ಹಿರಿಯೂರು ಜೆಡಿಎಸ್ ಅಭ್ಯರ್ಥಿ ಎಂ. ರವೀಂದ್ರಪ್ಪ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮುಂಗುಸುವಳ್ಳಿ ಗ್ರಾಮದಲ್ಲಿರುವ ರವೀಂದ್ರಪ್ಪ ಮನೆ ಮೇಲೆ ಬೆಂಗಳೂರು ದಾವಣಗೆರೆ ಮತ್ತು ಚಿತ್ರದುರ್ಗ ಐಟಿ ಅಧಿಕಾರಿಗಳ ತಂಡವು ದಾಳಿ ನಡೆಸಿದೆ. ಐಟಿ ಡೆಪ್ಯೂಟಿ ಕಮೀಷನರ್ ಮಿಥುನ್ ನೇತೃತ್ವದ ತಂಡವು ದಾಳಿ ನಡೆಸಿ ಮನೆಯಲ್ಲಿದ್ದ ದಾಖಲೆಗಳನ್ನು ಪರಿಶೀಲಿಸಿದ್ದಾರೆ.ಪೊಲೀಸ್ ಭದ್ರತೆಯಲ್ಲಿ ಆಗಮಿಸಿರುವ ಐಟಿ ಅಧಿಕಾರಿಗಳು ಪರಿಶೀಲನೆಯನ್ನು ಮುಂದುವರೆಸಿದ್ದಾರೆ