Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
ರಾಜ್ಯ

ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

D KumaraswamyBy D KumaraswamyDecember 20, 2025No Comments2 Mins Read
Facebook Twitter Pinterest LinkedIn Tumblr WhatsApp VKontakte Email
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: null;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: off;albedo: ;confidence: ;motionLevel: -1;weatherinfo: null;temperature: 43;
Share
Facebook Twitter LinkedIn Pinterest Email

 

 

 

 

ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

ಚಿತ್ರದುರ್ಗ ಡಿ. 20:
ನನ್ನ 35 ವರ್ಷದ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲದಂತೆ ಜನ ಸೇವೆಯನ್ನೆ ಗುರಿಯಾಗಿಸಿಕೊಂಡು ಕೆಲಸ ಮಾಡುತ್ತಾ ಬಂದಿದ್ದೇನೆ. ಅಕ್ರಮ ಗಣಿಗಾರಿಕೆ, ಭೂಕಬಳಿಕೆ, ಒತ್ತುವರಿ ಯಾವುದೇ ಕೆಲಸ ನಾನು ಮಾಡಿಲ್ಲ ಇದರಲ್ಲಿ ಯಾವುದಾದರೊಂದು ಮಾಡಿರುವುದಾಗಿ ಯಾರಾದರೂ ಒಬ್ಬರು ಸಾಕ್ಷಿಯನ್ನು ಹೇಳಿದರೆ, ಅಥವ ಮಾಜಿ ಸಚಿವರು ಇದನನ್ನು ಸಾಬೀತುಪಡಿಸಿದರೆ ನಾನು ರಾಜಕೀಯದಿಂದಲೇ ನಿವೃತ್ತಿ ಹೊಂದುವುದಾಗಿ ಹೊಳಲ್ಕೆರೆ ಕ್ಷೇತ್ರದ ಶಾಸಕ ಡಾ.ಎಂ.ಚಂದ್ರಪ್ಪ ಸವಾಲ್ ಹಾಕಿದ್ದಾರೆ.
ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತಾಡಿ, ರಾಜಕೀಯದಲ್ಲಿ ನನ್ನ ತೇಜೋವಧೆ ಮಾಡುವುದಕ್ಕಾಗಿ ಕೆಲವರು ನನ್ನ ಮೇಲೆ ಇಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ.ಆರೋಪಕ್ಕು ಅದು ಸರಿಯಿದೆಯೇ ಎಂದು ಪರೀಶಿಲನೆ ಮಾಡಬೇಕೆಂದು ಮಾಜಿ ಸಚಿವ ಅಂಜನೇಯನ ಮೇಲೆ ಹರಿಹಾಯ್ದರು.
ಹೊಳಲ್ಕೆರೆಯಲ್ಲಿ ನನ್ನ ಮಗನ ಹೆಸರಿನಲ್ಲಿ ದಲಿತರ ಭೂಮಿ ಖರೀದಿಸಲಾಗಿದೆ ಎಂದು ಆರೋಪವನ್ನು ಹೊರಿಸಲಾಗಿದೆ. ಆದರೆ ನಾನು ಜಮೀನನ್ನು ಖರೀದಿ ಮಾಡಿದ್ದು, ಆ ಜಮೀನಿನನ್ನು 1910ರಲ್ಲಿ ಉಳಿಮೆ ಮಾಡಿ ಸುಮಾರು ನಾಲ್ಕು ಜನರ ಕೈಬದಲಾಗಿ ಈಗ ನನ್ನ ಮಗನ ಹೆಸರಿಗೆ ಖರೀದಿಸಲಾಗಿದೆ. ಮಾಜಿ ಸಚಿವರು ಹೇಳಿದಂತೆ ದಲಿತರ ಭೂಮಿಯನ್ನು ಕಬಳಿಸಿಲ್ಲ, ಇದಕ್ಕೆ ಬೇಕಾದ ದಾಖಲೆಗಳು ನನ್ನ ಬಳಿ ಇವೆ. ಅವುಗಳನ್ನು ಪರೀಶೀಲಿಸಬಹುದು.ನನ್ನ ಬಳಿ 500 ಎಕರೆ ಭೂಮಿ ಇದೆ ಅದರಲ್ಲಿ ಅಡಿಕೆ, ತೆಂಗು ಸೇರಿದಂತೆ ಇತರೆ ಬೆಳೆಗಳನ್ನು ಹಾಕಲಾಗಿದೆ. ನನಗೆ ಬೇರೆಯವರ ಭೂಮಿ ಕಬಳಿಸುವ ಕೀಳು ಮಟ್ಟಕ್ಕೆ ಹೋಗುವುದಿಲ್ಲ ಎಂದು ಕಿಡಿ ಕಾರಿದರು.
ಹೊಳಲ್ಕೆರೆ ತಾಲ್ಲೂಕಿನ ಬಿ.ದುರ್ಗ ಹೋಬಳಿಯ ಹೀರೇಕಂದವಾಡಿ ಗ್ರಾಮದ ರಿ.ಸ.ನಂ 91/5ರಲ್ಲಿ 4.04 ಖರಾಬು 0.06 ಗುಂಟೆ ಒಟ್ಟು ವಿಸ್ತಿರ್ಣ 3-38 ಗಂಟೆಯನ್ನು ಲಿಂಗಾಯಿತ, ಭೋವಿ ಈಡಿಗ ಸಮುದಾಯದವರಿಂದ ಹಾಗೂ ಇದೇ ಗ್ರಾಮದ ರಿ.ಸ.ನಂ.91/1ಬಿ2 ಒಟ್ಟು8-00 ಎಕರೆ ಖರಾಬು 0.12 ಗುಂಟೆ ಒಟ್ಟು ವಿಸ್ತೀರ್ಣ 7-28 ಗುಂಟೆ ಭೂಮಿಯನ್ನು ಲಿಂಗಾಯಿತ, ಈಡಿಗ ಸಮುದಾಯದಿಂದ ಸರ್ಕಾರದ ದಾಖಲೆಯಂತೆ ಖರೀದಿಸಿದೆ. ಇದರಲ್ಲಿ ಯಾವುದೇ ಮುಚ್ಚು ಮರೆ ಇಲ್ಲ ಎಲ್ಲವು ಪಾರದರ್ಶಕವಾಗಿದೆ. ಮಾಜಿ ಸಚಿವರು ದಲಿತರ ಭೂಮಿಯನ್ನು ಖರೀದಿ ಮಾಡಿದ್ದಾರೆ ಎಂದು ದೂರಿದ್ದಾರೆ ,ಆದರೆ 1910ರಲ್ಲಿ ಪರಿಶಿಷ್ಟರಿಗೆ ಕಾಯ್ದೆ ಇರಲಿಲ್ಲ ಎಂಬ ಅರಿವು ಅವರಿಗೆ ಇಲ್ಲವಾಗಿದೆ ಎಂದು ಚಂದ್ರಪ್ಪ ತಿಳಿಸಿದರು.
ಮಾಜಿ ಸಚಿವರು ನಿಮೆಗೆ ಬೇರೆಯವರ ಪಹಣಿಯನ್ನು ತೋರಿಸಿ ಯಾಮಾರಿಸಿದ್ದಾರೆ. ಇದರ ಬಗ್ಗೆ ಕೊಲಂಕುಶವಾಗಿ ತನಿಖೆಯಾಗಬೇಕಿದೆ. ತಹಶೀಲ್ದಾರವರಿಂದ ತಪ್ಪು ವರದಿಯನ್ನು ನಿರ್ಮಾಣ ಮಾಡಲಾಗಿದೆ. ನನ್ನ ರಾಜಕೀಯ ಜೀವನ ವೈಟ್ ಪೇಪರ್ ಇದ್ದಂತೆ ಇದರಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲವಾಗಿದೆ, ನನಗೆ ಕೆಟ್ಟ ಕೆಲಸವನ್ನು ಮಾಡಿದ ಅನುಭವ ಇಲ್ಲ ಅವರ ಮಾತಿನಲ್ಲಿ ಅರ್ಥ ಇಲ್ಲ. ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ, ಅದು ಸತ್ಯಕ್ಕೆ ದೂರ ಎಂದರು.

Share. Facebook Twitter Pinterest LinkedIn Tumblr WhatsApp Email
Previous Articleಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Next Article ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
D Kumaraswamy
  • Tumblr

Related Posts

ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

January 31, 2026

ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

January 30, 2026

ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

January 11, 2026

ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

January 8, 2026
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.