರ್ಷಕ ಕಸೂತಿ ಹೊಂದಿರುವ ಸಾಂಪ್ರಾದಾಯಿಕ ಉಡುಪುಗಳು, ಕರಕುಶಲ ವಸ್ತುಗಳು ಸೇರಿದಂತೆ ನಾನಾ ವಸ್ತುಗಳ ಮಾರಾಟ ನಡೆಯಲಿದೆ.

Share. Facebook Twitter Pinterest LinkedIn Tumblr WhatsApp Email
Previous Articleಮಕ್ಕಳು ಮೂಲವಿಜ್ಞಾನದ ಅಧ್ಯಯನದಲ್ಲಿ ತೊಡಗಿ: ಫಣಿಂದರ್ ಕುಮಾರ್
Next Article ವನಕಲ್ಲು ಮಠದಲ್ಲಿ ಮಾ. 8 ರಿಂದ ಜಾತ್ರೆ, 17ಕ್ಕೆ ರಥೋತ್ಸವ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.