ಚಳ್ಳಕೆರೆ ನಗರದ ಬಿಸಿನೀರು ಮುದ್ದಪ್ಪ ಪ್ರೌಢಶಾಲಾ ಆವರಣದ ಬಯಲು ರಂಗ ಮಂದಿರದಲ್ಲಿ ನಡೆಯಲಿರುವ ಪ್ರಜಾಧ್ವನಿ ಕಾರ್ಯಕ್ರಮದ ಸ್ಥಳ ಪರಿಶೀಲನೆಯನ್ನು ಶಾಸಕ ರಘು ಮೂರ್ತಿ ನಡೆಸಿದರು.
ಇದೇ 06/02/ 2023 ರಂದು ಚಳ್ಳಕೆರೆ ನಗರದ ಬಿಸಿನೀರು ಮುದ್ದಪ್ಪ ಪ್ರೌಢಶಾಲಾ ಆವರಣದ ಬಯಲು ರಂಗ ಮಂದಿರದಲ್ಲಿ ನಡೆಯಲಿರುವ ಪ್ರಜಾಧ್ವನಿ ಕಾರ್ಯಕ್ರಮ ನಡೆಯಲಿದೆ.ಈ ಸಂದರ್ಭದಲ್ಲಿ ಚಳ್ಳಕೆರೆ ಮತ್ತು ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ವೀರಭದ್ರಯ್ಯ, ಶಶಿಧರ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ರಾಘವೇಂದ್ರ, ನಗರಸಭೆ ಸದಸ್ಯರುಗಳಾದ ರಮೇಶ್ ಗೌಡ, ವಿರುಪಾಕ್ಷಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬುರೆಡ್ಡಿ, ಮುಖಂಡರುಗಳಾದ ವೀರಭದ್ರಪ್ಪ, ಎಚ್ಎಸ್ ಸೈಯದ್, ಅಂಜನಪ್ಪ, ಬೋರಣ್ಣ, ಕೃಷ್ಣಮೂರ್ತಿ, ಹಾಗೂ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.