Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಮಹಾ ಶಿವರಾತ್ರಿ ಮಹೋತ್ಸವ ಮಾ.4 ರಿಂದ 9 ರವೆರೆಗೆ
ಜಿಲ್ಲಾ ಸುದ್ದಿ

ಮಹಾ ಶಿವರಾತ್ರಿ ಮಹೋತ್ಸವ ಮಾ.4 ರಿಂದ 9 ರವೆರೆಗೆ

D KumaraswamyBy D KumaraswamyMarch 2, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

೯೪ನೇ ಮಹಾ ಶಿವರಾತ್ರಿ ಮಹೋತ್ಸವವೂ ಮಾ. ೪ ರಿಂದ ೯ರವರೆಗೆ ಚಿತ್ರದುರ್ಗ ನಗರದ ಶ್ರೀ ಕಬೀರಾನಂದಾಶ್ರಮದ ವತಿಯಿಂದ ಶ್ರೀಮಠದ ಆವರಣದಲ್ಲಿ ನಿರ್ಮಿತವಾಗಿರುವ ಶ್ರೀ ಸದ್ಗುರು ಕಬೀರಾನಂದಸ್ವಾಮಿ ಮಹಾ ಮಂಟಪದಲ್ಲಿ ನಡೆಯಲಿದ್ದು, ಇದರಲ್ಲಿ ಪ್ರತಿ ದಿನ ನಾಡಿನ ವಿವಿಧ ಮಠಾಧೀಶರು, ಸಾಹಿತಿಗಳು, ವಿಚಾರವಂತರು ಆಗಮಿಸುವುದರ ಮೂಲಕ ತಮ್ಮ ವಿಚಾರಧಾರೆಯನ್ನು ನೀಡಲಿದ್ದಾರೆ ಎಂದು ೯೪ನೇ ಮಹಾ ಶಿವರಾತ್ರಿ ಸಪ್ತಾಹದ ಅಧ್ಯಕ್ಷರಾದ ಕೆ.ಸಿ.ನಾಗರಾಜು ತಿಳಿಸಿದರು.
ನಗರದ ಶ್ರೀಮಠದ ಆವರಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತಾಡಿದರು. ಮಾ.೪ರ ಸಂಜೆ ಸಭಾಮಂಟಪವನ್ನು ರಾಜ್ಯ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಹಾಗೂ ಕಾರ್ಯಕ್ರಮವನ್ನು ಶಾಸಕ ವೀರೆಂದ್ರ ಪಪ್ಪಿ ಉದ್ಘಾಟಿಸಲಿದ್ದಾರೆ.
ಮಾ.೫ರಂದು ಶಿವನಾಮ ಸಪ್ತಾಹದಲ್ಲಿ ಕೇಂದ್ರ‌ ಸಚಿವ ಎ.ನಾರಾಯಣಸ್ವಾಮಿ ಪಾಲ್ಗೊಳ್ಳಲಿದ್ದಾರೆ.
ಮಾ. ೬ರ ಕಾರ್ಯಕ್ರಮದಲ್ಲಿ ಸಾನಿಧ್ಯವನ್ನು ಬೆಂಗಳೂರಿನ ಗವಿಪುರಂನ ಶ್ರೀ ಭವಾನಿ ದತ್ತ ಮಠದ ಶ್ರೀ ಮಂಜುನಾಥ್ ಭಾರತಿ ಶ್ರೀಗಳು, ಹಾಸನದ ಶ್ರೀ ಆದಿಚುಂಚುನಗಿರಿಯ ಶಾಖಾ ಮಠದ ಶ್ರೀ ಶಂಬುನಾಥ್ ಶ್ರೀಗಳು, ಚಿತ್ರದುರ್ಗದ ಯೋಗವನ ಬೆಟ್ಟದ ವನಶ್ರೀ ಮಠದ ಅಧ್ಯಕ್ಷರಾದ ಡಾ.ಶ್ರೀ ಬಸವಕುಮಾರ್ ಶ್ರೀಗಳು ವಹಿಸಲಿದ್ದಾರೆ. ಮಾ.೭ರ ಸಂಜೆ ೬.೩೦ಕ್ಕೆ ನಡೆಯುವ ಕಾರ್ಯಕ್ರಮದ ಸಾನಿದ್ಯವನ್ನು ಹೊಸದುರ್ಗದ ಮದುರೆಯ ಬ್ರಹ್ಮವಿದ್ಯಾನಗರದ ಶಿಲಾಪುರಿ ಉಪ್ಪಾರ ಭಗೀರಥ ಮಹಾ ಸಂಸ್ಥಾನದ ಶ್ರೀ ಪುರುಷೋತ್ತಮಾನಂದಪುರಿ ಶ್ರೀಗಳು, ಶೃಂಗೇರಿಯ ಶ್ರೀ ಆದಿಚುಂಚನಗಿರಿ ಶಾಖಾಮಠದ ಶ್ರೀ ಗುಣನಾಥ್ ಶ್ರೀಗಳು, ಚಿಕ್ಕಬಳಾಪುರದ ಶ್ರೀ ಮಂಗಳನಾಥ್ ಶ್ರೀಗಳು ವಹಿಸಲಿದ್ದಾರೆ.
ಮಾ.೮ ಮಧ್ಯಾಹ್ನ ೨.೩೦ಕ್ಕೆ ನಗರದ ರಾಜ ಬೀದಿಗಳಲ್ಲಿ ಶ್ರೀ ಕಬೀರಾನಂದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಮಠದ ಪೀಠಾಧ್ಯಕ್ಷರಾದ ಶ್ರೀ ಶಿವಲಿಂಗಾನಂದ ಶ್ರೀಗಳ ಪಲ್ಲಕ್ಕಿ ಉತ್ಸವ ಹಾಗೂ ಜನಪದ ಉತ್ಸವ ನಡೆಯಲಿದೆ, ಇದರ ಉದ್ಘಾಟನೆಯನ್ನು , ೯೪ನೇ ಮಹಾ ಶಿವರಾತ್ರಿ ಸಪ್ತಾಹದ ಅಧ್ಯಕ್ಷರಾದ ಕೆ.ಸಿ.ನಾಗರಾಜು ನೇರವೇರಿಸಲಿದ್ದಾರೆ. ಇದರಲ್ಲಿ ಕೀಲುಕುದುರೆ, ತಮಟೆ, ಜಾಂಜ್ ನೃತ್ಯ, ಕಿನ್ನರಿಜೋಗಿ, ಲಂಬಾಣಿ ನೃತ್ಯ, ಖಾಸಾಬೇಡರಪಡೆ, ಡೊಳ್ಳು ಕುಣಿತ, ಕೋಲಾಟ ಭಜನೆ ಶಾರದ ಬ್ರಾಸ್ ಬ್ಯಾಂಡ್ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಲಿವೆ.
ಸಂಜೆ ೭ಕ್ಕೆ ನಡೆಯುವ ಕಾರ್ಯಕ್ರಮ ಮುಂದುವರೆಯಲಿದೆ. ಶ್ರೀ ಸದ್ಗುರು ಕಬೀರಾನಂದ ಮಹಾಸ್ವಾಮಿಗಳ ಆದೇಶದಂತೆ ಚಿತ್ರದುರ್ಗದಲ್ಲಿ ಮಾನವರ ಕಲ್ಯಾಣಕ್ಕಾಗಿ ಸ್ಥಾಪಿಸಿದ ಆದ್ವೈತ, ಜಾತ್ಯಾತೀತ ಸಂಪ್ರದಾಯ ಮಠವೇ ಶ್ರೀ ಸದ್ಗುರು ಕಬೀರಾನಂದ ಆಶ್ರಮವಾಗಿದೆ. ಗುರುಗಳ ಪರಂಪರೆಯಂತೆ ಪ್ರತಿ ವರ್ಷವೂ ಶಿವನಾಮ ಸಪ್ತಾಹವನ್ನು ಮಹಾ ಶಿವರಾತ್ರಿ ಸಮಯದಲ್ಲಿ ನಡೆಸಿಕೊಂಡು ಬರುತ್ತಿದೆ. ಇದು ಮಠದ ವೈಶಿಷ್ಟವಾಗಿದೆ. ಶಿವನಾಮ ಸಪ್ತಾಹವನ್ನು ಜಾತಿ-ಮತಗಳ ಚೌಕಟ್ಟನ್ನು ಮೀರಿ ನಾಡಿನ ಜನರ ಭಾವೈಕ್ಯ ಸಾಧನೆಯನ್ನು ಮಾಡಲಾಗುತ್ತಿದೆ ಎಂದರು.
ಶಿವರಾತ್ರಿ ಎಂದರೆ ಶಿವನನ್ನು ಭಕ್ತಿಯಿಂದ ಆದಿನ ಆರಾಧನೆ ಮಾಡುವ ಮೂಲಕ ತಮ್ಮ ಭಕ್ತಿಯನ್ನು ಪ್ರದರ್ಶನ ಮಾಡಬೇಕಿದೆ. ಶಿವ ದಕ್ಷಿಣ ಪ್ರಾಂತ್ಯದವನು ಎನ್ನವುದು ಹೆಮ್ಮೆಯ ವಿಷಯವಾಗಿದೆ, ೧೯೨೪ರಿಂದ ಚಿತ್ರದುರ್ಗದ ಕಬೀರಾನಂಧಾಶ್ರಮದಲ್ಲಿ ಶಿವರಾತ್ರಿ ಸಪ್ತಾಹ ಪ್ರಾರಂಭವಾಯಿತು. ಆರಂಭದಲ್ಲಿ ಅಷ್ಟಾಗಿ ಬೆಳಕಿಗೆ ಬಾರದೆ ಶ್ರೀಮಠದಲ್ಲಿ ಸೂಕ್ತವಾಗಿ ನಡೆಯುತ್ತಾ ಬರುತ್ತಿತ್ತು. ಇತ್ತೀಚಿನ ದಿನಮಾನದಲ್ಲಿ ಇದು ಬೆಳಕಿಗೆ ಬರುವುದರ ಮೂಲಕ ಮಧ್ಯ ಕರ್ನಾಟಕದಲ್ಲಿ ಹಬ್ಬವಾಗಿ ರೂಪುಗೊಂಡಿದೆ, ಶಿವರಾತ್ರಿ ಎಂದರೆ ಕಬೀರಾನಂದಾಶ್ರಮ, ನವರಾತ್ರಿ ಎಂದರೆ ಮುರುಘಾ ಮಠ ಎಂಬ ಅರ್ಥದಲ್ಲಿ ಬರುತ್ತಿದೆ. ಇಂದಿನ ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಮಠಾಧಿಶರು ಆಗಮಿಸುವುದರ ಮೂಲಕ ತಮ್ಮ ಮಾತಿನ ಮೂಲಕ ಪಾಂಡಿತ್ಯವನ್ನು ಪ್ರದರ್ಶನ ನೀಡಲಿದ್ದಾರೆ. ಇಂದಿನ ದಿನಮಾನದಲ್ಲಿ ಮಕ್ಕಳಿಗೆ ಸಂಸ್ಕಾರವನ್ನು ಕಲಿಸುವ ಅಗತ್ಯ ಇದೆ. ಮಕ್ಕಳಿಗೆ ಮನೆಯಲ್ಲಿ ಸಂಸ್ಕಾರವನ್ನು ಕಲಿಸುವವರೇ ಮೊಬೈಲ್ ದೂರದರ್ಶನದ ಮೊರೆ ಹೋಗಿದ್ದಾರೆ. ನಮ್ಮ ಮನಸ್ಸುನ್ನು ಸಂಸ್ಕಾರದ ಕಡೆ ಒಲವನ್ನು ಮೂಡಿಸಬೇಕಿದೆ ಎಂದರು.
ಗೋಷ್ಟಿಯಲ್ಲಿ ಕಾರ್ಯದರ್ಶಿ ಪ್ರಶಾಂತ್, ಸಮಿತಿಯ ಉಪಾಧ್ಯಕ್ಷರಾದ ಸಿದ್ದವ್ವನಹಳ್ಳಿ ಪರಮೇಶ್, ಸದಸ್ಯರಾದ ಓಂಕಾರ್, ಪ್ರತಾಪ್ ಜೋಗಿ, ಗೋಪಾಲಸ್ವಾಮಿ ನಾಯ್ಕ್, ನಾಗರಾಜ್ ಸಗಂ ಸತೀಶ್, ರುದ್ರೇಶ್, ನಿರಂಜನ, ತಿಪ್ಪೇಸ್ವಾಮಿ, ಗಣಪತಿ ಶಾಸ್ತ್ರಿ ಸೇರಿದಂತೆ ಇತರರು ಭಾಗವಹಿಸಿದ್ದರು.

 

 

Share. Facebook Twitter Pinterest LinkedIn Tumblr WhatsApp Email
Previous Articleನಿವೃತ್ತ ಐಎಎಸ್ ಅಧಿಕಾರಿಗೆ ಛಲವಾದಿ ಮಹಾಸಭಾದಿಂದ ಶ್ರದ್ಧಾಂಜಲಿ ಸಲ್ಲಿಕೆ
Next Article ಮಾ4 ಮತ್ತು 5 ರಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಸಮ್ಮೇಳನ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.