Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಮಕ್ಕಳಲ್ಲಿ ವಿಶ್ವಪ್ರಜ್ಞೆ-ವೈಚಾರಿಕತೆ ಬೆಳೆಸುವುದು ಸರ್ಕಾರದ ಆದ್ಯತೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯ

ಮಕ್ಕಳಲ್ಲಿ ವಿಶ್ವಪ್ರಜ್ಞೆ-ವೈಚಾರಿಕತೆ ಬೆಳೆಸುವುದು ಸರ್ಕಾರದ ಆದ್ಯತೆ: ಮುಖ್ಯಮಂತ್ರಿ ಸಿದ್ದರಾಮಯ್ಯ

D KumaraswamyBy D KumaraswamyJuly 8, 2023Updated:July 8, 2023No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಜಾತಿ ಅಸಮಾನತೆ ಅಳಿಸಬೇಕಾದರೆ ಶಿಕ್ಷಣದಲ್ಲಿ ವೈಚಾರಿಕತೆ ಅಗತ್ಯ

ಪ್ರಾಥಮಿಕ ಹಂತದಿಂದಲೇ ವೈಚಾರಿಕತೆ ಬೆಳೆಸುವುದು ನಮ್ಮ ಸರ್ಕಾರದ ಆದ್ಯತೆ

ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದ, ಮೌಢ್ಯದ ಆರಾಧಕರಾಗಿರುವುದು ಬೇಸರದ ಸಂಗತಿ

ಮಕ್ಕಳಲ್ಲಿ ವಿಶ್ವಪ್ರಜ್ಞೆ-ವೈಚಾರಿಕತೆ ಬೆಳೆಸುವುದು ಸರ್ಕಾರದ ಆಧ್ಯತೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊರ ಗುತ್ತಿಗೆಯಲ್ಲೂ ಮೀಸಲಾತಿ ತರುವ ಉದ್ದೇಶ ಹೊಂದಿದ್ದೇವೆ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಮಕ್ಕಳು ವಿಶ್ವಪ್ರಜ್ಞೆ ಬೆಳೆಸಿಕೊಂಡು ವೈಚಾರಿಕವಾಗಿ ಸನ್ನದ್ಧಗೊಳ್ಳುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೆಲಸ ಮಾಡಲಿದೆ. ಬೋಧಕರು ಜಾತ್ಯತೀತವಾಗಿಲ್ಲದಿದ್ದರೆ, ಶಿಕ್ಷಕರಲ್ಲೇ ವೈಚಾರಿಕತೆ ಇಲ್ಲದಿದ್ದರೆ ಮಕ್ಕಳಲ್ಲಿ ಜ್ಞಾನದ ವಿಕಾಸ ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಜನಮನ ಪ್ರತಿಷ್ಠಾನ ಮತ್ತು ಸಮತಾ ಅಧ್ಯಯನ ಕೇಂದ್ರ ದೇವರಾಜ ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಸಭಿಕರ ಪ್ರಶ್ನೆಗಳಿಗೆ ಉತ್ತರಿಸಿದರು.

ಜಾಗತಿಕ ಮಟ್ಟದ ಬಂಡವಾಳವನ್ನು ಆಕರ್ಷಿಕಸಬೇಕು ಎಂದು ಶಾಂತಿ, ಸುವ್ಯವಸ್ಥೆ ಮತ್ತು ಉದ್ಯಮ ಸ್ನೇಹಿ ವಾತಾವರಣ ಇರಬೇಕು. ಬಂಡವಾಳ ಹೂಡಿಕೆಯಿಂದ ಉದ್ಯೋಗ ಸೃಷ್ಟಿಯಾಗಿ ಜಿಡಿಪಿ ಹೆಚ್ಚುತ್ತದೆ. ಹೀಗಾಗಿ ಜಾತಿ-ಧರ್ಮದ ಸಂಘರ್ಷ ಇಲ್ಲದ ಶಾಂತಿಯುತ ಸಮಾಜ ಇರಬೇಕು ಎಂದರು.

ನಮ್ಮ ಯುವ ಸಮೂಹದ ಶಕ್ತಿ ಮತ್ತು ಚೈತನ್ಯ ದುರುಪಯೋಗ ಆಗಬಾರದು, ಜಾತಿ-ಧರ್ಮದ ಹೆಸರಲ್ಲಿ ಗಲಭೆಗಳಿಗೆ ಯುವ ಸಮೂಹ ದುರ್ಬಳಕೆ ಆಗುವುದನ್ನು ತಪ್ಪಿಸುವ ರೀತಿಯಲ್ಲಿ ನಮ್ಮ ಸರ್ಕಾರ ನೀತಿ ರೂಪಿಸಿದೆ. ಇದಕ್ಕಾಗಿ ಕೌಶಲ್ಯ ತರಬೇತಿ ಜತೆಗೆ ನಿರುದ್ಯೋಗಿ ಯುವ ಸಮೂಹಕ್ಕೆ 24 ತಿಂಗಳ ಕಾಲ ಯುವನಿಧಿ ನೀಡಲು ನಿರ್ಧರಿಸಿದ್ದೇವೆ ಎಂದರು.

ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನಾವು ಪ್ರಣಾಳಿಕೆಯಲ್ಲಿ ಹೇಳಿದ್ದೆವು. ಅದರಂತೆ ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳುತ್ತೇವೆ. ಅಲ್ಲಿಯವರೆಗೂ ಹೊರ ಗುತ್ತಿಗೆ ನೇಮಕಾತಿಗಳಲ್ಲೂ ಮೀಸಲಾತಿ ತರುವ ಉದ್ದೇಶ ಹೊಂದಿದ್ದೇವೆ ಎಂದರು.

 

 

ಕೈಗಾರಿಕೋದ್ಯಮಿಗಳ ಜತೆ ಸಭೆ ಮಾಡಿದ್ದೇನೆ. ಅವರಿಗೆ ಯಾವ ರೀತಿಯ ಕೌಶಲ್ಯದ ವಿದ್ಯಾರ್ಥಿಗಳ ಅಗತ್ಯವಿದೆ ಎನ್ನುವ ಬಗ್ಗೆ ಚರ್ಚಿಸಿದ್ದೇನೆ. ಅದಕ್ಕೆ ತಕ್ಕಂತೆ ಶಿಕ್ಷಣವನ್ನು ರೂಪಿಸುವ, ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ಅರ್ಹರನ್ನು ಸೃಷ್ಟಿಸಬೇಕಾಗುತ್ತದೆ.

ಶರಾವತಿ ಸಂತ್ರಸ್ಥರಿಗೆ ಶಾಶ್ವತ ಪರಿಹಾರ
ಮಲೆನಾಡಿನ ಜಿಲ್ಲೆಗಳಲ್ಲಿ ಹಲವು ವರ್ಷಗಳಿಂದ ಇರುವ ಶರಾವತಿ ಸಂತ್ರಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಭರವಸೆ ನೀಡಿದರು.

ಸಮ ಸಮಾಜ ಬಂದರೆ ಶಾಂತಿಯ ತೋಟ
ಹಿಂದಿನ ಸರ್ಕಾರದಲ್ಲಿ ಅನೈತಿಕ ಪೊಲೀಸ್ ಗಿರಿ ಅತ್ಯಂತ ನಿರ್ಲಜ್ಜತನದಿಂದ ಆಚರಿಸಲ್ಪಡುತ್ತಿತ್ತು. ನಾವು ಅಧಿಕಾರಕ್ಕೆ ಬರುತ್ತಿದ್ದಂತೆ ಅನೈತಿಕ ಪೊಲೀಸ್ ಗಿರಿಗೆ ಬರೆ ಎಳೆದಿದ್ದೇವೆ. ಸಮ ಸಮಾಜ ನಿರ್ಮಾಣ ಆಗದ ಹೊರತು ದಲಿತರ, ಅಲ್ಪ ಸಂಖ್ಯಾತರ, ಹಿಂದುಳಿದವರ ಮೇಲೆ ದೌರ್ಜನ್ಯ ಹೋಗುವುದಿಲ್ಲ. ಹೀಗಾಗಿ ಕುವೆಂಪು ಅವರ ಮಾತಿನಂತೆ ರಾಜ್ಯವನ್ನು ಶಾಂತಿಯ ತೋಟ ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಪ್ರಯತ್ನಿಸುತ್ತಿದೆ.

ಅಕಾಡೆಮಿಗಳ ನೇಮಕಾತಿಗೆ ಸಮಿತಿ ರಚನೆ
ಅಕಾಡೆಮಿ, ಪ್ರಾಧಿಕಾರಗಳಿಗೆ ನೇಮಕ ಮಾಡಲು ಒಂದು ಆಯ್ಕೆ ಸಮಿತಿ ಮಾಡುತ್ತೇವೆ. ಈ ಆಯ್ಕೆ ಸಮಿತಿ ಮತಾಂಧ ಮತ್ತು ಸಮಾಜ ವಿಭಜಿಸುವ ಮನಸ್ಥಿತಿಯವರು ಒಳಗೆ ಪ್ರವೇಶಿಸದಂತೆ ಸ್ಕ್ರೀನಿಂಗ್ ನಡೆಸುತ್ತಾರೆ ಎಂದು ತಿಳಿಸಿದರು.

ಮುಟ್ಟಿನ ರಜೆ ಪರಿಶೀಲನೆ

ಮಹಿಳಾ ಉದ್ಯೋಗಿ ಹಾಗೂ ವಿದ್ಯಾರ್ಥಿನಿಯರಿಗೆ ರಜೆ ಘೋಷಿಸಬೇಕು ಎನ್ನುವ ಬೇಡಿಕೆಯೊಂದಕ್ಕೆ ಉತ್ತರಿಸಿದ ಸಿಎಂ ಈ ಬಗ್ಗೆ ಪರಿಶೀಲಿಸಿ ಯೋಗ್ಯ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ವೇದಿಕೆಯಲ್ಲಿ ಪ್ರಗತಿಪರ ಚಿಂತಕ ಜಿ.ರಾಮಕೃಷ್ಣ ಉಪಸ್ಥಿತರಿದ್ದರು.

ಸಿಎಂ ಉತ್ತರಗಳ ಹೈಲೈಟ್ಸ್

ಶೂದ್ರರಂತೆ ಮಹಿಳೆಯರೂ ಶತಮಾನಗಳ ಕಾಲ ಶಿಕ್ಷಣದಿಂದ ವಂಚಿತರಾಗಿದ್ದರು. ಸಾಮಾಜಿಕವಾಗಿ, ಆರ್ಥಿಕವಾಗಿ ಸದೃಡರಾದರೆ ಶೋಷಣೆ, ದೌರ್ಜನ್ಯ ಕಡಿಮೆಯಾಗುತ್ತದೆ.

ಸರ್ಕಾರಿ ಭೂಮಿ ಒತ್ತುವರಿ ಕುರಿತು ಸಮೀಕ್ಷೆ ಮಾಡಲಾಗುವುದು. ಭೂ ಹೀನರಿಗೆ ಭೂಮಿ ಕೊಡುವ ಬಗ್ಗೆ ಪರಿಶೀಲಿಸಲಾಗುವುದು.

Share. Facebook Twitter Pinterest LinkedIn Tumblr WhatsApp Email
Previous Articleಕರ್ನಾಟಕದ ಅಮರನಾಥ ಯಾತ್ರಾರ್ಥಿಗಳು ಸುರಕ್ಷಿತ: ಮುಖ್ಯಮಂತ್ರಿ ಸಿದ್ದರಾಮಯ್ಯ
Next Article ಮೋದಿ-ಶಾ ಪ್ರಯತ್ನಗಳಿಗೆ ವಿಶ್ವಸಂಸ್ಥೆಯ ಪ್ರಶಂಸೆ
D Kumaraswamy
  • Tumblr

Related Posts

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.