ಪಾವಗಡದ ವೈ.ಎನ್.ಹೊಸಕೋಟೆಯಲ್ಲಿ ಕಾಂಗ್ರೆಸ್ ನ ಅಬ್ಬರದ ಪ್ರಚಾರ

ರಾಜ್ಯ

ಪಾವಗಡದ ವೈ.ಎನ್.ಹೊಸಕೋಟೆಯಲ್ಲಿ ಅಬ್ಬರಿಸುತ್ತಿದೆ ಕಾಂಗ್ರೆಸ್ ಅಲೆ

ಪಾವಗಡ ವಿಧಾನಸಭಾ ಕ್ಷೇತ್ರದ ವೈ.ಎನ್.ಹೊಸಕೋಟೆಯಲ್ಲಿ  ಶಾಸಕ  ಹೆಚ್.ವಿ. ವೆಂಕಟೇಶ್ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ ಅವರೊಂದಿಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ  ಬಿ.ಎನ್.ಚಂದ್ರಪ್ಪ  ಮತಯಾಚನೆ ಮಾಡಿದರು.

 

 

 

ಮಹಿಳೆಯರ, ರೈತರ, ಯುವಕರ ಹಿತಾಸಕ್ತಿ ಕಾಪಾಡುವ ಕಾಂಗ್ರೆಸ್ ಪಕ್ಷ ಬೆಂಬಲಿಸಿ, ಜನವಿರೋಧಿ ಬಿಜೆಪಿ ಪಕ್ಷವನ್ನು ತಿರಸ್ಕರಿಸಿ, ನನಗೆ ಹೆಚ್ಚಿನ ಮತ ನೀಡಿ ಆಶೀರ್ವಾದ ಮಾಡಬೇಕೆಂದು ಮನವಿ ಮಾಡಿದರು.

ಮಾಜಿ ಸಚಿವ  ವೆಂಕಟರಮಣಪ್ಪ ಮಾತನಾಡಿ, ಎಲ್ಲ ವರ್ಗದ ಜನರ ಕುಂದು ಕೊರತೆಗಳಿಗೆ ಸ್ಪಂದಿಸುವುದು ಕೇವಲ ಕಾಂಗ್ರೆಸ್ ಪಕ್ಷ ಮಾತ್ರ. ನಮ್ಮ ಗ್ಯಾರಂಟಿಗಳು ಎಲ್ಲ ವರ್ಗದ ಜನರನ್ನು ತಲುಪಿದೆ. ದೇಶದಲ್ಲೂ ಕಾಂಗ್ರೆಸ್ ನಿಂದ ಗ್ಯಾರಂಟಿಗಳನ್ನು ಘೋಷಿಸಲಾಗಿದೆ. ವಿದ್ಯಾವಂತರು,ಸರಳ ಸಜ್ಜನರಾದ  ಬಿಎನ್ ಚಂದ್ರಪ್ಪ ಅವರು ನಮ್ಮ ಜಿಲ್ಲೆಯ ಧ್ವನಿಯಾಗಲಿದ್ದಾರೆ  ಎಂದರು. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುವ  ಬಿಎನ್ ಚಂದ್ರಪ್ಪ ಅವರನ್ನು ಸಂಸದರನ್ನಾಗಿ ಚುನಾಯಿಸುವಂತೆ ಮನವಿ ಮಾಡಿದರು

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು, ಸದಸ್ಯರು, ಪಾವಗಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರುಗಳು, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ನಗರಸಭಾ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ವಿವಿಧ ನಾಮನಿರ್ದೇಶನ ಸದಸ್ಯರು, ಸಾರ್ವಜನಿಕರು, ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *