ಡಿಸೆಂಬರ್ 5 ರಂದು ಹಾಸನದಲ್ಲಿ ಜನ ಕಲ್ಯಾಣ ಸ್ವಾಭಿಮಾನಿ ಸಮಾವೇಶ ನಡೆಸಲಾಗುವುದೆಂದು ಮಾಜಿ ಸಚಿವ ಹೆಚ್. ಆಂಜನೇಯ ಹೇಳಿದರು. ಅವರು ಚಿತ್ರದುರ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತಾಡಿ,ರೈತರು, ಕಾರ್ಮಿಕರು, ವಿದ್ಯಾರ್ಥಿಗಳು,ನಿರುದ್ಯೋಗಿ ಯುವಕ ಯುವತಿಯರು ಶೋಷಿತರು ಮಹಿಳೆಯರಿಗೆ ಬಲ ತುಂಬುವ ಉದ್ದೇಶದಿಂದ ಹಮ್ಮಿಕೊಂಡಿರುವ ಸಮಾವೇಶಕ್ಕೆ ಜಿಲ್ಲೆಯ ಆರು ತಾಲೂಕುಗಳಿಂದ ಸಾವಿರಾರು ಜನ ಕಾರ್ಯಕರ್ತರು ಪಾಲ್ಗೊಳ್ಳುವರು, ಆರ್ಥಿಕ ಸಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರನ್ನು ಬಲಪಡಿಸುವುದು ಜನಕಲ್ಯಾಣ ಸ್ವಾಭಿಮಾನಿ ಸಮಾವೇಶದ ಉದ್ದೇಶ ಎಂದರು. ವಿಧಾನ ಸಭೆ ಚುನಾವಣೆಯ ಪೂರ್ವದಲ್ಲಿ ಐದು ಉಚಿತ ಗ್ಯಾರಂಟಿಳನ್ನು ಈಡೇರಿಸಿ ನುಡಿದಂತೆ ನಡೆದಿರುವ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಹದಿನೇಳು ಬಜೆಟ್ ಮಂಡಿಸಿರುವ ಅನುಭವವಿದೆ.ಬಿಜೆಪಿಯವರು ಮುಡಾ ಹಗರಣದಲ್ಲಿ ಸಿಲುಕಿಸಲು ಏನೆಲ್ಲಾ ಕುತಂತ್ರ ಮಾಡಿದರೂ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕೈ ಹಿಡಿದು, ಬಿಜೆಪಿಗೆ ತಕ್ಕ ಉತ್ತರ ನೀಡಿದ್ದಾರೆ. ಯಾವುದೇ ಕಪ್ಪು ಚುಕ್ಕೆ ಇಲ್ಲದೆ, ಉಚಿತ ವಿದ್ಯುತ್ ಗೃಹ ಲಕ್ಷ್ಮಿ ಶಕ್ತಿ ಯೋಜನೆ , ಅನ್ನಭಾಗ್ಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿರುವುದನ್ನು ಬಿಜೆಪಿಯವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಸಾಲು ಸಾಲು ಆರೋಪಗಳನ್ ಹೊರಿಸುತ್ತಿರುವುದರಲ್ಲಿ ಯಾವುದೇ ಅರ್ಥವಿಲ್ಲ. ಮೂರನೇ ಬಾರಿಗೆ ಮೋದಿಯವರು ಪ್ರಧಾನಿಯಾಗಿದ್ದು, ಯಾವುದೇ ಬದಲಾವಣೆಯಾಗಿಲ್ಲ.ಅದಾನಿ ಅಂಬಾನಿಗೆ ಅನುಕೂಲವಾಗಿದೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಕೊಡುವುದಾಗಿ ಹೇಳಿ ಯುವಕರನ್ನು ವಂಚಿಸಿದ್ದಾರೆ. ರೈತರ ಆಧಾಯ ದುಪ್ಪಟ್ಟುಗೊಳಿಸುವುದಾಗಿ ಹೇಳಿ ಯಾವುದು ಈಡೇರಿಲ್ಲ ಎಂದು ಆಂಜನೇಯ ಆಪಾದಿಸಿದರು. ಜಿಲ್ಲಾಧ್ಯಕ್ಷ ಎಂಕೆ ತಾಜ್ ಪೀರ್, ಪ್ರಧಾನ ಕಾರ್ಯದರ್ಶಿಗಳಾದಡಿಎನ್ ಮೈಲಾರಪ್ಪ, ಸಂಪತ್ ಕುಮಾರ್,ಜಿಲ್ಲಾ ಕಾಂಗ್ತೆಸ್ ಪ್ರಚಾರ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ,ಜಿಪಂ ಮಾಜಿ ಸದಸ್ಯರುಗಳಾದ ಬಿಪಿ ಪ್ರಕಾಶ್ ಮೂರ್ತಿ, ಆರ್ ನರಸಿಂಹ ರಾಜು, ಗ್ಯಾರಂಟಿಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಪ್ರಕಾಶ್, ಮಾಜಿ ಅಧ್ಯಕ್ಷ ಓ ಶಂಕರ್ ಬಿಪಿ ತಿಪ್ಪೇಸ್ವಾಮಿ, ರವೀಂದ್ರ ಶರಣಪ್ಪ ಮುಂತಾದವರಿದ್ದರು.





