ಮಾದಾರ ಚನ್ನಯ್ಯ ಶ್ರೀಗಳ ಎಂಟ್ರಿ?
ಚಿತ್ರದುರ್ಗದ ಮಾದಾರ ಚನ್ನಯ್ಯ ಸ್ವಾಮೀಜಿಗಳ ಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದರೆ ನಾನು ಅತ್ಯಂತ ಸಂತೋಷ ಪಡುತ್ತೇನೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.
ಅವರು ಚಿತ್ರದುರ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತಾಡಿದರು.
ಅಭ್ಯರ್ಥಿಯಾಗುತ್ತಾರೆ ಎನ್ನುವುದು ನನಗೆ ಗೊತ್ತಿಲ್ಲ,ಗೊತ್ತಿಲ್ಲದೆ ನಾನು ಸುಮ್ಮನೆ ಏನನ್ನು ಹೇಳುವುದಿಲ್ಲ. ನಮ್ಮ ರಾಜ್ಯದಲ್ಲಿ ಈ ಬಗ್ಗೆ ಚರ್ಚೆ ನಡೆದಿಲ್ಲ,ಕೇಂದ್ರದಲ್ಲಿ ಆಗಿದ್ದರೆ ನನಗೆ ಗೊತ್ತಿಲ್ಲ, ಸ್ವಾಮೀಜಿಗಳು ಈ ದೇಶದ ಪ್ರಜೆಗಳಲ್ಲವೇನು? ದೇಶಕ್ಕೆ ಮಾರ್ಗದರ್ಶನ ಮಾಡುತ್ತಿರುವವರು, ಅವರು ಒಂದು ರೀತಿ ತ್ಯಾಗಿಗಳು ಅವರಂತವರು ಬಂದರೆ ದೇಶಕ್ಕೆ ಒಳ್ಳೆಯದಾಗುತ್ತದೆ ಎಂದು. ಈ ಸಮಯದಲ್ಲಿ ಮಾಜಿ ಶಾಸಕ ತಿಪ್ಪಾರೆಡ್ಡಿ, ಜಿಲ್ಲಾ ಬಿಜೆಪಿ ಮುಖಂಡರಿದ್ದರು