Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜಕೀಯ»ಎಲ್ಲರೂ  ಒಂದಾಗಿ ದುಡಿಯೋಣ,ಬಿಜೆಪಿಯನ್ನು ಬಲಪಡಿಸೋಣ
ರಾಜಕೀಯ

ಎಲ್ಲರೂ  ಒಂದಾಗಿ ದುಡಿಯೋಣ,ಬಿಜೆಪಿಯನ್ನು ಬಲಪಡಿಸೋಣ

D KumaraswamyBy D KumaraswamyFebruary 8, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಎಲ್ಲರೂ  ಒಂದಾಗಿ ದುಡಿಯೋಣ. ಬಿಜೆಪಿ.ಯನ್ನು ಬಲಪಡಿಸಿ ಮತ್ತೆ ನರೇಂದ್ರಮೋದಿಯನ್ನು ದೇಶದ ಪ್ರಧಾನಿಯನ್ನಾಗಿ ಮಾಡೋಣ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸ್ಪರ್ಧಾಕಾಂಕ್ಷಿ ಎಂ.ಸಿ.ರಘುಚಂದನ್ ಮುಖಂಡರು ಹಾಗೂ ಕಾರ್ಯಕರ್ತರುಗಳಲ್ಲಿ ಮನವಿ ಮಾಡಿದರು.
ಚಳ್ಳಕೆರೆ ಪಟ್ಟಣದಲ್ಲಿ ನಡೆದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಚಿತ್ರದುರ್ಗ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಐದರಲ್ಲಿ ನಮ್ಮ ಪಕ್ಷಕ್ಕೆ ಸೋಲಾಗಿದೆ. ಹೊಳಲ್ಕೆರೆಯಲ್ಲಿ ಎಂ.ಚಂದ್ರಪ್ಪ ಒಬ್ಬರೆ ಗೆದ್ದು ಶಾಸಕರಾಗಿದ್ದಾರೆ. ಪಾರ್ಲಿಮೆಂಟ್ ಕ್ಷೇತ್ರದ ಎಂಟು ತಾಲ್ಲೂಕುಗಳಲ್ಲಿ ಒಬ್ಬರೆ ಶಾಸಕರಿರುವುದರಿಂದ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ಮೂಡಿಸಬೇಕಿದೆ. 2019 ರಲ್ಲಿಯೇ ನಾನು ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೇಟ್ ಕೇಳಿದ್ದೆ. ಪಕ್ಷದ ವರಿಷ್ಠರು ಮುಂದಿನ ಸಾರಿ ಅವಕಾಶ ನೀಡುವುದಾಗಿ ಹೇಳಿದ್ದರಿಂದ ಸುಮ್ಮನಾದೆ. ಈಗಲೂ ನಾನು ಆಕಾಂಕ್ಷಿಯೇ. ಆದರೆ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಲಿ ಮನಃಪೂರ್ವಕವಾಗಿ ಗೆಲುವಿಗೆ ದುಡಿಯುತ್ತೇನೆಂದು ಭರವಸೆ ನೀಡಿದರು.
ಟಿಕೆಟ್, ಓಟಿನ ರಾಜಕಾರಣ ಮಾಡುವವನಲ್ಲ. ಹಿರಿಯರ ಸಲಹೆ, ಮಾರ್ಗದರ್ಶನ ಪಡೆದು ಪಕ್ಷ ಗಟ್ಟಿಗೊಳಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ನಾವು ಒಂದು ಸಮುದಾಯದ ವಿರುದ್ದ ಹೊರಟಿದ್ದೇವೆಂದು ಕೆಲವರು ಬಿಂಬಿಸಿದ್ದರು. ಯಾರ ಮೇಲೂ ನನಗಾಗಲಿ ನನ್ನ ತಂದೆ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪನವರಿಗಾಗಲಿ ಶತ್ರುತ್ವವಿಲ್ಲ. ಎಲ್ಲರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತೇವೆ. ಯಾರು ವಿರೋಧಿಗಳಲ್ಲ. ಒಂದು ಕುಟುಂಬಕ್ಕೆ ಸೇರಿದವರು ಎನ್ನುವ ಭಾವನೆಯಿಂದ ಪಕ್ಷ ಬಲವರ್ಧನೆಗೆ ಶ್ರಮಿಸಬೇಕಿದೆ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಪಕ್ಷ ಟಿಕೇಟ್ ಯಾರಿಗೆ ಕೊಡಲಿ ಬದ್ದತೆಯಿಟ್ಟುಕೊಂಡು ಕೆಲಸ ಮಾಡುತ್ತೇವೆ. ನರೇಂದ್ರಮೋದಿಯಂತಹ ಪುಣ್ಯಾತ್ಮನನ್ನು ಗೆಲ್ಲಿಸಿಕೊಳ್ಳದಿದ್ದರೆ ನಮ್ಮಂತಹ ಮೂರ್ಖರು ಯಾರೂ ಇಲ್ಲ. ಹಾಗಾಗಿ ಎಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕಾಗಿ ದುಡಿಯೋಣ ಎಂದು ಹೇಳಿದರು.
ಚಳ್ಳಕೆರೆ ಮಾಜಿ ಶಾಸಕ ಬಸವರಾಜ್ ಮಂಡಿಮಠ್, ಮಾಜಿ ಅಧ್ಯಕ್ಷ ಡಿ.ಸೋಮಶೇಖರ್ ಮಂಡಿಮಠ್, ಹಿರಿಯ ಮುಖಂಡರುಗಳಾದ ಜಯಪಾಲಯ್ಯ, ಭದ್ರಣ್ಣ, ಶಿವಪುತ್ರಪ್ಪ, ಪ್ರಸಾದ್, ವೀರಣ್ಣ, ಶ್ರೀಮತಿ ಪಾಲಮ್ಮ, ಶ್ರೀಮತಿ ರತ್ನಮ್ಮ, ಶ್ರೀಮತಿ ಸಾಕಮ್ಮ ಇನ್ನು ಅನೇಕರು ವೇದಿಕೆಯಲ್ಲಿದ್ದರು.
ಜಾಜೂರು, ನನ್ನಿವಾಳ, ಪರಶುರಾಂಪುರ, ತಳಕಿನಲ್ಲಿ ಕಾರ್ಯಕರ್ತರನ್ನು ಭೇಟಿಯಾಗಿ ಹುರಿದುಂಬಿಸಿದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಬಿಜೆಪಿ ಮನೆಯೊಂದು‌ ಮೂರು ಬಾಗಿಲು: ಭುಗಿಲೆದ್ದ ಅಸಮಾಧಾನ
Next Article ಒಂದು ತಿಂಗಳೊಳಗೆ ಜನ ಸ್ಪಂದನೆ ಅರ್ಜಿ,ಅಹವಾಲುಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ
D Kumaraswamy
  • Tumblr

Related Posts

ಜಾತಿಪ್ರಮಾಣ ಪತ್ರ ವಿತರಣೆಗೆ ಇದ್ದ ಅಡ್ಡಿ ಆತಂಕ ದೂರ; ತಂತ್ರಾಂಶ ಕಾರ್ಯಾರಂಭ : ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ

November 12, 2025

ಪ್ರಧಾನಿ ಮೋದಿಯವರದ್ದು ಕಳಂಕರಹಿತ ರಾಜಕಾರಣ: ಛಲವಾದಿ ನಾರಾಯಣಸ್ವಾಮಿ

June 12, 2025

ಬಿಜೆಪಿಯಲ್ಲಿ ಚಿತ್ರದುರ್ಗ ಲೋಕಸಭೆಗೆ ಅಚ್ಚರಿ ಅಭ್ಯರ್ಥಿ ಯಾರು?

March 21, 2024

ಎಲ್ಲೆಲ್ಲೂ ಸ್ಥಳೀಯ ಅಭ್ಯರ್ಥಿ ಕೂಗು : ಡಾ.ಬಿ .ತಿಪ್ಪೇಸ್ವಾಮಿ ಫುಲ್ ರೌಂಡ್ಸ್

February 24, 2024
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.