ಮುರುಘಾ ಶರಣರಿಗೆ ಜಾಮೀನು ಮಂಜೂರು ಮಾಡಿದ ಹೈ ಕೋರ್ಟ್

ದೇಶ

ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ. ಶಿವಮೂರ್ತಿ ಮುರುಘಾ ಶರಣರಿಗೆ ಹೈ ಕೋರ್ಟ್ ಷರತ್ತು ಬದ್ದ ಜಾಮೀನು ನೀಡಿ ಆದೇಶಿಸಿದೆ.
ಪೋಕ್ಸೋ ಕಾಯ್ದೆಯಡಿ 14 ತಿಂಗಳ ಹಿಂದೆ ಕಾರಾಗೃಹದಲ್ಲಿದ್ದ ಮುರುಘಾ ಶರಣರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ. ಮುರುಘಾ ಶರಣರ ಎರಡು ಪ್ರಕರಣಗಳಲ್ಲಿ ಒಂದು ಪ್ರಕರಣಕ್ಕೆ ಷರತ್ತು ಬದ್ದ ಜಾಮೀನು ನೀಡಿದ್ದು, ಮೊದಲನೆಯಾದಾಗಿ ಎರಡೂ ಪ್ರಕರಣಗಳು ಮುಗಿಯುವವರೆಗೂ ಮುರುಘಾ ಶರಣರು ಚಿತ್ರದುರ್ಗ ಜಿಲ್ಲೆಯೊಳಗೆ ಪ್ರವೇಶ ಮಾಡಬಾರದೆಂದಿದೆ. ಎರಡೂ ಪ್ರತ್ಯೇಕ ಎರಡು ಲಕ್ಷದ ಬಾಂಡ್ ಗಳನ್ನು ನೀಡಬೇಕು. ಸಾಕ್ಷಿ ನಾಶ ಪಡಿಸುವಂತಹ ಕೆಲಸಕ್ಕೆ ಮುಂದಾಗಬಾರದು, ವಿಡಿಯೋ ಕಾನ್ಫರೆನ್ಸ್ ಮೂಲಕ ವಿಶೇಷ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾಗಬೇಕು, ಯಾವುದೇ ಕ್ರಮಿನಲ್ ಪ್ರಕರಣಗಳಲ್ಲಿ ಭಾಗಿಯಾಗುವಂತಿಲ್ಲ, ತಮ್ಮ ಪಾಸ್ ಪೋರ್ಟ್ ನ್ನು ವಿಚಾರಣೆ ನಡೆಸುತ್ತಿರುವ ಕೋರ್ಟ್ ಗೆ ನೀಡಬೇಕು. ಪ್ರತ್ಯಕ್ಷ ಮತ್ತು ಪರೋಕ್ಷವಾಗಿಯೂ ಕೂಡ ನ್ಯಾಯಂಗದ ನಿಂದನೆಯಾಗದಂತೆ ನೋಡಿಕೊಳ್ಳಬೇಕು. ಇವುಗಳಲ್ಲಿ ಯಾವುದೇ ಷರತ್ತು ಉಲ್ಲಂಘಿಸಿದರೂ ಕೂಡ ಜಾಮೀನು ರದ್ದು ಪಡಿಸಲಾಗುತ್ತದೆ ಎಂದು ಉಚ್ಛ ನ್ಯಾಯಾಲಯವು ಜಾಮೀನಿನ ಆದೇಶದಲ್ಲಿ ತಿಳಿಸಿದ್ದು ಎರಡನೇ ಪ್ರಕರಣದ ಜಾಮೀನು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಳ್ಳಬೇಕಿದೆ.

 

 

 

Leave a Reply

Your email address will not be published. Required fields are marked *