ವಿಶ್ವದ ಬಲಿಷ್ಟ ದೇಶಗಳಲ್ಲಿ ಭಾರತವನ್ನು ಮೂರನೆ ಸ್ಥಾನಕ್ಕೆ ಕೊಂಡೊಯ್ದಿದ್ದಾರೆ

ರಾಜ್ಯ

ಸಮರ್ಥ ನಾಯಕತ್ವವುಳ್ಳ ಪ್ರಧಾನಿ ಮೋದಿ ಸರ್ಕಾರ ದೇಶ ಆಳುತ್ತಿರುವುದಕ್ಕೆ ನಾವುಗಳೆಲ್ಲಾ ಹೆಮ್ಮೆ ಪಡಬೇಕು ಎಂದು ಅರಣ್ಯ ನಿಗಮದ ಅಧ್ಯಕ್ಷೆ ನಟಿ ತಾರ ಸಂತಸ ವ್ಯಕ್ತಪಡಿಸಿದರು.

 

 

 

ಹೊರವಲಯ ಚಂದ್ರವಳ್ಳಿ ಮೈದಾನದಲ್ಲಿ ಶನಿವಾರ ನಡೆದ ಬಿಜೆಪಿ.ಜಿಲ್ಲಾ ಮಹಿಳಾ ಮೋರ್ಚಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.
ನರೇಂದ್ರಮೋದಿ ಎರಡನೆ ಅವಧಿಗೆ ದೇಶದ ಪ್ರಧಾನಿಯಾಗಿ ವಿಶ್ವದ ಬಲಿಷ್ಟ ದೇಶಗಳಲ್ಲಿ ಭಾರತವನ್ನು ಮೂರನೆ ಸ್ಥಾನಕ್ಕೆ ಕೊಂಡೊಯ್ದಿದ್ದಾರೆ. ಪೆಟ್ರೋಲ್, ಡೀಸೆಲ್, ಗ್ಯಾಸ್, ಚಿನ್ನದ ಬೆಲೆ ಜಾಸ್ತಿಯಾಗಿದೆ ಎಂದು ಕಾಂಗ್ರೆಸ್‍ನವರು ಬೊಬ್ಬೆ ಹೊಡೆಯುತ್ತಿದ್ದಾರೆ. ಚೀನ, ಬಾಂಗ್ಲದೇಶ, ಶ್ರೀಲಂಕಾ ಇನ್ನು ಅನೇಕ ನೆರೆಯ ರಾಷ್ಟ್ರಗಳು ಅದೋಗತಿಗೆ ಹೋಗಿವೆ ಎನ್ನುವ ಅರಿವು ಅವರಿಗೇಕಿಲ್ಲ ಎಂದು ಖಾರವಾಗಿ ಪ್ರಶ್ನಿಸಿದ ತಾರ ಭಾರತದಲ್ಲಿರುವ ಪ್ರತಿಯೊಬ್ಬರ ಜೀವನವನ್ನು ಗಟ್ಟಿಗೊಳಿಸಿ ನೆಮ್ಮದಿ ನೆಲೆಸುವಂತೆ ಮಾಡಿದ್ದಾರೆಂದು ಹೇಳಿದರು.
ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಅನೇಕ ಸವಾಲುಗಳನ್ನು ಎದುರಿಸಿ ಎಲ್ಲವನ್ನು ಮೆಟ್ಟಿ ನಿಂತರು. ಅಂತಃಕರಣವಿರುವ ಪಕ್ಷ ಯಾವುದಾದರೂ ಇದ್ದರೆ ಅದು ಬಿಜೆಪಿ. ಕೇಂದ್ರ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜನರಿಗೆ ಕೊಟ್ಟಿವೆ. ಕೇವಲ ನಮ್ಮ ದೇಶವಷ್ಠೆ ಅಲ್ಲ ಬೇರೆ ಬೇರೆ ರಾಷ್ಟ್ರಗಳಲ್ಲಿ ಸಂಕಷ್ಠದಲ್ಲಿರುವ ಹೆಣ್ಣು ಮಕ್ಕಳಿಗೂ ಮೋದಿ ನೆರವಿನ ಹಸ್ತ ಚಾಚಿದ್ದಾರೆ. ಹಣೆಬೊಟ್ಟು, ಬಳೆ ನಮ್ಮ ಸಂಸ್ಕøತಿ. ಇಡಿ ಪ್ರಪಂಚ ಭಾರತದ ಕಡೆ ತಿರುಗಿ ನೋಡುತ್ತಿದೆ ಎಂದರೆ ಅದಕ್ಕೆ ನಮ್ಮ ಪ್ರಧಾನಿ ಮೋದಿರವರ ಪಾರದರ್ಶಕ ಆಡಳಿತ ಕಾರಣ ಎಂದು ಶ್ಲಾಘಿಸಿದರು.ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ ಎಲ್ಲಾ ರಂಗಗಳಲ್ಲಿಯೂ ಪುರುಷನಿಗೆ ಮಹಿಳೆ ಸಮಾನವಾಗಿ ದುಡಿಯುತ್ತಿದ್ದಾಳೆ. ಬುಡಕಟ್ಟು ಸಮುದಾಯಕ್ಕೆ ಸೇರಿದ ಮಹಿಳೆಯನ್ನು ರಾಷ್ಟ್ರಪತಿಯನ್ನಾಗಿ ಮಾಡಿದ ಹೆಗ್ಗಳಿಕೆ ಪ್ರಧಾನಿಗೆ ಸಲ್ಲಬೇಕು. ಎಂಟು, ಒಂಬತ್ತು, ಹತ್ತನೆ ತರಗತಿ ಓದುವ ಹೆಣ್ಣು ಮಕ್ಕಳಿಗೆ ಪ್ರತಿ ವರ್ಷ ಎರಡು ಸಾವಿರ ರೂ.ಗಳನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಭಿಗಳಾಗಲು ಅನೇಕ ನೆರವು ಒದಗಿಸಿದೆ. ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಮಕ್ಕಳಿಗೆ ಸೈಕಲ್ ನೀಡಿದರು. ಇನ್ನೆರಡು ತಿಂಗಳಲ್ಲಿ ವಿಧಾನಸಭೆ ಚುನಾವಣೆ ಎದುರಾಗಲಿದೆ. ಬಿಜೆಪಿ.ಗೆ ಮತ ನೀಡಿ ರಾಜ್ಯದಲ್ಲಿ ಅಧಿಕಾರಕ್ಕೆ ತರುವಂತೆ ಮಹಿಳೆಯರಲ್ಲಿ ವಿನಂತಿಸಿದರು.
ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡುತ್ತ ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಮಹಿಳೆಯರ ಅಭಿವೃದ್ದಿಗೆ ವಿಶೇಷ ಗಮನ ಕೊಟ್ಟರು. ಎರಡು ವರ್ಷಗಳ ಕಾಲ ಇಡಿ ಜಗತ್ತನ್ನು ಕೊರೋನಾ ಕಾಡಿದ ಸಂದರ್ಭದಲ್ಲಿ ಭಾರತದ ಪ್ರಧಾನಿ ಮೋದಿರವರು ಯಾರು ಉಪವಾಸವಿರಬಾರದೆಂದು ಉಚಿತವಾಗಿ ಅಕ್ಕಿ ನೀಡಿದರು. ಮುಂದುವರೆದ ದೇಶಗಳು ಇನ್ನು ಕೊರೋನಾದಿಂದ ಚೇತರಿಸಿಕೊಳ್ಳಲು ಆಗುತ್ತಿಲ್ಲ. ಅದೇ ನಮ್ಮ ದೇಶದಲ್ಲಿ ಎಲ್ಲರಿಗೂ ಉಚಿತ ಲಸಿಕೆ ನೀಡಿದ್ದರ ಫಲವಾಗಿ ಸಾವು-ನೋವಿನ ಪ್ರಮಾಣ ಕಡಿಮೆಯಾಗಿದೆ ಎಂದು ಹೇಳಿದರು.
ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಮಾತನಾಡುತ್ತ ಒಂದೊಂದು ಹೊಳಲ್ಕೆರೆಯಲ್ಲಿ ಮಹಿಳಾ ಸಂಘಗಳಿಗೆ ಎರಡು ಲಕ್ಷ ರೂ.ಗಳನ್ನು ನೀಡಲಾಗಿದೆ. ಮುಂದಿನ ಏಪ್ರಿಲ್‍ನಿಂದ ಒಂದೊಂದು ಸಂಘಕ್ಕೆ ಐದು ಲಕ್ಷ ರೂ.ಗಳನ್ನು ಕೊಡಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹಿಳೆಯರಿಗಾಗಿಯೇ ವಿಶೇಷ ಯೋಜನೆಗಳನ್ನು ನೀಡಿದೆ. ಅದಕ್ಕಾಗಿ ರಾಜ್ಯದಲ್ಲಿ ಬಿಜೆಪಿ.ಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಮಹಿಳೆಯರ ಪಾತ್ರ ಮುಖ್ಯ ಎಂದರು.

 

Leave a Reply

Your email address will not be published. Required fields are marked *