ಅಭಿವೃದ್ದಿ ಕೆಲಸ ಮಾಡುವ ಮೂಲಕ ಜನಾನುರಾಗಿಗಳಾಗಬೇಕು

ಆರೋಗ್ಯ

ಚಿತ್ರದುರ್ಗ: ರಾಜ್ಯದ ಅಭಿವೃದ್ಧಿಗೆ ಉತ್ತಮ ಕೆಲಸ ಮಾಡುವ ಮೂಲಕ ಜನಾನುರಾಗಿಗಳಾಗಬೇಕೆಂದು ವಿಧಾನಪರಿಷತ್ ಸದಸ್ಯ ಸುನೀಲ್ ವಲ್ಯಾಪುರೆ ಅವರಿಗೆ ಅಭಿನಂದಿಸಿ ಭೋವಿಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರು ಮಾತನಾಡಿದರು.

 

 

 

ಕಾಯಕದಲ್ಲಿ ನಿಷ್ಠೆ ಇದ್ದರೆ ಜೀವನದಲ್ಲಿ ಯಶಸ್ವಿಯೊಂದಲು ಸಾಧ್ಯವಾಗುತ್ತದೆ. ಉತ್ತಮವಾದ ಕಾರ್ಯಗಳನ್ನು ಮಾಡುವ ಮೂಲಕ ಸಮಾಜದ ಅಭಿವೃದ್ಧಿಗೆ ಹೆಚ್ಚು ಶ್ರಮಿಸಬೇಕು ಎಂದು ತಿಳಿಸಿದರು.
ವಿವಿಧ ಮಠಾಧೀಶರಾದ ಶ್ರೀ ಮುರುಘಾಮಠದ ಡಾ.ಶಿವಮೂರ್ತಿ ಮುರುಘ ಶರಣರು, ಕುಂಚಿಟಿಗ ಗುರುಪೀಠದ ಜಗದ್ಗುರು ಶ್ರೀ ಡಾ.ಶಾಂತವೀರ ಸ್ವಾಮೀಜಿ, ಯಾದವ ಗುರುಪೀಠದ ಜಗದ್ಗುರು ಶ್ರೀ ಕೃಷ್ಣ ಯಾದವ ನಂದ ಸ್ವಾಮೀಜಿ, ಭಗೀರಥ ಗುರುಪೀಠದ ಜಗದ್ಗುರು ಶ್ರೀ ಡಾ.ಪುರುಷೋತ್ತಮನಂದ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ, ಕನಕ ಗುರುಪೀಠದ ಪರಮಪೂಜ್ಯ ಶ್ರೀ ಈಶ್ವರಾನಂದ ಸ್ವಾಮೀಜಿ, ಮಡಿವಾಳ ಗುರುಪೀಠದ ಜಗದ್ಗುರು ಶ್ರೀ ಬಸವಮಾಚಿ ದೇವ ಸ್ವಾಮೀಜಿ, ಪಂಚಮಸಾಲಿ ಗುರುಪೀಠದ ಜಗದ್ಗುರು ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ, ಈಡಿಗ ಗುರುಪೀಠದ ಜಗದ್ಗುರು ರೇಣುಕಾನಂದ ಸ್ವಾಮೀಜಿ, ಹಡಪದ ಗುರುಪೀಠದ ಜಗದ್ಗುರು ಅನ್ನದಾನಿ ಭಾರತೀ ಅಪ್ಪಣ್ಣಸ್ವಾಮಿ ಗಳನ್ನು ಭೇಟಿಮಾಡಿ ವಿಧಾನಪರಿಷತ್ ಸದಸ್ಯರಾದ ಸುನೀಲ್ ವಲ್ಯಾಪುರೆ ದರ್ಶನಾಶೀರ್ವಾದ ಪಡೆದರು.
ಸಂಯುಕ್ತವಾಣಿ
ಡಿ.ಕುಮಾರಸ್ವಾಮಿChitradurga  jananuragigalagabeku

Leave a Reply

Your email address will not be published. Required fields are marked *