Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಸಿನೆಮಾ»
ಸಿನೆಮಾ

D KumaraswamyBy D KumaraswamyNovember 3, 2020No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಹಿರಿಯ ನಟ ಎಚ್.ಜಿ. ಸೋಮಶೇಖರ ರಾವ್ ವಿಧಿವಶ

ಬೆಂಗಳೂರು, ನ. 3:ಹಿರಿಯ ನಟ, ರಂಗಭೂಮಿ ಕಲಾವಿದ ಎಚ್.ಜಿ. ಸೋಮಶೇಖರ ರಾವ್ ಅವರು ಮಂಗಳವಾರ(ನ.3) ದಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸೋಮಶೇಖರ ರಾವ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಜಯನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಕೊಡಿಸುವುದಕ್ಕೂ ಮುನ್ನವೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದರು.

86 ವರ್ಷ ವಯಸ್ಸಿನ ಸೋಮಶೇಖರ್ ರಾವ್ ಅವರು ಪತ್ನಿ ಹಾಗೂ ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ವರ್ಗ, ಅಭಿಮಾನಿಗಳನ್ನು ಅಗಲಿದ್ದಾರೆ. ಸಂಜೆ 4 ಗಂಟೆಗೆ ಬನಶಂಕರಿಯ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನಡೆಸಲಾಯಿತೆಂದು ಕುಟುಂಬದವರು ಹೇಳಿದ್ದಾರೆ.

ಹಿರಿಯ ನಟ ದತ್ತಣ್ಣ (ದತ್ತಾತ್ರೇಯ) ಅವರ ಸಹೋದರರಾದ ಸೋಮಶೇಖರ ರಾವ್ ಅವರು ಕೆನರಾ ಬ್ಯಾಂಕ್‍ನ ಉದ್ಯೋಗಿಯಾಗಿದ್ದರು. ಮಿಂಚಿನ ಓಟ, ಮಿಥಿಲೆಯ ಸೀತೆಯರು, ಸಾವಿತ್ರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಹರಕೆಯ ಕುರಿ ಚಿತ್ರಕ್ಕಾಗಿ ರಾಜ್ಯ ಪೆÇೀಷಕ ನಟ ಪ್ರಶಸ್ತಿ ಪಡೆದುಕೊಂಡಿದ್ದರು. ರಂಗಭೂಮಿಯಲ್ಲಿ ಹಲವು ಪ್ರಯೋಗಗಳಿಗೆ ಪೆÇ್ರೀತ್ಸಾಹ ನೀಡಿದ್ದರು.

 

 

ಹೂಮಳೆ, ನಂ. 27 ಮಾವಳ್ಳಿ ಸರ್ಕಲ್, ಹರಕೆಯ ಕುರಿ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದ್ದ ಸೋಮಶೇಖರ್ ರಾಯರು, ಕನ್ನಡದ ಮತ್ತೋರ್ವ ಹಿರಿಯ ನಟ ದತ್ತಣ್ಣ ಅವರ ಸಹೋದರ. ಹರಕೆಯ ಕುರಿ ಚಿತ್ರದಲ್ಲಿ ಈ ಇಬ್ಬರು ಸಹೋದರರು ಒಟ್ಟಿಗೆ ನಟಿಸಿದ್ದರು.

ಎಚ್.ಜಿ.ಸೋಮಶೇಖರರಾಯರು ಸಾಹಿತ್ಯ, ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆ ಕ್ಷೇತ್ರಗಳಲ್ಲಿ ಅಪಾರ ಆಸಕ್ತಿ ಹೊಂದಿದವರು. ಅನೇಕ ಪಾಶ್ಚಿಮಾತ್ಯ ಮತ್ತು ಭಾರತೀಯ ನಾಟಕಕರ್ತೃಗಳ ಕೃತಿಗಳನ್ನು ರಂಗಭೂಮಿಯ ಮೇಲೆ ಜೀವಂತಗೊಳಿಸಿದವರು. 1981ರಲ್ಲಿ ಟಿ.ಎಸ್.ರಂಗಾರವರ ನಿರ್ದೇಶನದ ‘ಸಾವಿತ್ರಿ’ ಮೂಲಕ ಚಿತ್ರರಂಗ ಪ್ರವೇಶಿಸಿದ್ದರು.

ರವಿ ನಿರ್ದೇಶನದ ‘ಮಿಥಿಲೆಯ ಸೀತೆಯರು’ ಇವರ ಅಭಿನಯ ಸಾಮಥ್ರ್ಯವನ್ನು ಗುರುತಿಸುವಂತೆ ಮಾಡಿತು. ರವಿಯವರೇ ನಿರ್ದೇಶಿಸಿದ ಇನ್ನೊಂದು ಚಿತ್ರ ‘ಹರಕೆಯ ಕುರಿ’ಯಲ್ಲಿ ಸೋಮಶೇಖರ ರಾಯರು ನೀಡಿದ ಸೊಗಸಾದ ಅಭಿನಯಕ್ಕಾಗಿ 1992 -93ನೇ ಸಾಲಿನ ರಾಜ್ಯ ಸರ್ಕಾರದ ಅತ್ಯುತ್ತಮ ಪೆÇೀಷಕ ನಟ ಪ್ರಶಸ್ತಿ ಲಭಿಸಿತು. ಕೆನರಾ ಬ್ಯಾಂಕ್ನಲ್ಲಿ ಉನ್ನತ ಅಧಿಕಾರಿಯಾಗಿ ನಿವೃತ್ತಿ ಹೊಂದಿ ರಂಗಭೂಮಿಯಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದರು.

ಸಂಯುಕ್ತವಾಣಿ

ಡಿ.ಕುಮಾರಸ್ವಾಮಿ

ಚಿತ್ರದುರ್ಗ

Share. Facebook Twitter Pinterest LinkedIn Tumblr WhatsApp Email
Previous Articleಜಿಲ್ಲೆಯಲ್ಲಿ 36 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 12,486ಕ್ಕೆ ಏರಿಕೆ
Next Article ಚಳ್ಳಕೆರೆ ನಗರದ ಸಭೆ ಅಧ್ಯಕ್ಷ ಉಪಾಧ್ಯಕ್ಷರ ,ಗಾದಿ ಕಾಂಗ್ರೆಸ್ ತೆಕ್ಕೆಗೆ
D Kumaraswamy
  • Tumblr

Related Posts

ಕಟ್ಟಾಲನ್ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾಗಿ ಕಾಲಿವುಡ್ ಗೆ ಹಾರಿದ ಅಜನೀಶ್ ಲೋಕನಾಥ್

May 23, 2025

ಕೋಟೆ ನಾಡಿಗೆ ಎಂಟ್ರಿ ಕೊಟ್ಟ ಉಗ್ರಂ ಖ್ಯಾತಿಯ ಶ್ರೀ ಮುರುಳಿ

March 12, 2024

ಹಿರಿಯ ನಟಿ ಲೀಲಾವತಿ ಗೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

December 8, 2023

ಹಿರಿಯ ನಟಿ ಲೀಲಾವತಿ ಅವರ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ: ಸಿಎಂ ಸಿದ್ದರಾಮಯ್ಯ

December 3, 2023
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.