ಹಿರಿಯೂರು ಮಾಜಿ‌ ಶಾಸಕಿ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

ರಾಜ್ಯ

ಹಿರಿಯೂರಿನ ಮಾಜಿ ಶಾಸಕಿ ಪೂರ್ಣಿಮಾ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ  ಚರ್ಚೆಗಳು ವಿಧಾನ ಸಭೆ ಚುನಾವಣೆಗೂ  ಮುನ್ನ ನಡೆದಿದ್ದವು, ಆದರೆ ಯಡಿಯೂರಪ್ಪ‌ಅವರ ಮಾತಿಗೆ ಕಟ್ಟು ಬಿದ್ದು, ಪೂರ್ಣಿಮಾ ಶ್ರೀನಿವಾಸ್ ಬಿಜೆಪಿಯಿಂದಲೇ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಇದೀಗ   ಇಂದು ಸಂಜೆ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದು, ಮತ್ತೆ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಇದರಂತೆ ಅ.20 ಕ್ಕೆ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

 

 

 

Leave a Reply

Your email address will not be published. Required fields are marked *